
ವಿಜಯಪುರ, 18 ನವೆಂಬರ್ (ಹಿ.ಸ.) :
ಆ್ಯಂಕರ್ : ಶ್ರೀ ಕ್ಷೇತ್ರ ಗುಡ್ಡಾಪುರ ದಾನಮ್ಮದೇವಿ ಹಾಗೂ ಅರಕೇರಿ ಶ್ರೀ ಅಮೋಘಸಿದ್ಧ ಜಾತ್ರಾ ಅಂಗವಾಗಿ ಜಾತ್ರಾ ಬಸ್ಗಳಿಗೆ ಪೂಜೆ ಸಲ್ಲಿಸಿ, ಚಾಲನೆ ನೀಡಲಾಯಿತು.
ವಿಜಯಪುರ ನಗರದ ಕೇಂದ್ರ ಬಸ್ ನಿಲ್ದಾಣದಲ್ಲಿ ವಿಭಾಗೀಯ ನಿಯಂತ್ರಣಾಧಿಕಾರಿಗಳು ಮತ್ತು ವಿಭಾಗಿಯ ಸಂಚಾರ ಅಧಿಕಾರಿಗಳು ಗುಡ್ಡಾಪುರ ಶ್ರೀ ದಾನಮ್ಮ ದೇವಿ ಹಾಗೂ ಅರಕೇರಿ ಶ್ರೀ ಅಮೋಘಸಿದ್ದ ಜಾತ್ರಾ ಪ್ರಯುಕ್ತ ಪೂಜೆ ನೆರವೇರಿಸಿ ಜಾತ್ರಾ ವಿಶೇಷ ವಾಹನಗಳ ಕಾರ್ಯಾಚರಣೆಗೆ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಭಕ್ತರಿಗೆ ಅನುಕೂಲಕ್ಕಾಗಿ ವಿಶೇಷ ಬಸ್ ವ್ಯವಸ್ಥೆ ಮಾಡಲಾಗಿದೆ. ಭಕ್ತರು ಸಂತಸ ವ್ಯಕ್ತಪಡಿಸಿದ್ದರು.
ಹಿಂದೂಸ್ತಾನ್ ಸಮಾಚಾರ್ / jyothi deshpande