ರಾಜ್ಯದಲ್ಲಿ ಆಡಳಿತ ಕುಸಿದು ಹೋಗಿದೆ ಎಂಪಿ ಕಾರಜೋಳ
ಮುಖ್ಯಮಂತ್ರಿ
ಕಾರಜೋಳ


ವಿಜಯಪುರ, 24 ನವೆಂಬರ್ (ಹಿ.ಸ.) :

ಆ್ಯಂಕರ್ : ರಾಜ್ಯದಲ್ಲಿ ಆಡಳಿತ ಕುಸಿದು ಹೋಗಿದೆ. ಕುರ್ಚಿ ಕಾದಾಟಕ್ಕೆ ಕಾಂಗ್ರೆಸ್ ನಲ್ಲಿ ಮೂರು ಗುಂಪಾಗಿ ಹೋರಾಟ ಮಾಡ್ತಿವೆ ಎಂದು ಬಿಜೆಪಿ ಸಂಸದ ಗೋವಿಂದ ಕಾರಜೋಳ ಹೇಳಿದರು.

ವಿಜಯಪುರ ನಗರದಲ್ಲಿ ನಡೆದ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಆಡಳಿತ ನಿಷ್ಕ್ರಿಯವಾಗಿದೆ. ರೈತರು ಕಂಗಾಲಾಗಿದ್ದಾರೆ. ಮೆಕ್ಕೆಜೋಳ ಬೆಳೆದ ರೈತರು ಖರೀದಿ ಕೇಂದ್ರ, ದರ ಸಿಗದೆ ಪರದಾಡ್ತಿದ್ದಾರೆ. ಇತ್ತ ಕಡೆಗೆ ಕುರ್ಚಿಗಾಗಿ ಕಾಂಗ್ರೆಸ್ ಪ್ರತಿನಿತ್ಯ ಹೋರಾಟ ಮಾಡ್ತಿದ್ದಾರೆ ಎಂದು ಕಿಡಿಕಾರಿದರು.

ಮುಖ್ಯಮಂತ್ರಿ ಸ್ಥಾನಕ್ಕಾಗಿ ಕುದುರೆ ವ್ಯಾಪಾರ ಜೋರು ಆಗಿದೆ ಎಂದು ಕಾರಜೋಳ ಹೊಸ ಬಾಂಬ್ ಸಿಡಿಸಿದರು. ಈಗ ಕುದುರೆ ವ್ಯಾಪಾರ ಜೋರಾಗಿದೆ. ಶಾಸಕರಿಗೆ 50 ಕೋಟಿಗೆ ಆಫರ್, ನಿನ್ನೆ 70 ಕೋಟಿ ಆಫರ್ ನಡೆದಿದೆ.‌ ಈ ವಾರದಲ್ಲಿ ನೂರು ಕೋಟಿ ತಲುಪಲಿದೆ ಎಂದರು.

ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅಸಹಾಯಕರಾಗಿದ್ದಾರೆ. ತಾವೇ ಅಸಹಾಯಕತೆ ತೋಡಿಕೊಂಡಿದ್ದಾರೆ. ಕಾಂಗ್ರೆಸ್ ದಲಿತರನ್ನು ಯಾವ ರೀತಿ ನಡೆಸಿಕೊಳ್ತಿದ್ದಾರೆ ಗೊತ್ತಾಗ್ತಿದೆ. ಕಾಂಗ್ರೆಸ್ ನಲ್ಲಿ ಸೋನಿಯಾ ಗಾಂಧಿ, ರಾಹುಲ್, ಪ್ರೀಯಂಕಾ ಸರ್ವಾಧಿಕಾರಿಯಾಗಿದ್ದಾರೆ. ದಲಿತರು ಕಾಂಗ್ರೆಸ್ ಗುಲಾಮಗಿರಿ ಬಿಡಬೇಕು. ಅಸ್ಪೃಶ್ಯರನ್ನ ಮನುಷ್ಯರೆಂದು ಕಾಂಗ್ರೆಸ್ ತಿಳಿದುಕೊಂಡಿಲ್ಲ. ವಂಶಪಾರಂಪರ್ಯ ಆಡಳಿತ ದೇಶದ ದಲಿತರನ್ನ ಗೌರವದಿಂದ ಬಾಳುವಂತೆ ಮಾಡಿಲ್ಲ ಎಂದರು.

ಮುನಿಯಪ್ಪ ಆಗಲಿ ಎಂದು ಪರಮೇಶ್ವರ, ಪರಮೇಶ್ವರ ಹೆಸರು ಮುನಿಯಪ್ಪ ಹೇಳ್ತಿದ್ದಾರೆ. ಇವರ ಹೆಸರನ್ನೆ ಯಾರು ಹೇಳ್ತಿಲ್ಲ, ತಾವು ರೇಸಲ್ಲಿದ್ದೀವಿ ಎಂದು ಹೇಳಿಕೊಳ್ತಿದ್ದಾರೆ. ಇದು ದಲಿತರ ಸ್ವಾಭಿಮಾನಕ್ಕೆ ಧಕ್ಕೆ ತರುತ್ತದೆ. ಪರಮೇಶ್ವರ, ಮುನಿಯಪ್ಪ ದಲಿತರ ಸ್ವಾಭಿಮಾನಕ್ಕೆ ಧಕ್ಕೆ ಮಾಡಿದ್ದಾರೆ. ಕಾಂಗ್ರೆಸ್ ನವರು ದಲಿತರನ್ನ ಮುಖ್ಯಮಂತ್ರಿ ಮಾಡಲ್ಲ, ಬಾಂಡ್ ಮೇಲೆ ಬರೆದು ಕೊಡ್ತಿನೆಂದರು.

