ಕಾನಿಪ ಸಂಘದ ಸದಸ್ಯರಿಗೆ ನೇತ್ರ ಚಿಕಿತ್ಸೆ ಉಚಿತ : ಡಾ.ಪ್ರಭುಗೌಡ
ವಿಜಯಪುರ, 20 ನವೆಂಬರ್ (ಹಿ.ಸ.) : ಆ್ಯಂಕರ್ : ಪ್ರಜಾಪ್ರಭುತ್ವದ ನಾಲ್ಕನೆಯ ಅಂಗವೆಂದು ಕರೆಸಿಕೊಳ್ಳುವ ಪತ್ರಕರ್ತರು ಆಧುನಿಕ ಸಮಾಜದ ಕೈಗನ್ನಡಿಯಂತೆ ಕಾರ್ಯನಿರ್ವಹಿಸುತ್ತಿದ್ದಾರೆಂದು ನೇತ್ರ ತಜ್ಞ ಡಾ.ಪ್ರಭುಗೌಡ ಪಾಟೀಲ ಬಣ್ಣಿಸಿದರು. ನಗರದ ಅನುಗ್ರಹ ಕಣ್ಣಿನ ಆಸ್ಪತ್ರೆಯ ಸಭಾ ಭವನದಲ್ಲಿ ಕಾರ್ಯನಿರತ ಪ
ಕಾನಿಪ


ವಿಜಯಪುರ, 20 ನವೆಂಬರ್ (ಹಿ.ಸ.) :

ಆ್ಯಂಕರ್ : ಪ್ರಜಾಪ್ರಭುತ್ವದ ನಾಲ್ಕನೆಯ ಅಂಗವೆಂದು ಕರೆಸಿಕೊಳ್ಳುವ ಪತ್ರಕರ್ತರು ಆಧುನಿಕ ಸಮಾಜದ ಕೈಗನ್ನಡಿಯಂತೆ ಕಾರ್ಯನಿರ್ವಹಿಸುತ್ತಿದ್ದಾರೆಂದು ನೇತ್ರ ತಜ್ಞ ಡಾ.ಪ್ರಭುಗೌಡ ಪಾಟೀಲ ಬಣ್ಣಿಸಿದರು.

ನಗರದ ಅನುಗ್ರಹ ಕಣ್ಣಿನ ಆಸ್ಪತ್ರೆಯ ಸಭಾ ಭವನದಲ್ಲಿ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾ ನೂತನ ಪದಾಧಿಕಾರಿಗಳಿಗೆ ಏರ್ಪಡಿಸಿದ ಸನ್ಮಾನ ಸಮಾರಂಭದಲ್ಲಿ ಅವರು ಮಾತನಾಡಿದರು.

ತಮ್ಮ ಲೇಖನಿಯ ಮೂಲಕ ಸಮಾಜದ ಕಣ್ತೆರೆಸುವ ಕಾರ್ಯದಲ್ಲಿ ತೊಡಗಿರುವ ಪತ್ರಕರ್ತರ ಕಣ್ಣುಗಳ ರಕ್ಷಣೆಗಾಗಿ ಕಾರ್ಯನಿರತ ಪತ್ರಕರ್ತರ ಸಂಘದ ಎಲ್ಲ ಸದಸ್ಯರಿಗೆ ಶೀಘ್ರದಲ್ಲಿಯೇ ’ಫ್ಯಾಮಿಲಿ ಕಾರ್ಡ್’ ಮಾಡಿಕೊಡುವುದಾಗಿ ತಿಳಿಸಿದ ಅವರು, ಆ ಕಾರ್ಡ್ ಮೂಲಕ ತಮ್ಮ ಆಸ್ಪತ್ರೆಯಲ್ಲಿ ನೇತ್ರ ಚಿಕಿತ್ಸೆಯನ್ನು ಉಚಿತವಾಗಿ ಪಡೆಯಬಹುದು ಎಂದು ಡಾ.ಪ್ರಭುಗೌಡ ಭರವಸೆ ನೀಡಿದರು.

ಕಾರ್ಯಕ್ರಮ ಉದ್ಘಾಟಿಸಿದ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾಧ್ಯಕ್ಷ ಅಶೋಕ ಯಡಳ್ಳಿ ಮಾತನಾಡಿ, ನಾವೆಲ್ಲ ಪದಾದಿಕಾರಿಗಳು ಸೇರಿ ಸಂಘವನ್ನು ಬೇರೆ ದಿಕ್ಕಿನತ್ತ ಮುನ್ನಡೆಸುವ ಯೋಚನೆ - ಯೋಜನೆಯನ್ನು ಹೊಂದಿದ್ದು ಈ ದಿಸೆಯಲ್ಲಿ ಹಿರಿಯ ಪತ್ರಕರ್ತರ, ಗಣ್ಯರ ಸಲಹೆ ಪಡೆದು ಮುಂದುವರಿಯುತ್ತೇವೆ ಎಂಬ ಆಶಯ ವ್ಯಕ್ತಪಡಿಸಿದರು.

