
ಕೋಲಾರ, ೨೪ ನವೆಂಬರ್ (ಹಿ.ಸ) :
ಆ್ಯಂಕರ್ : ಪ್ರಥಮ ಉಪ ಪ್ರಧಾನಿ ಉಕ್ಕಿನ ಮನುಷ್ಯ ಸರ್ದಾರ್ ವಲ್ಲಭಬಾಯ್ ಪಟೇಲ್ ಭಾರತ ಕಂಡ ಮಹಾನ್ ಅಪ್ರತಿಮ ದೇಶಭಕ್ತ ಎಂದು ಸಂಸದ ಎಂ ಮಲ್ಲೇಶ್ ಬಾಬು ಅಭಿಪ್ರಾಯಪಟ್ಟರು.
ಭಾರತ ಸರ್ಕಾರದ ಯುವಜನ ವ್ಯವಹಾರ ಮತ್ತು ಕ್ರೀಡಾ ಸಚಿವಾಲಯದಿಂದ ಭಾರತದ ಉಕ್ಕಿನ ಮನುಷ್ಯ ಸರ್ದಾರ್ ವಲ್ಲಬಾಯ್ ಪಟೇಲ್ ಅವರ ೧೫೦ನೇ ಜನ್ಮದಿನದ ಅಂಗವಾಗಿ ಕೋಲಾರದಲ್ಲಿ ಆಯೋಜಿಸಲಾಗಿದ್ದ ಏಕತಾ ನಡಿಗೆ ಪಾದಯಾತ್ರೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
“ಭಾರತದ ಏಕೀಕರಣಕ್ಕೆ ಕಾರಣವಾದ ಸರ್ದಾರ್ ವಲ್ಲಬಾಯ್ ಪಟೇಲ್ ಅವರ ಜನ್ಮದಿನಾಚರಣೆ ಪ್ರಯುಕ್ತ ದೇಶಾದ್ಯಂತ ಪಾದಯಾತ್ರೆಯನ್ನು ಆಯೋಜಿಸಲಾಗಿದೆ. ಕೇಂದ್ರದ ಯುವಜನ ವ್ಯವಹಾರ ಮತ್ತು ಕ್ರೀಡಾ ಸಚಿವಾಲಯದಿಂದ ಪಾದಯಾತ್ರೆ ದೇಶಾದ್ಯಂತ ಆಯೋಜಿಸಲಾಗಿದೆ ಎಂದು ತಿಳಿಸಿದರು.
ದೇಶದ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ೨೦೪೭ಕ್ಕೆ ವಿಕಸಿತ ಭಾರತ ಕಟ್ಟುವ ಪರಿಣಾಮವಾಗಿ ದೇಶದ ಯುವಕರನ್ನು ದೇಶದ ಪ್ರಗತಿಯೊಂದಿಗೆ ದೇಶದ ಗೌರವದೊಂದಿಗೆ ಕೊಂಡೊಯ್ಯುವ ನಿಟ್ಟಿನಲ್ಲಿ ಈ ಪಾದಯಾತ್ರೆ ಆಯೋಜಿಸಲಾಗಿದೆ. ಭಾರತ ದೇಶವು ವಿಶ್ವದ ಹಿರಿಯಣ್ಣನಾಗುವ ನಿಟ್ಟಿನಲ್ಲಿ ಯುವಕರು ಶ್ರಮಿಸಬೇಕಾಗಿದೆ ಎಂದು ಅಭಿಪ್ರಾಯಪಟ್ಟರು.
ಅಕ್ಟೋಬರ್ ೬ರಿಂದ ದೇಶದಲ್ಲಿ ಹಲವಾರು ಕಾರ್ಯಕ್ರಮಗಳನ್ನು ಆಯೋಜಿಸುತ್ತಾ ಬರಲಾಗುತ್ತಿದೆ. ನಾನು ಭಾರತದ ಸೇವಕ ಎನ್ನುವ ಮನೋಭಾವದೊಂದಿಗೆ ವಿದ್ಯಾರ್ಥಿಗಳು ಎನ್,ಸಿ,ಸಿ,ಎನ್.ಎಸ್.ಎಸ್ನಿವೃತ್ತ ಸೇನಾಧಿಕಾರಿಗಳು ಸೇರಿದಂತೆ ಎಲ್ಲಾ ಸ್ವಯಂಸೇವಕರು ಈ ಏಕತಾ ನಡಿಗೆಯ ಪಾದಯಾತ್ರೆಯಲ್ಲಿ ಪಾಲ್ಗೊಳ್ಳುತ್ತಿದ್ದಾರೆ ಎಂದರು.
ಸ್ವಾತAತ್ರದ ನಂತರ ಹರಿದು ಹಂಚಿ ಹೋಗಿದ್ದ ೫೬೫ ವಿವಿಧ ರಾಜರ ಸಂಸ್ಥಾನಗಳನ್ನು ಒಗ್ಗೂಡಿಸಿ ಅವರ ಮನವೊಲಿಸುವ ಮೂಲಕ, ಅಲ್ಲದೇ ಮೊಂಡುತನ ಮಾಡುವರನ್ನು ಬಗ್ಗು ಬಡಿದು ವಿಲೀನ ಮಾಡಿ ಭಾರತವನ್ನು ಏಕೀಕರಣ ರಾಷ್ಟ್ರವನ್ನಾಗಿ ಮಾಡುವಲ್ಲಿ ಸರ್ದಾರ್ ವಲ್ಲಭಬಾಯ್ ಪಟೇಲ್ ಅವರ ಪಾತ್ರ ಮಹತ್ತರವಾದದ್ದು ಎಂದು ಸ್ಮರಿಸಿದರು.
