
ಹನುಮಸಾಗರ, 12 ನವೆಂಬರ್ (ಹಿ.ಸ.) :
ಆ್ಯಂಕರ್ : ಕುಷ್ಟಗಿ ತಾಲ್ಲೂಕಿನ ಹನುಮಸಾಗರ ಗ್ರಾಮದ ಕೆಪಿಎಸ್ ಶಾಲೆಯ ಶಿಕ್ಷಕ ಮೆಹಬೂಬಸಾಬ್ ಕಸಾಬ್ (59) ಅವರು ಬುಧವಾರ ವಿದ್ಯಾರ್ಥಿಗಳಿಗೆ ಪಾಠ ಮಾಡುತ್ತಿರುವಾಗ ಹೃದಯಾಘಾತದಿಂದ ಮೃತಪಟ್ಟಿದ್ದಾರೆ.
ಬುಧವಾರ ಮಧ್ಯಾಹ್ನ 12.20ರ ಸುಮಾರಿಗೆ ಶಿಕ್ಷಕ ಮೆಹಬೂಬಸಾಬ್ ಕಸಾಬ್ ಅವರು ತರಗತಿಯಲ್ಲಿ ಪಾಠ ಮಾಡುತ್ತಿರುವಾಗ ಏಕಾಏಕಿ ಕುಸಿದು ಬಿದ್ದಿದ್ದರಿಂದ ಸಹ ಸಿಬ್ಬಂದಿ ಆಸ್ಪತ್ರೆಗೆ ಕರೆದುಕೊಂಡು ಹೋದರಾದರೂ ಅವರು ಮಾರ್ಗಮಧ್ಯದಲ್ಲಿಯೇ ನಿಧನರಾದರು.
ಶಿಕ್ಷಕ ಮೆಹಬೂಬಸಾಬ್ ಕಸಾಬ್ ಅವರು 2026ರ ಮೇ 31ರಂದು ನಿವೃತ್ತಿಯಾಗುತ್ತಿದ್ದರು. ಮೃತರಿಗೆ ಪತ್ನಿ ಹಾಗೂ ಒಬ್ಬ ಪುತ್ರ ಇದ್ದಾರೆ.
ಹಿಂದೂಸ್ತಾನ್ ಸಮಾಚಾರ್ / ಮನೋಹರ ಯಡವಟ್ಟಿ