
ನವದೆಹಲಿ, 14 ನವೆಂಬರ್ (ಹಿ.ಸ.) :
ಆ್ಯಂಕರ್ : ಭಾರತದ ಮೊದಲ ಪ್ರಧಾನಮಂತ್ರಿ ಪಂಡಿತ ಜವಾಹರಲಾಲ್ ನೆಹರು ಅವರ ಜನ್ಮ ವಾರ್ಷಿಕೋತ್ಸವದ ಅಂಗವಾಗಿ ಇಂದು ದೇಶದಾದ್ಯಂತ ನೆಹರು ಅವರಿಗೆ ಗೌರವ ನಮನ ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ಕೇಂದ್ರ ಕಾಂಗ್ರೆಸ್ ನಾಯಕರು ದೆಹಲಿಯ ಶಾಂತಿವನದಲ್ಲಿರುವ ನೆಹರು ಸಮಾಧಿ ಸ್ಥಳಕ್ಕೆ ಭೇಟಿ ನೀಡಿ ಪುಷ್ಪ ನಮನ ಸಲ್ಲಿಸಿದರು.
ಎಐಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಕೆ.ಸಿ.ವೇಣುಗೋಪಾಲ ಸೇರಿದಂತೆ ಹಲವು ನಾಯಕರು ನೆಹರು ಸಮಾಧಿಗೆ ಗೌರವ ಸಲ್ಲಿಸಿದರು.
ನೆಹರು ಅವರ ಆಡಳಿತ ದಾರ್ಶನಿಕತೆ ಮತ್ತು ರಾಷ್ಟ್ರನಿರ್ಮಾಣದ ದೃಷ್ಟಿ ಇಂದಿಗೂ ದೇಶಕ್ಕೆ ಪ್ರೇರಣೆ. ಅವರ ಮೌಲ್ಯಗಳೇ ಭಾರತದ ಅಭಿವೃದ್ಧಿಗೆ ದಿಕ್ಕು ತೋರಿಸುತ್ತವೆ ಎಂದು ಕಾಂಗ್ರೆಸ್ ನಾಯಕರು ಹೇಳಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa