
ಬಳ್ಳಾರಿ, 18 ನವೆಂಬರ್ (ಹಿ.ಸ.) ಆ್ಯಂಕರ್ : ಕಾರ್ಮಿಕರ ಭವಿಷ್ಯ ಸಂಸ್ಥೆ ಬಳ್ಳಾರಿ ಪ್ರಾದೇಶಿಕ ಕಚೇರಿ ವತಿಯಿಂದ ಭವಿಷ್ಯ ನಿಧಿ ನಿಮ್ಮ ಹತ್ತಿರಕ್ಕೆ ಎಂಬ ಅಂಶದಡಿ ನ.27 ರಂದು ಬೆಳಿಗ್ಗೆ 09 ರಿಂದ ಸಂಜೆ 06 ಗಂಟೆಯವರೆಗೆ ಸಂಡೂರು ತಾಲ್ಲೂಕಿನ ಎರಬನಹಳ್ಳಿ ಗ್ರಾಮದ ಸುಲ್ತಾನಪುರ ರಸ್ತೆಯ ಮಿನಿರ ಸ್ಟೀಲ್ಸ್ ಅಂಡ್ ಪವರ್ ಲಿಮಿಟೆಡ್ ಕಾರ್ಖಾನೆಯ ಸಭಾಂಗಣದಲ್ಲಿ ‘ನಿಧಿ ಆಪ್ಕೆ ನಿಕಟ್’ ಕಾರ್ಯಕ್ರಮ ಏರ್ಪಡಿಸಲಾಗಿದೆ.
ಕಾರ್ಯಕ್ರಮದಲ್ಲಿ ಕಾರ್ಮಿಕರ, ಪಿಂಚಣಿದಾರರ ಮತ್ತು ಉದ್ಯೋಗದಾತರರ ಕುಂದು ಕೊರತೆ ಪರಿಹಾರ, ಮಾಹಿತಿ ವಿನಿಮಯ ಮಾಡಿಕೊಳ್ಳಬಹುದು.
ಉದ್ಯೋಗದಾತರ ಕರ್ತವ್ಯ ಮತ್ತು ಜವಾಬ್ದಾರಿಗಳ ಕುರಿತು ಅರಿವು, ಕಾರ್ಮಿಕರಿಗೆ, ಉದ್ಯೋಗದಾತರಿಗೆ, ಪ್ರಧಾನ ಉದ್ಯೋಗದಾತರಿಗೆ ಮತ್ತು ಗುತ್ತಿಗೆದಾರರಿಗೆ ಲಭ್ಯವಿರು ಆನ್ಲೈನ್ ಸೇವೆಗಳ ಮಾಹಿತಿ, ಹೊಸ ಉಪಕ್ರಮಗಳು ಹಾಗೂ ಸುಧಾರಣೆ ಕ್ರಮಗಳ ಕುರಿತು ಮಾಹಿತಿ ಸಹ ಒದಗಿಸಲಾಗುತ್ತದೆ.
ಹಾಗಾಗಿ ಕಾರ್ಮಿಕರು, ಪಿಂಚಣಿದಾರರು, ಉದ್ಯೋಗದಾತರು ನ.27 ರಂದು ನಡೆಯುವ ನಿಧಿ ಆಪ್ಕೆ ನಿಕಟ್ ಕಾರ್ಯಕ್ರಮದಲ್ಲಿ ಭಾಗವಹಿಸಿ ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಪ್ರಾದೇಶಿಕ ಭವಿಷ್ಯ ನಿಧಿ ಬಳ್ಳಾರಿ ಪ್ರಾದೇಶಿಕ ಕಚೇರಿಯ ಆಯುಕ್ತ ಕೆ.ವಿ ಪ್ರವೀಣ್ ಅವರು ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್