
ವಿಜಯಪುರ, 02 ನವೆಂಬರ್ (ಹಿ.ಸ.) :
ಆ್ಯಂಕರ್ : ತುಬಚಿ ಬಬಲೇಶ್ವರ ಯೋಜನೆಯಡಿ ಹಂಚಿಕೆಯಾದ ನಮ್ಮ ಪಾಲಿನ ನೀರನ್ನು ಗರಿಷ್ಠ ಮಟ್ಟದಲ್ಲಿ ಸದ್ಭಳಕೆ ಮಾಡಿಕೊಳ್ಳುವ ನಿಟ್ಟಿನಲ್ಲಿ ಬಾಬಾನಗರದ ಹತ್ತಿರದಲ್ಲಿರುವ ಸರ್ಕಾರಿ ಜಮೀನಿನಲ್ಲಿ ಹೆಚ್ಚಿನ ಸಾಮಥ್ರ್ಯವುಳ್ಳ 0.8 ಟಿಎಂಸಿ ಜಲಸಂಗ್ರಹಗಾರ ನಿರ್ಮಾಣ ಮಾಡಲು ಸಮಗ್ರ ಯೋಜನಾ ವರದಿ ಸಿದ್ಧಪಡಿಸಿ ಸರ್ಕಾರಕ್ಕೆ ಸಲ್ಲಿಸಲಾಗುವುದು ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವರು ಹಾಗೂ ಮೂಲಸೌಕರ್ಯ ಅಭಿವೃದ್ಧಿ ಸಚಿವರು ಮತ್ತು ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಎಂ.ಬಿ.ಪಾಟೀಲ ಅವರು ಹೇಳಿದರು.
ರವಿವಾರ ಬಾಬಾನಗರ ಹತ್ತಿರವಿರುವ ಉದ್ದೇಶಿತ ಯೋಜನಾ ಪ್ರದೇಶಕ್ಕೆ ಅಧಿಕಾರಿಗಳು, ರೈತ ಮುಖಂಡರೊಂದಿಗೆ ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿದ ಅವರು, ಜಲ ಸಂಗ್ರಹಗಾರ ನಿರ್ಮಾಣಕ್ಕೆ ಎಲ್ಲರ ಸಲಹೆ ಸೂಚನೆಗಳನ್ನು ಪಡೆದುಕೊಂಡು ಯಾವುದೇ ತಾಂತ್ರಿಕ ಸಮಸ್ಯೆಗಳಿದ್ದರೂ ಸರಿಪಡಿಸಿಕೊಂಡು ಸಮಗ್ರ ಯೋಜನಾ ವರದಿಯನ್ನು ಸಿದ್ಧಪಡಿಸಿ ಸರ್ಕಾರಕ್ಕೆ ಸಲ್ಲಿಸಲಾಗುವುದು ಎಂದು ಅವರು ಹೇಳಿದರು.
ಈಗಾಗಲೇ ನಾವು ಕೇವಲ ನಮ್ಮ ಪಾಲಿನ 2 ಟಿಎಂಸಿ ನೀರು ಮಾತ್ರ ಬಳಕೆ ಮಾಡಿಕೊಳ್ಳಲಾಗುತ್ತಿದೆ. ಎಫ್ಐಸಿ ಆದ ನಂತರವೂ ಸಹ ಕೇವಲ 3 ಟಿಎಂಸಿ ನೀರು ಮಾತ್ರ ಬಳಕೆಯಾಗುತ್ತದೆ. ಹಾಗಾಗಿ ಉಳಿದ 2.5 ಟಿಎಂಸಿ ನೀರನ್ನು ಮಳೆಯಾಗಲ್ಲಿ ನೀರನ್ನು ಶೇಖರಿಸಿಕೊಂಡು ಗರಿಷ್ಠ ಮಟ್ಟದ ನೀರನ್ನು ಬಳಕೆಗೆ ಮಾಡುವ ನಿಟ್ಟಿನಲ್ಲಿ 0.8 ಟಿಎಂಸಿ ಜಲಸಂಗ್ರಹಾರ ನಿರ್ಮಾಣ ಮಾಡುವ ಯೋಜನೆ ಹಾಕಿಕೊಳ್ಳಲಾಗಿದೆ ಎಂದು ಹೇಳಿದರು.
