ನಾಳೆ ಸಿಐಐ ಪಾಲುದಾರಿಕೆ ಶೃಂಗಸಭೆಯಲ್ಲಿ ಉಪರಾಷ್ಟ್ರಪತಿ ಭಾಗಿ
ನವದೆಹಲಿ, 13 ನವೆಂಬರ್ (ಹಿ.ಸ.) : ಆ್ಯಂಕರ್ : ಆಂಧ್ರ ಪ್ರದೇಶದ ವಿಶಾಖಪಟ್ಟಣದಲ್ಲಿ ನವೆಂಬರ್ 14 ಮತ್ತು 15 ರಂದು ನಡೆಯಲಿರುವ 30ನೇ ಸಿಐಐ (ಭಾರತೀಯ ಕೈಗಾರಿಕಾ ಒಕ್ಕೂಟ) ಪಾಲುದಾರಿಕೆ ಶೃಂಗಸಭೆ 2025ರ ಉದ್ಘಾಟನಾ ಕಾರ್ಯಕ್ರಮದಲ್ಲಿ ಉಪರಾಷ್ಟ್ರಪತಿ ಸಿಪಿ ರಾಧಾಕೃಷ್ಣನ್ ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದ
Vice President


ನವದೆಹಲಿ, 13 ನವೆಂಬರ್ (ಹಿ.ಸ.) :

ಆ್ಯಂಕರ್ : ಆಂಧ್ರ ಪ್ರದೇಶದ ವಿಶಾಖಪಟ್ಟಣದಲ್ಲಿ ನವೆಂಬರ್ 14 ಮತ್ತು 15 ರಂದು ನಡೆಯಲಿರುವ 30ನೇ ಸಿಐಐ (ಭಾರತೀಯ ಕೈಗಾರಿಕಾ ಒಕ್ಕೂಟ) ಪಾಲುದಾರಿಕೆ ಶೃಂಗಸಭೆ 2025ರ ಉದ್ಘಾಟನಾ ಕಾರ್ಯಕ್ರಮದಲ್ಲಿ ಉಪರಾಷ್ಟ್ರಪತಿ ಸಿಪಿ ರಾಧಾಕೃಷ್ಣನ್ ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ.

ಈ ಶೃಂಗಸಭೆಯನ್ನು ಸಿಐಐ, ವಾಣಿಜ್ಯ ಮತ್ತು ಕೈಗಾರಿಕಾ ಸಚಿವಾಲಯದ ಕೈಗಾರಿಕೆ ಮತ್ತು ಆಂತರಿಕ ವ್ಯಾಪಾರ ಉತ್ತೇಜನ ಇಲಾಖೆ (ಡಿಪಿಐಐಟಿ) ಹಾಗೂ ಆಂಧ್ರಪ್ರದೇಶ ಸರ್ಕಾರದ ಸಹಭಾಗಿತ್ವದಲ್ಲಿ ಆಯೋಜಿಸಲಾಗಿದೆ ಎಂದು ಉಪರಾಷ್ಟ್ರಪತಿ ಕಚೇರಿ ತಿಳಿಸಿದೆ.

ತಂತ್ರಜ್ಞಾನ, ವಿಶ್ವಾಸ ಮತ್ತು ವ್ಯಾಪಾರ, ಹೊಸ ಭೌಗೋಳಿಕ-ಆರ್ಥಿಕ ಕ್ರಮವನ್ನು ನ್ಯಾವಿಗೇಟ್ ಮಾಡುವುದು” ಎಂಬ ವಿಷಯದಡಿ ನಡೆಯುವ ಈ ಶೃಂಗಸಭೆಯಲ್ಲಿ ಚಿಂತಕರು, ನೀತಿ ನಿರೂಪಕರು, ಉದ್ಯಮ ನಾಯಕರು ಹಾಗೂ ಜಾಗತಿಕ ಪಾಲುದಾರರು ಭಾಗವಹಿಸಲಿದ್ದಾರೆ.

ಕಾರ್ಯಕ್ರಮದಲ್ಲಿ 45 ಅಧಿವೇಶನಗಳು, 72 ಅಂತಾರಾಷ್ಟ್ರೀಯ ಭಾಷಣಕಾರರು ಭಾಗವಹಿಸಲಿದ್ದು, 45 ದೇಶಗಳಿಂದ 300 ವಿದೇಶಿ ಪ್ರತಿನಿಧಿಗಳನ್ನು ಒಳಗೊಂಡು ಒಟ್ಟು 2,500 ಜನರು ಭಾಗವಹಿಸುವ ನಿರೀಕ್ಷೆಯಿದೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande