
ಧಾರವಾಡ, 17 ನವೆಂಬರ್ (ಹಿ.ಸ.):
ಆ್ಯಂಕರ್:
ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯಿಂದ ಅರ್ಹ ಸಾಧಕ ಕ್ರೀಡಾಪಟುಗಳು ಹಾಗೂ ಇತರರಿಂದ ವಿವಿಧ ಪ್ರಶಸ್ತಿ ಮತ್ತು ವಿವಿಧ ಪ್ರೋತ್ಸಾಹಧನ ನೀಡುವ ಯೋಜನೆಗಳಿಗೆ ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ.
ಪ್ರಶಸ್ತಿ ವಿವರ: ಏಕಲವ್ಯ ಪ್ರಶಸ್ತಿ -2024, ಜೀವಮಾನ ಸಾಧನೆ ಪ್ರಶಸ್ತಿ-2024, ಕರ್ನಾಟಕ ಕ್ರೀಡಾ ರತ್ನ ಪ್ರಶಸ್ತಿ -2024, ಕರ್ನಾಟಕ ಕ್ರೀಡಾ ಪೋಷಕ ಪ್ರಶಸ್ತಿ-2024, ಗುರಿ-ಓಲಂಪಿಕ್ ಪದಕ -2025-2026, ನಗದು ಪುರಸ್ಕಾರ -2023 ಮತ್ತು 2024, ಶೈಕ್ಷಣಿಕ ಶುಲ್ಕ ಮರುಪಾವತಿ-2025-26, ಕ್ರೀಡಾ ವಿದ್ಯಾರ್ಥಿ ವೇತನ -2025-26.
ಅರ್ಹ ಕ್ರೀಡಾಪಟುಗಳು https://sevasindhu.karnakata.gov.in ವೆಬ್ಸೈಟ್ ಮೂಲಕ ಡಿಸೆಂಬರ್ 02, 2025 ರೊಳಗಾಗಿ ಅರ್ಜಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: 0836-2447424 ಗೆ ಸಂಪರ್ಕಿಸಬಹುದು ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
---------------
ಹಿಂದೂಸ್ತಾನ್ ಸಮಾಚಾರ್ / Rakesh Mahadevappa