ರಾಯಚೂರು ನಗರ ಸುತ್ತಿದ ಪಾಲಿಕೆ ಆಯುಕ್ತ ಜುಬಿನ್ ಮೊಹಪಾತ್ರ
ರಾಯಚೂರು , 12 ನವೆಂಬರ್ (ಹಿ.ಸ.) ಆ್ಯಂಕರ್ : ರಾಯಚೂರು ಮಹಾನಗರ ಪಾಲಿಕೆ ಆಯುಕ್ತರಾದ ಜುಬಿನ್ ಮೊಹಪಾತ್ರ ಅವರು ರಾಯಚೂರು ನಗರದಲ್ಲಿ ಸಂಚಾರ ಕೈಗೊಂಡು, ರಸ್ತೆಯಲ್ಲಿನ ತಗ್ಗು ಗುಂಡಿಗಳನ್ನು ಮುಚ್ಚುವ ಕಾರ್ಯ ಮತ್ತು ಚರಂಡಿ ಸರಿಪಡಿಸುವ ಕಾಮಗಾರಿಗಳನ್ನು ಖುದ್ದು ಪರಿಶೀಲಿಸಿದರು. ಪಾಲಿಕೆ ಎಂಜಿನಿಯರಿಂಗ
ರಾಯಚೂರು ಸಿಟಿ ಸುತ್ತಿದ ಪಾಲಿಕೆ ಆಯುಕ್ತ ಜುಬಿನ್ ಮೊಹಪಾತ್ರ


ರಾಯಚೂರು ಸಿಟಿ ಸುತ್ತಿದ ಪಾಲಿಕೆ ಆಯುಕ್ತ ಜುಬಿನ್ ಮೊಹಪಾತ್ರ


ರಾಯಚೂರು ಸಿಟಿ ಸುತ್ತಿದ ಪಾಲಿಕೆ ಆಯುಕ್ತ ಜುಬಿನ್ ಮೊಹಪಾತ್ರ


ರಾಯಚೂರು , 12 ನವೆಂಬರ್ (ಹಿ.ಸ.)

ಆ್ಯಂಕರ್ : ರಾಯಚೂರು ಮಹಾನಗರ ಪಾಲಿಕೆ ಆಯುಕ್ತರಾದ ಜುಬಿನ್ ಮೊಹಪಾತ್ರ ಅವರು ರಾಯಚೂರು ನಗರದಲ್ಲಿ ಸಂಚಾರ ಕೈಗೊಂಡು, ರಸ್ತೆಯಲ್ಲಿನ ತಗ್ಗು ಗುಂಡಿಗಳನ್ನು ಮುಚ್ಚುವ ಕಾರ್ಯ ಮತ್ತು ಚರಂಡಿ ಸರಿಪಡಿಸುವ ಕಾಮಗಾರಿಗಳನ್ನು ಖುದ್ದು ಪರಿಶೀಲಿಸಿದರು.

ಪಾಲಿಕೆ ಎಂಜಿನಿಯರಿಂಗ್ ತಂಡ ಮತ್ತು ಲೋಕೊಪಯೋಗಿ ಇಲಾಖೆಯ ಅಧಿಕಾರಿಗಳೊಂದಿಗೆ ನಗರ ಸುತ್ತಾಡಿದ ಆಯುಕ್ತರು, ಬಾಕಿ ಇರುವ ಎಲ್ಲಾ ರಸ್ತೆಗಳ ಮತ್ತು ಸಿವಿಲ್ ಕಾಮಗಾರಿಗಳನ್ನು ಪೂರ್ಣಗೊಳಿಸಲು ಸಂಬಂಧಿಸಿದ ಇಲಾಖೆಯ ಅಧಿಕಾರಿಗಳಿಗೆ ಮುಂದಿನ 3 ತಿಂಗಳ ಕಾಲವಕಾಶದ ಗಡುವು ವಿದಿಸಿದರು. ನಿಗದಿತ ಅವಧಿಯಲ್ಲಿ ಕಾಮಗಾರಿ ಪೂರ್ಣಗೊಳಿಸಬೇಕೆಂದು ಕಟ್ಟುನಿಟ್ಟಿನ ಸೂಚನೆ ನೀಡಿದರು.

