


ರಾಯಚೂರು, 18 ನವೆಂಬರ್ (ಹಿ.ಸ.) :
ಆ್ಯಂಕರ್ : ರಾಯಚೂರು ಒಕ್ಕಲುತನ ಹುಟ್ಟುವಳಿ ಮಾರಾಟ ಹಾಗೂ ಸಂಸ್ಕರಣ ಸಹಕಾರ ಸಂಘದ ನಿರ್ದೇಶಕರಾದ ಶರಬಣ್ಣ ಪಾಟೀಲ್ ಹಾಗೂ ಮೈಸೂರಿನ ಕರ್ನಾಟಕ ರಾಜ್ಯ ಮೀನುಗಾರರ ಸಹಕಾರ ಮಹಾಮಂಡಲ ಸೈಯದ್ ಸಾಬ ಮನ್ಸಲಾಪೂರು ಅವರಿಗೆ ಸಹಕಾರ ರತ್ನ ಪ್ರಶಸ್ತಿ ಲಭಿಸಿದೆ.
ಕರ್ನಾಟಕ ರಾಜ್ಯ ಸಹಕಾರ ಚಳುವಳಿಯ ಬೆಳವಣೆಗೆಗೆ ಇವರು ಸಲ್ಲಿಸಿರುವ ಅವಿರತ ಸೇವೆಗಾಗಿ ಈ ಪುರಸ್ಕಾರ ಲಭಿಸಿದೆ. ಬೆಂಗಳೂರಿನ ಗಾಯಿತ್ರಿ ವಿಹಾರ್ ಮೇಕ್ರಿ ಸರ್ಕಲ್ ಬಳಿಯಲ್ಲಿ ನಡೆದ ಸಮಾರಂಭದಲ್ಲಿ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರು ಸಹಕಾರ ಇಲಾಖೆಯ ಪ್ರತಿಷ್ಠಿತ ಸಹಕಾರ ರತ್ನ ಪ್ರಶಸ್ತಿ ನೀಡಿ ಅಭಿನಂದಿಸಿದರು.
ಅದೇ ರೀತಿ, ರಾಯಚೂರಿನ ಕೃಷಿ ವಿಶ್ವವಿದ್ಯಾಲಯದಲ್ಲಿ ಇತ್ತೀಚೆಗೆ ಜರುಗಿದೆ 72ನೇ ಆಖಿಲ ಭಾರತ ಸಹಕಾರ ಸಪ್ತಾಹ ಕಾರ್ಯಕ್ರಮದಲ್ಲಿ ಸಹ ಶರಬಣ್ಣ ಪಾಟೀಲ್ ಹಾಗೂ ಸೈಯದ್ ಸಾಬ ಇವರಿಗೆ ಸಚಿವರಾದ ಎನ್.ಎಸ್. ಭೋಸರಾಜು, ಶಾಸಕರಾದ ಶಿವರಾಜ್ ಪಾಟೀಲ್, ಬಸನಗೌಡ ದದ್ದಲ್, ಎ.ವಸಂತಕುಮಾರ್ ಹಾಗೂ ಇನ್ನೀತರರು ಸನ್ಮಾನಿಸಿದರು.
ನವೆಂಬರ್ 18ರಂದು ರಾಯಚೂರು ಒಕ್ಕಲುತನ ಹುಟ್ಟುವಳಿ ಮಾರಾಟ ಹಾಗೂ ಸಂಸ್ಕರಣ ಸಹಕಾರ ಸಂಘ ರಾಯಚೂರಿನ ಮುಖ್ಯ ಕಚೇರಿಯಲ್ಲಿ ಸಹ ಶರಬಣ್ಣ ಪಾಟೀಲ್ ಹಾಗೂ ಸೈಯದ್ ಸಾಬ ಅವರಿಗೆ ಸಂಘದ ಅಧ್ಯಕ್ಷ ಪತಂಗೆ ಜಯವಂತರಾವ್, ಉಪಾಧ್ಯಕ್ಷ ಶಶಿಧರ ಪಾಟೀಲ್, ಮಲ್ಲನಗೌಡ ಪಾಟೀಲ್ ಇನ್ನೀತರರು ಸನ್ಮಾನಿಸಿ ಗೌರವಿಸಿದರು.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್