ಕಬ್ಬಿನ ದರಕ್ಕೆ ಆಗ್ರಹಿಸಿ ಕಬ್ಬಿನ ಟ್ರ್ಯಾಕ್ಟರ್‌ಗೆ ಬೆಂಕಿ ಹಚ್ಚಿದ ಆಕ್ರೋಶಿತರು
ವಿಜಯಪುರ, 13 ನವೆಂಬರ್ (ಹಿ.ಸ.) : ಆ್ಯಂಕರ್ : ಪ್ರತಿ ಟನ್ ಕಬ್ಬಿಗೆ ₹3,500 ನೀಡಬೇಕು ಹಾಗೂ ಬಾಕಿ ಬಿಲ್‌ಗಳನ್ನು ಪಾವತಿಸಬೇಕು ಎಂದು ಆಗ್ರಹಿಸಿ ರೈತರು ಗುರುವಾರ ಪ್ರತಿಭಟನೆ ನಡೆಸಿದರು. ಬಾಗಲಕೋಟೆ ಜಿಲ್ಲೆಯ ಮುಧೋಳನಲ್ಲಿ ಹೋರಾಟಗಾರರ ತಾಳ್ಮೆಯ ಕಟ್ಟೆ ಒಡೆದ ಪರಿಣಾಮ, ಸಕ್ಕರೆ ಕಾರ್ಖಾನೆಗೆ ಸಾಗಿಸಲು
ಕಬ್ಬು


ವಿಜಯಪುರ, 13 ನವೆಂಬರ್ (ಹಿ.ಸ.) :

ಆ್ಯಂಕರ್ : ಪ್ರತಿ ಟನ್ ಕಬ್ಬಿಗೆ ₹3,500 ನೀಡಬೇಕು ಹಾಗೂ ಬಾಕಿ ಬಿಲ್‌ಗಳನ್ನು ಪಾವತಿಸಬೇಕು ಎಂದು ಆಗ್ರಹಿಸಿ ರೈತರು ಗುರುವಾರ ಪ್ರತಿಭಟನೆ ನಡೆಸಿದರು.

ಬಾಗಲಕೋಟೆ ಜಿಲ್ಲೆಯ ಮುಧೋಳನಲ್ಲಿ ಹೋರಾಟಗಾರರ ತಾಳ್ಮೆಯ ಕಟ್ಟೆ ಒಡೆದ ಪರಿಣಾಮ, ಸಕ್ಕರೆ ಕಾರ್ಖಾನೆಗೆ ಸಾಗಿಸಲು ಸಿದ್ಧವಾಗಿದ್ದ ಟ್ರ್ಯಾಕ್ಟರ್-ಟ್ರಾಲಿಯನ್ನು ಉರುಳಿಸಿ ಕಬ್ಬಿಗೆ ಬೆಂಕಿ ಹಚ್ಚುವ ಮೂಲಕ ಆಕ್ರೋಶ ವ್ಯಕ್ತಪಡಿಸಿದರು.

ಘಟನೆಯಿಂದ ಸ್ಥಳದಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದ್ದು, ಅಲ್ಲದೇ, ಸಮೀರವಾಡಿ ಬಳಿ 20ಕ್ಕೂ ಹೆಚ್ಚು ಕಬ್ಬಿನ ಟ್ರ್ಯಾಕ್ಟರ್‌ಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದರು. ಇನ್ನೂ ಸ್ಥಳದಲ್ಲಿ ಪೊಲೀಸರು ಭದ್ರತೆ ಕಟ್ಟಿ ನಿಲ್ಲಿಸಿದರು.

ಹಿಂದೂಸ್ತಾನ್ ಸಮಾಚಾರ್ / jyothi deshpande


 rajesh pande