ತೂಕ ಜಾಸ್ತಿ ಇದ್ದವರನ್ನು ಮುಖ್ಯಮಂತ್ರಿ ಮಾಡ್ತಾರೆ. ತೂಕ ಯಾರದ್ದು ಜಾಸ್ತಿ ಆಗತ್ತೆ ನೋಡ್ತಿದ್ದಾರೆ. ಸಿದ್ದರಾಮಯ್ಯ ರಾಜಕೀಯ ಗೊಂದಲ ಬಿಡಬೇಕು. ನೇರವಾಗಿ ರೈತರು, ಪ್ರವಾಹದಿಂದ ಹಾನಿಯಾದವರಿಗೆ ಪರಿಹಾರ ನೀಡಲಿ. ಮುಖ್ಯಮಂತ್ರಿ, ರಾಜಕಾರಣ ಬಿಟ್ಟು ಪ್ರವಾಹ ಸಂತ್ರಸ್ತರ, ರೈತರ ಸಹಾಯಕ್ಕೆ ಬರಲಿ. ಸರ್ಕಾರ ತಕ್ಷಣವೇ ಬೆಳೆ ಪರಿಹಾರ ಕೊಡಲಿ, ಮೆಕ್ಕೆಜೋಳ ಖರೀದಿ ಮಾಡಲಿ ಎಂದರು. ಇನ್ನು 2.5 ವರ್ಷ ಒಪ್ಪಂದ ಮೊದಲೇ ಆಗಿದೆ. ಸಿದ್ದರಾಮಯ್ಯ ಒಪ್ಪಂದದಂತೆ ಬಿಡ್ತಿನಿ ಎನಬಹುದಿತ್ತು. ಎಂದರು.

ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹೇಳಿರಬೇಕು, ಹಾಗೇ ಕೇಳ್ತಿದ್ದಾರೆ. ಕಾಂಗ್ರೆಸ್ ನಲ್ಲಿ ಮುಖ್ಯಮಂತ್ರಿ ಗದ್ದುಗೆ ಗುದ್ದಾಟದ ನಡುವೆ ಬಿಜೆಪಿ ಸರ್ಕಾರ ರಚನೆ ವಿಚಾರ ಪ್ರತಿಕ್ರಿಯೆ ನೀಡಿದ ಅವರು, ನಾವು ಸರ್ಕಾರ ರಚನೆ ಮಾಡಲ್ಲ. ಯಾವುದೇ ಕಾರಣಕ್ಕೆ ಸರ್ಕಾರ ರಚನೆ ಮಾಡಲ್ಲ. ಸರ್ಕಾರ ಮಾಡಲು ನಾವು ಇಂಟರೆಸ್ಟೆಡ್ ಇಲ್ಲ. ಈಗಿರೋದು ಜನ ವಿರೋಧಿ ಸರ್ಕಾರ. ಈ ಸರ್ಕಾರ ಹೋಗಬೇಕು ಎಂದು ಜನರ ಜೊತೆಗೆ ಧ್ವನಿ‌ಕೂಡಿಸುತ್ತೇವೆ ಎಂದರು.

ಡಿಕೆಶಿ ಅಮೀತ್ ಶಾ ಭೇಟಿ ಸುಳ್ಳು, ಭೇಟಿ ಆಗಿಲ್ಲ. ಬಡವರು, ದಲಿತರು ಕಾಂಗ್ರೆಸ್ ಗ್ಯಾರಂಟಿಗೆ ಮೋಸ ಹೋದ್ರು, ಗ್ಯಾರಂಟಿ ಹೆಸರಲ್ಲಿ ಅಧಿಕಾರಕ್ಕೆ ಬಂದು ಅಭಿವೃದ್ಧಿಗೆ ಹಣ ಕೊಟ್ಟಿಲ್ಲ. ರಸ್ತೆ ಹದಗೆಟ್ಟು ಹೋಗಿವೆ. ಕಾಂಗ್ರೆಸ್ ನಲ್ಲಿ ಮೂರು ಗುಂಪು ಆಗಿವೆ ಸಿದ್ದರಾಮಯ್ಯ ಒಂದು ಗುಂಪು, ಡಿಕೆ ಗುಂಪು, ಲಿಂಗಾಯತರ ಗುಂಪು ಆಗಿದೆ. ಆದರೆ, ದಲಿತರು ಈಗ ಲೆಕ್ಕಕ್ಕಿಲ್ಲ.‌ ಕಾಂಗ್ರೆಸ್ ಹೈಕಮಾಂಡ್ ಸರ್ಕಾರವನ್ನು ಹರಾಜಿಗೆ ಇಟ್ಟಿದೆ. ಹರಾಜಿನಲ್ಲಿ ಬಿಡ್ ಜಾಸ್ತಿ ಯಾರದ್ದು ಆಗತ್ತೊ ಅವರಿಗೆ ಅಧಿಕಾರ ಎಂದರು.

ಹಿಂದೂಸ್ತಾನ್ ಸಮಾಚಾರ್ / jyothi deshpande


 rajesh pande