ದೊಡ್ಡ ಕರುಳು ಮತ್ತು ಗುದದ್ವಾರದ ಶಸ್ತ್ರ ಚಿಕಿತ್ಸಕರ ಸಂಘದ ಸಹಯೋಗದಲ್ಲಿ ಜನಜಾಗೃತಿ ಜಾಥಾ
ವಿಜಯಪುರ, 21 ನವೆಂಬರ್ (ಹಿ.ಸ.) : ಆ್ಯಂಕರ್ : ವಿಶ್ವ ಮೂಲವ್ಯಾದಿ ದಿನದ ಅಂಗವಾಗಿ ನಗರದ ಬಿ.ಎಲ್.ಡಿ.ಇ ಡೀಮ್ಡ್ ವಿಶ್ವವಿದ್ಯಾಲಯ ಶ್ರೀ ಬಿ ಎಂ ಪಾಟೀಲ ವೈದ್ಯಕೀಯ ಮಹಾವಿದ್ಯಾಲಯದ ಶಸ್ತ್ರ ಚಿಕಿತ್ಸೆ ವಿಭಾಗ, ಜಿಲ್ಲಾ ಶಸ್ತ್ರ ಚಿಕಿತ್ಸಕರ ಸಂಘ, ಭಾರತೀಯ ವೈದ್ಯಕೀಯ ಸಂಘ ಹಾಗೂ ಭಾರತೀಯ ದೊಡ್ಡ ಕರುಳು ಮತ್ತು
ಜಾಗೃತಿ


ವಿಜಯಪುರ, 21 ನವೆಂಬರ್ (ಹಿ.ಸ.) :

ಆ್ಯಂಕರ್ : ವಿಶ್ವ ಮೂಲವ್ಯಾದಿ ದಿನದ ಅಂಗವಾಗಿ ನಗರದ ಬಿ.ಎಲ್.ಡಿ.ಇ ಡೀಮ್ಡ್ ವಿಶ್ವವಿದ್ಯಾಲಯ ಶ್ರೀ ಬಿ ಎಂ ಪಾಟೀಲ ವೈದ್ಯಕೀಯ ಮಹಾವಿದ್ಯಾಲಯದ ಶಸ್ತ್ರ ಚಿಕಿತ್ಸೆ ವಿಭಾಗ, ಜಿಲ್ಲಾ ಶಸ್ತ್ರ ಚಿಕಿತ್ಸಕರ ಸಂಘ, ಭಾರತೀಯ ವೈದ್ಯಕೀಯ ಸಂಘ ಹಾಗೂ ಭಾರತೀಯ ದೊಡ್ಡ ಕರುಳು ಮತ್ತು ಗುದದ್ವಾರದ ಶಸ್ತ್ರ ಚಿಕಿತ್ಸಕರ ಸಂಘದ ಸಹಯೋಗದಲ್ಲಿ ಜನಜಾಗೃತಿ ಜಾಥಾ ನಡೆಯಿತು.

ನಗರದ ಗಾಂಧಿ ಚೌಕಿನಿಂದ ಗಗನ ಮಹಲವರೆಗೆ ಆಯೋಜಿಸಿದ ವಾಕಾಥಾನ್ ದಲ್ಲಿ ಮೂಲವ್ಯಾಧಿ ರೋಗದ ಜನಜಾಗೃತಿಯ ಕುರಿತು ಭಿತ್ತಿ ಪತ್ರಗಳನ್ನು ಪ್ರದರ್ಶಿಸಿ ಸಾರ್ವಜನಿಕರಿಗೆ ಕರಪತ್ರಗಳನ್ನು ಹಂಚಲಾಯಿತು.

ಗಗನ ಮಹಲ ಉದ್ಯಾನದಲ್ಲಿ ನಡೆದ ಜನಜಾಗೃತಿ ಶಿಬಿರದಲ್ಲಿ ಮಾತನಾಡಿದ ಶಸ್ತ್ರ ಚಿಕಿತ್ಸೆ ವಿಭಾಗದ ಮುಖ್ಯಸ್ಥರಾದ ಡಾ. ಮಂಜುನಾಥ ಕೋಟೆಣ್ಣವರ, ಮಲಬದ್ಧತೆ ಮೂಲವ್ಯಾಧಿ ರೋಗಕ್ಕೆ ಮುಖ್ಯ ಕಾರಣವಾಗಿದೆ. ಹೆಚ್ಚಿನ ನಾರಿನಂಶ ಮತ್ತು ನೀರಿನಂಶ ಅಧಿಕವಿರುವ ಹಣ್ಣು, ತರಕಾರಿ ಸೇವನೆಯಿಂದ ಮೂಲವ್ಯಾಧಿಯನ್ನು ದೂರವಿಡಬಹುದು. ನಿಯಮಿತ ಮಾಂಸಾಹಾರ ಸೇವನೆ ಒಳ್ಳೆಯದಲ್ಲ. ಪ್ರತಿನಿತ್ಯ ನಿಯಮಿತ ವ್ಯಾಯಾಮ, ಆರೋಗ್ಯಕರ ಜೀವನಶೈಲಿ ಪಾಲನೆ ಮತ್ತು ದುಶ್ಚಟಗಳಿಂದ ದೂರವಿರಬೇಕು ಎಂದು ಹೇಳಿದರು.