ಈ ವರ್ಷ ಆಗಸ್ಟ್, ಸೆಪ್ಟೆಂಬರ್ ಮತ್ತು ಅಕ್ಟೋಬರ್ ತಿಂಗಳುಗಳಲ್ಲಿ ಸುರಿದ ಭಾರಿ ಮಳೆಯಿಂದಾಗಿ ರಾಯಚೂರು ನಗರದಲ್ಲಿ, ನಿರೀಕ್ಷಿತ ಮಟ್ಟದಲ್ಲಿ ರಸ್ತೆ ಮತ್ತು ಸಿವಿಲ್ ಕಾಮಗಾರಿಗಳನ್ನು ಮಾಡಲು ಸಾಧ್ಯವಾಗಲಿಲ್ಲ. ಹಲವು ವರ್ಷಗಳ ನಂತರ ಮೊದಲ ಬಾರಿಗೆ ಪಾಲಿಕೆಯಿಂದ ರಸ್ತೆ ನಿರ್ವಹಣಾ ಟೆಂಡರ್ ಕರೆಯಲಾಗಿದೆ. ಪಾಲಿಕೆಯಿಂದ 1 ಕೋಟಿ ರೂ.ಗಳ ಟೆಂಡರ್ ಮೊತ್ತದೊಂದಿಗೆ, ರಸ್ತೆಗಳಲ್ಲಿನ ತಗ್ಗು ಗುಂಡಿ ಮುಚ್ಚುವ ಕೆಲಸ ಪ್ರಾರಂಭಿಸಲಾಗಿದೆ. ಈ ಕಾರ್ಯವು ಹಗಲು, ರಾತ್ರಿ ನಡೆಯಬೇಕು. ಕಾಮಗಾರಿಯ ಗುಣಮಟ್ಟದ ಬಗ್ಗೆ ವಿಶೇಷ ಕಾಳಜಿ ವಹಿಸಬೇಕು ಎಂದು ಅವರು ಕಟ್ಟುನಿಟ್ಟಿನ ನಿರ್ದೇಶನ ನೀಡಿದರು.

ಪಾಲಿಕೆಯಿಂದ 8 ಕಾರ್ಯ ನಿರೀಕ್ಷಕರ ತಂಡವನ್ನು ರಚಿಸಲಾಗಿದ್ದು, ತಂಡದವರು ಪ್ರತಿದಿನ 5-6 ಕಾಮಗಾರಿ ಸ್ಥಳಗಳಿಗೆ ಭೇಟಿ ನೀಡಬೇಕು. ನಿಧಾನಗತಿಯ ಕೆಲಸ ಮತ್ತು ಗುಣಮಟ್ಟದ ಬಗ್ಗೆ ಯಾವುದೇ ದೂರುಗಳು ಬಂದಲ್ಲಿ ಕೂಡಲೇ ಸ್ಪಂದಿಸಿ ಯುದ್ಧೋಪಾದಿಯಲ್ಲಿ ಪರಿಹರಿಸಬೇಕು ಎಂದು ಅವರು ತಿಳಿಸಿದರು.

ಎಲ್ಲಾ ಏಜೆನ್ಸಿಗಳ ಕೆಲಸ ಮತ್ತು ಎಂಜಿನಿಯರಿಂಗ್ ತಂಡಗಳು ಮಹಾನಗರ ಪಾಲಿಕೆಯಿಂದ ಅನುಮತಿ ಮತ್ತು ಸ್ಥಳ ಗುರುತು ಪಡೆಯಬೇಕು. ಗುಣಮಟ್ಟದ ಪರಿಶೀಲನೆಯ ನಂತರ ಮಾತ್ರ ಕಾಮಗಾರಿಗಳನ್ನು ವಹಿಸಿಕೊಡಲಾಗುತ್ತದೆ. ಕಾಮಗಾರಿ ಕಳಪೆ ಮತ್ತು ಅವೈಜ್ಞಾನಿಕವಾಗಿದೆ ಎಂದು ಕಂಡುಬಂದಲ್ಲಿ ಪಾಲಿಕೆಯು ಎನ್‍ಒಸಿಯನ್ನು ತಿರಸ್ಕರಿಸುತ್ತದೆ. ಮತ್ತು ಹಸ್ತಾಂತರವನ್ನು ತೆಗೆದುಕೊಳ್ಳುವುದಿಲ್ಲ. ಮತ್ತು ಜಿಲ್ಲಾಧಿಕಾರಿಗಳಿಗೆ ಮತ್ತು ಸಂಬಂಧಪಟ್ಟ ಇಲಾಖಾ ಕಾರ್ಯದರ್ಶಿಗಳಿಗೆ ವರದಿ ಮಾಡುತ್ತದೆ ಎಂದು ಅವರು ತಿಳಿಸಿದರು.