ತುಬಚಿ ಬಬಲೇಶ್ವರ ಯೋಜನೆಯಡಿ 5.5 ಟಿಎಂಸಿ ನೀರು ಇದ್ದರೂ ಸಹ ಸಂಪೂರ್ಣವಾಗಿ ಬಳಕೆ ಮಾಡಿಕೊಳ್ಳಲು ಸಾಧ್ಯವಾಗಿಲ್ಲ. ಮಳೆಗಾಲದಲ್ಲಿ ಮಾತ್ರ ಏತನೀರಾವರಿ ಮೂಲಕ ನೀರನ್ನು ಒದಗಿಸಲಾಗುತ್ತದೆ. ಬೇಸಿಗೆಯಲ್ಲಿ ಈ ನೀರನ್ನ ಸದ್ಭಳಕೆ ಮಾಡಿಕೊಂಡು ಕೆರೆ-ಹಳ್ಳಗಳಿಗೆ ನೀರೊದಗಿಸಲು, ಉಳಿತಾಯವಾದ ನೀರನ್ನು ಗರಿಷ್ಠ ಮಟ್ಟದಲ್ಲಿ ಸದ್ಭಳಕೆ ಮಾಡುವ ನಿಟ್ಟಿನಲ್ಲಿ ಮಳೆಗಾಲದಲ್ಲಿ ನೀರನ್ನು ಸಂಗ್ರಹಗಾರದಲ್ಲಿ ನೀರನ್ನು ಸಂಗ್ರಹಿಸಿಕೊಂಡು ಬೇಸಿಗೆ ಕಾಲದಲ್ಲಿ ನೀರು ಕೆರೆಗಳಿಗೆ ಹಳ್ಳಕ್ಕೆ ನೀರು ಒದಗಿಸಲು ಯೋಜನೆ ರೂಪಿಸಲಾಗಿದೆ. ಬಾಬಾನಗರದ ಹತ್ತಿರ 500 ಎಕರೆ ಸರ್ಕಾರಿ ಜಮೀನು ಲಭ್ಯವಿದ್ದು, ಜಲ ಸಂಗ್ರಹಗಾರ ನಿರ್ಮಾಣಕ್ಕೆ ಯಾವುದೇ ಭೂಸ್ವಾಧೀನಕ್ಕೆ ಹಣ ವೆಚ್ಚ ಮಾಡುವ ಅವಶ್ಯಕತೆ ಇಲ್ಲ. ತೆಗ್ಗು ಪ್ರದೇಶ, ನೈಸರ್ಗಿಕವಾಗಿ ಇರುವ ಸಂಪನ್ಮೂಲಗಳನ್ನು ಬಳಕೆ ಮಾಡಿಕೊಂಡು ನೀರಿನ ಸದ್ಭಳಕೆ ಮಾಡಿಕೊಳ್ಳಲು ಯೋಜನೆ ಹಾಕಿಕೊಳ್ಳಲಾಗಿದೆ. ಈ ಕುರಿತು ಈಗಾಗಲೇ ಮುಖ್ಯಮಂತ್ರಿಗಳು ಹಾಗೂ ಉಪಮುಖ್ಯಮಂತ್ರಿಗಳಿಗೆ ಮನದಟ್ಟಣೆ ಮಾಡಲಾಗಿದ್ದು, ಮುಂದಿನ ಬಜೆಟ್ನಲ್ಲಿ ಈ ಯೋಜನೆ ಕೈಗೆತ್ತಿಕೊಳ್ಳಲು ಸೂಚಿಸಲಾಗಿದೆ ಎಂದು ಅವರು ಹೇಳಿದರು.
ಕಳೆದ 2013-18ರ ಅವಧಿಯಲ್ಲಿ ತುಬಚಿ ಬಬಲೇಶ್ವರ ಯೋಜನೆಗೆ ಈ ಭಾಗದ ಅತಿ ಎತ್ತರದ ಪ್ರದೇಶವಾದ ಕನಮಡಿ, ಬಾಬಾನಗರ, ಬಿಜ್ಜರಗಿ, ತಿಕೋಟಾ ತಾಲೂಕು ಹಾಗೂ ಸಾವಳಗಿ ತಾಲೂಕಿನ 1.30 ಲಕ್ಷ ಎಕರೆ ಸುಮಾರು 6.3 ಟಿಎಂಸಿ, 5.5 ತಿಕೋಟಾ ಹೋಬಳಿ, ಸಾವಳಿಗೆ 0.8 ಟಿಎಂಸಿ ನೀರೊದಗಿಸಲು 3600 ಕೊಟಿ ರೂ. ವೆಚ್ಚ ಮಾಡಲಾಗಿದೆ. ಈಗಾಗಲೇ ಅಂತರಜಲ ಮಟ್ಟ ಹೆಚ್ಚಾಗಿ ರೈತರು ಸಂತಸದಲ್ಲಿದ್ದಾರೆ. ಎಫ್ಐಸಿ ಯೋಜನೆ ಪೂರ್ಣಗೊಂಡು ಕೆರೆಗಳಿಗೆ ನೀರು ಒದಗಿಸಲಾಗುತ್ತಿದೆ. ಟೆಂಡರ್ ಆಗಿ ಕಾಮಗಾರಿ ನಡೆಯುತ್ತಿದ್ದು, ಮುಂದಿನ 6 ತಿಂಗಳಲ್ಲಿ ಕಾಮಗಾರಿ ಪೂರ್ಣಗೊಂಡು ರೈತರ ಹೊಲಗಳಿಗೆ ನೀರು ಹರಿಸಲಾಗುವುದು ಎಂದು ಅವರು ಹೇಳಿದರು.
ಈ ಸಂದರ್ಭದಲ್ಲಿ ಕರ್ನಾಟಕ ನೀರಾವರಿ ನಿಗಮ ನಿಯಮಿತದ ಬೆಳಗಾವಿ ವೃತ್ತದ ಅಧೀಕ್ಷಕ ಅಭಿಯಂತರ ಬಿ.ಆರ್.ರಾಠೋಡ, ಸಹಾಯಕ ಕಾರ್ಯನಿರ್ವಾಹಕ ಅಭಿಯಂತರ ಅಂಬಣ್ಣ, ನೀರಾವರಿ ತಜ್ಞ ಡಾ. ಹುಗ್ಗಿ ಸೇರಿದಂತೆ ವಿವಿಧ ಅಧಿಕಾರಿಗಳು, ರೈತ ಮುಖಂಡರು, ರೈತರು, ಸಾರ್ವಜನಿಕರು ಉಪಸ್ಥಿತರಿದ್ದರು.
ಹಿಂದೂಸ್ತಾನ್ ಸಮಾಚಾರ್ / jyothi deshpande