
ಗದಗ, 18 ನವೆಂಬರ್ (ಹಿ.ಸ.) :
ಆ್ಯಂಕರ್ : ಗದಗ ತಾಲೂಕಿನ ಅಸುಂಡಿ ಗ್ರಾಮದಲ್ಲಿ ಮೃಗಾಲಯ ಮುಖ್ಯ ರಸ್ತೆಯಿಂದ ರವಿ ಹುಲಕೋಟಿ ಇವರ ಮನೆವರೆಗಿನ ಸಿಸಿ ರಸ್ತೆ ಕಾಮಗಾರಿಯ ಅಂದಾಜು ಮೊತ್ತ 20 ಲಕ್ಷ. ರೂ.. ವೆಚ್ಚದಲ್ಲಿ, ಅಸುಂಡಿ ಕುರ್ತಕೋಟಿ ಗ್ರಾಮದ 36 ಪ್ಲಾಟ್ ಆಶ್ರಯ ಬಡಾವಣೆ ರಸ್ತೆ ಸುಧಾರಣೆ ಕಾಮಗಾರಿ ಅಂದಾಜು ಮೊತ್ತ 10 ಲಕ್ಷ ರೂ, ಅಸುಂಡಿ ಕುರ್ತಕೋಟಿ ಮುಖ್ಯ ರಸ್ತೆಯಿಂದ ರಾಘವೇಂದ್ರ ಹುಲಕೋಟಿ ಇವರ ಹೊಲದವರೆಗೆ ಸುಧಾರಣೆ ( 0.00 ರಿಂದ 6 ಕಿ.ಮೀ) ಅಂದಾಜು ಮೊತ್ತ 15 ಲಕ್ಷ ವೆಚ್ಚ, ಗದಗ ತಾಲೂಕು ಅಸುಂಡಿ ಕುರ್ತಕೋಟಿ ಮುಖ್ಯ ರಸ್ತೆಯಿಂದ ಬೆಳ್ಳಿಕೊಪ್ಪ ಹನುಮಪ್ಪ ದೇವಸ್ಥಾನಕ್ಕೆ ಹೋಗುವ ರಸ್ತೆ ಸುಧಾರಣೆ ( 0.00 ರಿಂದ 6 ಕಿ.ಮೀ ) ಅಂದಾಜು ಮೊತ್ತ 20 ಲಕ್ಷ ಈ ಕಾಮಗಾರಿಗಳಿಗೆ ರಾಜ್ಯದ ಕಾನೂನು, ನ್ಯಾಯ, ಮಾನವ ಹಕ್ಕುಗಳು, ಸಂಸದೀಯ ವ್ಯವಹಾರಗಳು, ಶಾಸನ ರಚನೆ ಮತ್ತು ಪ್ರವಾಸೋದ್ಯಮ ಸಚಿವರು ಹಾಗೂ ಗದಗ ಜಿಲ್ಲಾ ಉಸ್ತುವಾರಿ ಸಚಿವ ಎಚ್.ಕೆ.ಪಾಟೀಲ ಅವರು ಭೂಮಿ ಪೂಜೆ ನೆರವೇರಿಸಿದರು.
ರಸ್ತೆ ಕಾಮಗಾರಿಗಳು ಗುಣಮಟ್ಟದಿಂದ ಕೂಡಿರಬೇಕು. ನಿಗದಿತ ಕಾಲಾವಧಿಯಲ್ಲಿಯೇ ಕಾಮಗಾರಿಗಳು ಪೂರ್ಣಗೊಳ್ಳಬೇಕು ಎಂದು ಸಚಿವರು ಹೇಳಿದರು.
ಈ ಸಂದರ್ಭದಲ್ಲಿ ಜನಪ್ರತಿನಿಧಿಗಳು, ಗಣ್ಯರು, ಹಿರಿಯರು, ಗ್ರಾಮಸ್ಥರು ಹಾಜರಿದ್ದರು
ಹಿಂದೂಸ್ತಾನ್ ಸಮಾಚಾರ್ / lalita MP