ಜಿಲ್ಲಾಧಿಕಾರಿಗಳಿಂದ ಪರಿಶೀಲನೆ ನಡೆದಿದೆ: ಜಿಲ್ಲಾಧಿಕಾರಿಗಳಾದ ನಿತೀಶ್ ಕೆ ಅವರು ಎರಡು ವಾರಗಳ ಹಿಂದೆ ರಾಯಚೂರಿನ ಮಹಾನಗರ ಪಾಲಿಕೆ ಆಯುಕ್ತರೊಂದಿಗೆ ಲೋಕೋಪಯೋಗಿ ಇಲಾಖೆಯ ವಿವಿಧ ಕಾಮಗಾರಿಗಳ ಕುರಿತು ಪರಿಶೀಲನಾ ಸಭೆ ನಡೆಸಿದ್ದರು. ನಗರ ಮತ್ತು ಜಿಲ್ಲೆಯೊಳಗಿನ ಲೋಕೋಪಯೋಗಿ ಇಲಾಖೆಯ ರಾಜ್ಯ ಮತ್ತು ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗಳನ್ನು ತ್ವರಿತಗೊಳಿಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದ್ದರು. ಲೋಕೋಪಯೋಗಿ ಇಲಾಖೆಯಿಂದ ಕೈಗೊಂಡ ಎಲ್ಲಾ ಮುಖ್ಯ ರಸ್ತೆ ನಿರ್ವಹಣೆ ಮತ್ತು ಹೊಸ ರಸ್ತೆ ನಿರ್ಮಾಣ ಕಾರ್ಯವನ್ನು ಯುದ್ಧೋಪಾದಿಯಲ್ಲಿ ಮಾಡಬೇಕೆಂದು ತಿಳಿಸಿದ್ದರು. ಜಿಲ್ಲಾಧಿಕಾರಿಗಳ ನಿರ್ದೇಶನದಂತೆ ಲೋಕೊಪಯೋಗಿ ಇಲಾಖೆಯ ಅಧಿಕಾರಿಗಳೊಂದಿಗೆ ನಗರ ಸಂಚಾರ ನಡೆಸಿ ರಸ್ತೆ ಕಾಮಗಾರಿಗಳ ಬಗ್ಗೆ ಪರಿಶೀಲನೆ ಮಾಡಲಾಗುತ್ತಿದೆ ಎಂದು ಆಯುಕ್ತರಾದ ಜುಬಿನ್ ಮೊಹಪಾತ್ರ ಅವರು ತಿಳಿಸಿದರು.

ಭೇಟಿ ವೇಳೆ, ಲೋಕೋಪಯೋಗಿ ಇಲಾಖೆಯ ಕಾರ್ಯನಿರ್ವಾಹಕ ಎಂಜಿನಿಯರ್ ವೆಂಕಟೇಶ್ ಗಲಗ, ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ಮಹೇಶ್, ವಿಭಾಗ ಅಧಿಕಾರಿಗಳು ಮತ್ತು ನಿಗಮದ ವಲಯ ಆಯುಕ್ತ ಹೆಬ್ಬಾಳ, ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ರಶ್ಮಿ, ಸಹಾಯಕ ಎಂಜಿನಿಯರ್ ಮಲ್ಲಿಕ್ ಸೈಯದ್, ಕುಂದುಕೊರತೆ ನೋಡಲ್ ಅಧಿಕಾರಿ ಬಾಬಾ ಖಾನ್, ಸಲಹೆಗಾರರಾದ ತಾರಾನಾಥ್ ಮತ್ತು ನಾವೇದ್ ಸೇರಿದಂತೆ ಇತರರು ಇದ್ದರು.

---------------

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande