ಸಂಶೋಧನೆ, ಪ್ರಕಟಣೆ ನೀತಿಶಾಸ್ತ್ರ ಮತ್ತು ದತ್ತಾಂಶ ವಿಶ್ಲೇಷಣೆ ಕಾರ್ಯಾಗಾರ
ಶಿವಮೊಗ್ಗ, 02 ನವೆಂಬರ್ (ಹಿ.ಸ.) : ಆ್ಯಂಕರ್ : ಬೆಂಗಳೂರು ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿ ವತಿಯಿಂದ ಅಕಾಡೆಮಿ ಕಚೇರಿಯಲ್ಲಿ ನ.11 ರಿಂದ 15 ರವರೆಗೆ “ಸಂಶೋಧನೆ, ಪ್ರಕಟಣೆ ನೀತಿಶಾಸ್ತ್ರ ಮತ್ತು ದತ್ತಾಂಶ ವಿಶ್ಲೇಷಣೆ” ಕುರಿತು 5 ದಿನಗಳ ಕಾರ್ಯಾಗಾರವನ್ನು ಆಯೋಜಿಸಲಾಗಿದೆ. ಈ ಕಾರ್ಯಾಗ
ಸಂಶೋಧನೆ, ಪ್ರಕಟಣೆ ನೀತಿಶಾಸ್ತ್ರ ಮತ್ತು ದತ್ತಾಂಶ ವಿಶ್ಲೇಷಣೆ ಕಾರ್ಯಾಗಾರ


ಶಿವಮೊಗ್ಗ, 02 ನವೆಂಬರ್ (ಹಿ.ಸ.) :

ಆ್ಯಂಕರ್ : ಬೆಂಗಳೂರು ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿ ವತಿಯಿಂದ ಅಕಾಡೆಮಿ ಕಚೇರಿಯಲ್ಲಿ ನ.11 ರಿಂದ 15 ರವರೆಗೆ “ಸಂಶೋಧನೆ, ಪ್ರಕಟಣೆ ನೀತಿಶಾಸ್ತ್ರ ಮತ್ತು ದತ್ತಾಂಶ ವಿಶ್ಲೇಷಣೆ” ಕುರಿತು 5 ದಿನಗಳ ಕಾರ್ಯಾಗಾರವನ್ನು ಆಯೋಜಿಸಲಾಗಿದೆ.

ಈ ಕಾರ್ಯಾಗಾರದಲ್ಲಿ ವಿವಿಧ ಪ್ರತಿಷ್ಠಿತ ಸಂಸ್ಥೆಗಳ ಹೆಸರಾಂತ ವಿಜ್ಞಾನಿಗಳು ಮತ್ತು ತಂತ್ರಜ್ಞಾನಿಗಳು ಉಪನ್ಯಾಸಗಳನ್ನು ನೀಡಲಿದ್ದು, ಆಸಕ್ತ ವಿಜ್ಞಾನ ಪದವಿ, ಸ್ನಾತಕೋತ್ತರ ವಿಜ್ಞಾನ ವಿದ್ಯಾರ್ಥಿಗಳು, ಸಂಶೋಧನಾ ವಿದ್ಯಾರ್ಥಿಗಳು, ಉಪನ್ಯಾಸಕರು/ಪ್ರಾಧ್ಯಾಪಕರು ಹಾಗೂ ವಿಜ್ಞಾನಾಸಕ್ತರು ಭಾಗವಹಿಸಬಹುದಾಗಿದ್ದು, ಆಸಕ್ತರು ನ.05 ರೊಳಗೆ https://forms.gle/UNrBg9wiBzgQBMVD6 ಮೂಲಕ ನೊಂದಾಯಿಸಿಕೊಳ್ಳುವಂತೆ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಆನಂದ್.ಆರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿಗಾಗಿ ಕಾರ್ಯಾಗಾರ ಸಂಯೋಜಕ ಶ್ರೀನಿವಾಸು ವಿ.ಕೆ- ದೂ.ಸಂ;9620767819 ಅಥವಾ ವೆಬ್‌ಸೈಟ್ https://kstacademy.in ಸಂಪರ್ಕಿಸುವುದು.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande