
ಗದಗ, 23 ನವೆಂಬರ್ (ಹಿ.ಸ.) :
ಆ್ಯಂಕರ್ : ಗದಗ ಜಿಲ್ಲೆ ಲಕ್ಷ್ಮೇಶ್ವರ ಪಟ್ಟಣದ ಪೊಲೀಸ್ ವ್ಯಾಪ್ತಿಯ ಲಕ್ಷ್ಮೀ ನಗರದಲ್ಲಿ ಅಕ್ಟೋಬರ್ 29ರಂದು ನಡೆದಿದ್ದ ಮನೆ ಕಳವು ಪ್ರಕರಣವನ್ನು ಪೊಲೀಸರು ಭೇದಿಸಿದ್ದಾರೆ. ಮನೆಯ ಹಿತ್ತಲ ಬಾಗಿಲು ಮುರಿದು ಒಳನುಗ್ಗಿ ಬಂಗಾರ-ಬೆಳ್ಳಿ ಆಭರಣಗಳನ್ನು ಕಳವು ಮಾಡಿದ ಆರೋಪಿಯನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.
ಹೋಟೆಲ್ನಲ್ಲಿ ಕೂಲಿ ಕೆಲಸ ಮಾಡುತ್ತಿದ್ದ ದ್ಯಾಮಣ್ಣ ಗಂಗಪ್ಪ ಕಂಬಳಿ ಎಂಬ ಆರೋಪಿ ಬಂಧಿತನಾಗಿದ್ದು, ಅವನಿಂದ 17 ಗ್ರಾಂ ಬಂಗಾರದ ಆಭರಣಗಳು ಹಾಗೂ 55 ಗ್ರಾಂ ತೂಕದ ಬೆಳ್ಳಿ ಆಭರಣಗಳು ಸೇರಿ ಒಟ್ಟು ಸುಮಾರು ₹1,25,000 ಮೌಲ್ಯದ ವಸ್ತುಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.
ಈ ಪ್ರಕರಣ ಭೇದನೆಗೆ ಎಸ್ಪಿ ರೋಹನ್ ಜಗದೀಶ ಮತ್ತು ಡಿಎಸ್ಪಿ ಮುರ್ತುಜಾ ಖಾದ್ರಿ ಅವರ ಮಾರ್ಗದರ್ಶನ ಲಭಿಸಿದ್ದು, ಸಿಪಿಐ ಬಿ.ವಿ. ನ್ಯಾಮಗೌಡ ನೇತೃತ್ವದಲ್ಲಿ ಪಿಎಸ್ಐ ನಾಗರಾಜ ಗಡಾದ, ಟಿ.ಕೆ. ರಾಠೋಡ ಹಾಗೂ ಸಿಬ್ಬಂದಿ ಎಂ.ಎ. ಶೇಖ, ಆರ್.ಎಸ್. ಯರಗಟ್ಟಿ, ಎಂ.ಎಸ್. ಬಳ್ಳಾರಿ, ಎ.ಆರ್. ಕಮ್ಮಾರ, ಎಚ್.ಬಿ. ಗುಡ್ಡಣ್ಣವರ, ಸಿ.ಎಸ್. ಮಠಪತಿ, ಡಿ.ಎಸ್. ನದಾಫ್, ಪಾಂಡುರಂಗರಾವ್, ಎಚ್.ಐ. ಕಲ್ಲನ್ನವರ್, ಎಂ.ಆರ್. ಧಾರವಾಡ, ಎಂ.ಎಸ್. ಅಂಗಡಿ, ಎನ್.ಎಚ್. ಮಠಪತಿ, ಎಎಸ್ಐ ಗುರು ಬೂದಿಹಾಳ, ಸಂಜೀವ ಕೊರಡೂರ ಮತ್ತು ಅಪ್ಪಣ್ಣ ರಾಠೋಡ ಅವರನ್ನು ಒಳಗೊಂಡ ವಿಶೇಷ ತಂಡ ಕಾರ್ಯನಿರ್ವಹಿಸಿತು.
ಪ್ರಕರಣವನ್ನು ಯಶಸ್ವಿಯಾಗಿ ಭೇದಿಸಿದ ಪೊಲೀಸರ ತಂಡವನ್ನು ಎಸ್ಪಿ ರೋಹನ್ ಜಗದೀಶ ಮತ್ತು ಡಿಎಸ್ಪಿ ಮುರ್ತುಜಾ ಖಾದ್ರಿ ಅಭಿನಂದಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / lalita MP