ಭಾರತೀಯ ದೊಡ್ಡ ಕರುಳು ಮತ್ತು ಗುದದ್ವಾರದ ಶಸ್ತ್ರ ಚಿಕಿತ್ಸಕರ ಸಂಘದ ಸಹಕಾರ್ಯದರ್ಶಿ ಡಾ. ಜಸ್ಪಾಲಸಿಂಗ್ ತೆಹಲಿಯಾ ಪ್ರಾಸ್ತಾವಿಕವಾಗಿ ಮಾತನಾಡಿ, ಜನಸಾಮಾನ್ಯರಲ್ಲಿ ಮೂಲವ್ಯಾದಿಯ ಬಗ್ಗೆ ಅರಿವು ಮೂಡಿಸುವುದು ಈ ಕಾರ್ಯಕ್ರಮದ ಉದ್ದೇಶವಾಗಿದೆ. ಶೌಚಾಲಯದಲ್ಲಿ ಮಲವಿಲರ್ದನೆಗಾಗಿ 10-15 ನಿಮಿಷಕ್ಕಿಂತ ಹೆಚ್ಚು ಸಮಯ ವ್ಯಯಿಸಬಾರದು. ಭಾರತೀಯ ಶೈಲಿಯ ಶೌಚಾಲಯಗಳು ಮೂಲವ್ಯಾಧಿಯನ್ನು ತಡೆಯಲು ಉತ್ತಮವಾಗಿವೆ. ಮಲದಲ್ಲಿ ರಕ್ತ ಬೀಳುವುದು ಇದರ ಮುಖ್ಯ ಲಕ್ಷಣವಾಗಿದ್ದು, ಸೀಳು ಮೂಲವ್ಯಾಧಿ ಮತ್ತು ಗುದದ್ವಾರದ ಕ್ಯಾನ್ಸರ್ ಸಹ ಆಗಿರಬಹುದು. ಆದ್ದರಿಂದ ಯಾವುದೇ ನಾಚಿಕೆ, ಸಂಕೋಚಪಡದೆ ತಜ್ಞ ವೈದ್ಯರನ್ನು ಸಂಪರ್ಕಿಸಿ ಸೂಕ್ತ ಚಿಕಿತ್ಸೆ ಪಡೆಯಬೇಕು ಎಂದು ಹೇಳಿದರು.

ಅಲ್ ಅಮೀನ್ ವೈದ್ಯಕೀಯ ಮಹಾವಿದ್ಯಾಲಯ ಆಸ್ಪತ್ರೆಯ ಅಧೀಕ್ಷಕ ಡಾ. ಜಿಲಾನಿ ಅವಟಿ ಮಾತನಾಡಿ, ವಿಶ್ವ ಮೂಲವ್ಯಾಧಿ ದಿನಾಚರಣೆಯ ಅಂಗವಾಗಿ ನಗರದ ಬಿ.ಎಲ್.ಡಿ.ಇ, ಅಲ್- ಅಮೀನ್ ಮತ್ತು ಜಿಲ್ಲಾಸ್ಪತ್ರೆಗಳಲ್ಲಿ ಉಚಿತ ತಪಾಸಣೆ ಮತ್ತು ಚಿಕಿತ್ಸೆ ಶಿಬಿರಗಳನ್ನು ಆಯೋಜಿಸಲಾಗಿದೆ. ಜಿಲ್ಲೆಯ ಮತ್ತು ಸುತ್ತಮುತ್ತಲಿನ ಜಿಲ್ಲೆಗಳ ಜನರು ಸದುಪಯೋಗ ಪಡೆದುಕೊಳ್ಳಬೇಕೆಂದು ಹೇಳಿದರು.

ಈ ಸಂದರ್ಭದಲ್ಲಿ ಭಾರತೀಯ ವೈದ್ಯಕೀಯ ಸಂಘದ ಅಧ್ಯಕ್ಷ ಡಾ. ಗಿರೀಶ ಕುಲ್ಲೊಳ್ಳಿ ಅಲ್ ಅಮೀನ್ ವೈದ್ಯಕೀಯ ಮಹಾವಿದ್ಯಾಲಯ ಶಸ್ತ್ರ ಚಿಕಿತ್ಸೆ ವಿಭಾಗದ ಮುಖ್ಯಸ್ಥ ಡಾ. ಸಾಜಿದ ಮುಧೋಳ, ಜಿಲ್ಲಾ ಶಸ್ತ್ರ ಚಿಕಿತ್ಸಕರ ಸಂಘದ ಅಧ್ಯಕ್ಷ ಡಾ. ಅಶೋಕ ಜಾಧವ, ಕಾರ್ಯದರ್ಶಿ ಡಾ. ರಮಾಕಾಂತ.ಬಳೂರಕರ, ಡಾ. ಎಂ. ಬಿ. ಪಾಟೀಲ, ಡಾ. ವಿಕ್ರಂ.ಸಿಂದಗಿಕರ, ಡಾ. ಶೈಲೇಶ ಕನ್ನೂರ, ಡಾ. ವಿಜಯ ಪಾಟೀಲ, ಸ್ನಾತಕೋತ್ತರ ವೈದ್ಯಕೀಯ ವಿದ್ಯಾರ್ಥಿಗಳು ಮತ್ತು ಕಿರಿಯ ವೈದ್ಯರು ಉಪಸ್ಥಿತರಿದ್ದರು.

ಹಿಂದೂಸ್ತಾನ್ ಸಮಾಚಾರ್ / jyothi deshpande


 rajesh pande