ಡಾ.ಪ್ರಭುಗೌಡ ಪಾಟೀಲ ಅವರು ಮೊದಲಿನಿಂದಲೂ ಸಂಘದ ಹಿತೈಷಿಗಳಾಗಿದ್ದವರು. ನಮ್ಮ ರಾಜ್ಯ ಸಮ್ಮೇಳನಕ್ಕೂ ತನು-ಮನ-ಧನದಿಂದ ಪ್ರೋತ್ಸಾಹಿಸಿದವರು. ಈಗ ನಮ್ಮ ಸಂಘದ ಜಿಲ್ಲೆಯ ಪತ್ರಕರ್ತರಿಗೆ ಮತ್ತು ಅವರ ಕುಟುಂಬದವರಿಗೆ ಉಚಿತ ನೇತ್ರ ಚಿಕಿತ್ಸೆಯ ಭಾಗ್ಯ ಕಲ್ಪಿಸಿಕೊಡಲು ಮುಂದೆ ಬಂದಿರುವುದು ಶ್ಲಾಘನೀಯ ಎಂದರು.

ಪತ್ರಕರ್ತರ ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಇಂದುಶೇಖರ ಮಣೂರ ಮಾತನಾಡಿ, ವಿಜಯಪುರ ಜಿಲ್ಲೆ ಮಾತ್ರವಲ್ಲದೇ ಉತ್ತರ ಕರ್ನಾಟಕ ಭಾಗದ ಹಳ್ಳಿ-ಹಳ್ಳಿಗಳಲ್ಲಿ

ಅಸಂಖ್ಯಾತ ಅಂಧರಿಗೆ, ಕಣ್ಣಿನ ತೊಂದರೆ ಇರುವವರಿಗೆ ತಮ್ಮ ಆಸ್ಪತ್ರೆಯಲ್ಲಿ ಉಚಿತ ಚಿಕಿತ್ಸೆ ನೀಡುವ ಮೂಲಕ ಆ ಕುಟುಂಬಗಳ ಬಾಳಿಗೆ ನೇತ್ರ ತಜ್ಞ ಡಾ.ಪ್ರಭುಗೌಡ ಪಾಟೀಲ ಬೆಳಕಿನ ಭಾಗ್ಯ ನೀಡಿದ್ದಾರೆ. ನಾವೆಲ್ಲ ನೂತನ ಪದಾಧಿಕಾರಿಗಳು ಸಂಘವನ್ನು ಅಭಿವೃದ್ಧಿಯ ಬೆಳಕಿನ ಪಥದತ್ತ ಕೊಂಡೊಯ್ಯಲೆಂಬ ಸದಾಶಯದಿಂದ ನಮಗೆ ಈ ಸನ್ಮಾನದ ಗೌರವ ನೀಡಿದ್ದು, ಇದರಿಂದ ತಮ್ಮ ಜವಾಬ್ದಾರಿ ಹೆಚ್ಚಿದೆ ಎಂದು ಅಭಿಪ್ರಾಯಪಟ್ಟರು.

ಶಿಕ್ಷಕ ಕಬೂಲ ಕೊಕಟನೂರ ಮಾತನಾಡಿದರು.

ಇದೇ ವೇಳೆ ಕಾರ್ಯನಿರತ ಪತ್ರಕರ್ತರ ಸಂಘದ ನೂತನ ಪದಾಧಿಕಾರಿಗಳಾದ ಜಿಲ್ಲಾಧ್ಯಕ್ಷ ಅಶೋಕ ಯಡಳ್ಳಿ, ಪ್ರಧಾನ ಕಾರ್ಯದರ್ಶಿ ಇಂದುಶೇಖರ ಮಣೂರ, ಉಪಾಧ್ಯಕ್ಷರಾದ ಶಶಿಕಾಂತ ಮೆಂಡೆಗಾರ, ಸಮೀರ ಇನಾಮದಾರ, ಬಸವರಾಜ ಉಳ್ಳಾಗಡ್ಡಿ, ಖಜಾಂಚಿ ರಾಹುಲ್ ಆಪ್ಟೆ, ಕಾರ್ಯದರ್ಶಿಗಳಾದ ಅವಿನಾಶ ಬಿದರಿ, ವಿನೋದ ಸಾರವಾಡ ಹಾಗೂ ಜಿಲ್ಲಾ ಕಾರ್ಯಕಾರಿ ಸಮಿತಿ ಸದಸ್ಯರಾದ ಗುರುರಾಜ ಗದ್ದನಕೇರಿ, ಸುರೇಶ ಸಿದ್ದಪ್ಪ ತೆರದಾಳ, ಚಿದಂಬರ ಬಿ. ಕುಲಕರ್ಣಿ, ಸುಧೀಂದ್ರ ಕುಲಕರ್ಣಿ, ಸಂಜಯ ಟಿ. ಕೋಳಿ, ಶ್ರೀನಿವಾಸ ಡಿ. ಸೂರಗೊಂಡ, ಗೋಪಾಲ ಜಿ. ಕನಿಮಣಿ, ಶಿವಾನಂದ ಡಿ. ಶಿವಶರಣ, ಯಲಗೊಂಡ ಬೇನೂರ, ಸಂಜಯ ಕೋಳಿ, ಕಲ್ಲಪ್ಪ ಶಿವಶರಣ, ಪ್ರಭು ಕುಮಟಗಿ ಅವರನ್ನು ಡಾ.ಪ್ರಭುಗೌಡ ಪಾಟೀಲ ಸನ್ಮಾನಿಸಿ, ಗೌರವಿಸಿದರು.

ಆಸ್ರತ್ರೆಯ ಸಿಬ್ಬಂದಿ ದತ್ತಾತ್ರೇಯ ಸ್ವಾಗತಿಸಿ, ನಿರೂಪಿಸಿದರು. ಡಾ.ವಿಶ್ವನಾಥ ವಂದಿಸಿದರು.

ಹಿಂದೂಸ್ತಾನ್ ಸಮಾಚಾರ್ / jyothi deshpande


 rajesh pande