ಭಾರತದಲ್ಲಿ ಸರ್ದಾರ್ ವಲ್ಲಬಾಯ್ ಪಟೇಲರು ಹಂಚಿ ಹೋಗಿದ್ದ ರಾಜ್ಯಗಳನ್ನು ಒಗ್ಗೂಡಿಸುವ ಮೂಲಕ ಭಾರತ ರಾಷ್ಟ್ರವನ್ನು ನಿರ್ಮಿಸಿದ ರೀತಿಯಲ್ಲಿ ಅವರ ಕನಸುಗಳನ್ನು ನನಸು ಮಾಡುವ ನಿಟ್ಟಿನಲ್ಲಿ ನಾವೆಲ್ಲರೂ ಸಾಗಬೇಕಾಗಿದೆ. ಯುವಕರು ದೇಶದ ಘನತೆ, ಗೌರವ ಮತ್ತು ಐಕ್ಯತೆಗಳನ್ನು ಎತ್ತಿ ಹಿಡಿಯುವ ಮೂಲಕ ವಿಶ್ವದ ಹಿರಿಯಣ್ಣನನ್ನಾಗಿ ಭಾರತವನ್ನು ಮಾಡಬೇಕಾಗಿದೆ ಎಂದರು.
ಕೋಲಾರ ಜಿಲ್ಲಾ ಬಿಜೆಪಿ ಅಧ್ಯಕ್ಷ ಓಂಶಕ್ತಿ ಚಲಪತಿ ಮಾತನಾಡಿ ಸ್ವಾತಂತ್ರö್ಯ ಪೂರ್ವದಲ್ಲಿ ಹರಿದು ಹಂಚಿಹೋಗಿದ್ದ ಭಾರತವನ್ನು ಒಗ್ಗೂಡಿಸಿದ ಹೆಗ್ಗಳಿಕೆ ಇತಿಹಾಸದಲ್ಲಿ ಸರ್ದಾರ್ ವಲ್ಲಭಬಾಯಿ ಪಟೇಲರಿಗೆ ಸಲ್ಲುತ್ತದೆ ಎಂದು ತಿಳಿಸಿದರು.
ಕೋಲಾರದ ದೇವರಾಜ ಅರಸು ವೈದ್ಯಕೀಯ ಕಾಲೇಜಿನ ರಿಜಿಸ್ಟಾçರ್ ಡಾ. ಮುನಿನಾರಾಯಣ ಮಾತನಾಡಿ ದೇಶದ ಯುವಜನರು ದೇಶದ ಅಖಂಡತೆ ಮತ್ತು ಸಾರ್ವಭೌಮತ್ಯವನ್ನು ಎತ್ತಿ ಹಿಡಿಯಬೇಕು ಎಂಬುದು ಪಾದಯಾತ್ರೆಯ ಉದ್ದೇಶವಾಗಿದೆ ಎಂದರು.
ಬೆAಗಳೂರು ಉತ್ತರ ವಿಶ್ವವಿದ್ಯಾಲಯದ ಎನ್.ಎಸ್.ಎಸ್. ಅಧಿಕಾರಿ ಶ್ರೀಧರ್ ಮಾತನಾಡಿ ಇತಿಹಾಸದಲ್ಲಿ ಸರ್ಕಾರ್ ವಲ್ಲಭಬಾಯಿ ಪಟೇಲ್ ಮೇರು ವ್ಯಕ್ತಿತ್ವ ಹೊಂದಿದ್ದಾರೆ. ಅತ್ಯಂತ ಕಠಿಣ ಪರಿಸ್ಥಿತಿಯಲ್ಲಿ ದೇಶೀಯ ಸಂಸ್ಥಾನಗಳನ್ನು ಒಗ್ಗೂಡಿಸುವಲ್ಲಿ ಅತ್ಯಂತ ಪ್ರಮುಖ ಪಾತ್ರ ವಹಿಸಿದ್ದರು ಎಂದು ತಿಳಿಸಿದರು.
ಮೈಭಾರತ್ ಕೋಲಾರ ಜಿಲ್ಲಾ ಸಮನ್ವಯ ಅಧಿಕಾರಿ ರಾಜೇಶ್ ಕಾರಂತ್ ಮೊದಲ ಬಾರಿಗೆ ಏಕತಾ ಪಾದಯಾತ್ರೆಯನ್ನು ದೇಶಾದ್ಯಂತ ನಡೆಸಲಾಯಿತು. ಮಂಗಳವಾರ ನವದೆಹಲಿಯಲ್ಲಿ ರಾಷ್ಟçಮಟ್ಟದ ಬೃಹತ್ ಏಕತಾ ಯಾತ್ರೆ ನಡೆಯಲಿದೆ ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಯುವ ಸಬಲೀಕರಣ ಇಲಾಖೆ ಸಹಾಯಕ ನಿರ್ದೇಶಕರಾದ ಗೀತಾ,ಗ್ರೇಡ್-೨ ತಹಸೀಲ್ದಾರ್ ಹಂಸಮರಿಯ, ಮೈ ಭಾರತ್ ಕಚೇರಿಯ ಪ್ರವೀಣ್ ಕುಮಾರ್, ರಾಷ್ಟ್ರೀಯ ಸೇವಾ ಯೋಜನೆಯ ಜಿಲ್ಲಾ ನೋಡಲ್ ಅಧಿಕಾರಿ ಶ್ರೀಧರ್, ಆಯೋಜಕರಾದ ಸುಮನ್ ಸಿಎಂಆರ್ ಶ್ರೀನಾಥ್, ಬಿ.ವಿ ಮಹೇಶ್, ಪುರ ನಾರಾಯಣಸ್ವಾಮಿ, ರಾಜೇಶ್ ಸಿಂಗ್, ಶಿವಕುಮಾರ್ ಭಾಗವಹಿಸಿದ್ದರು.
ಚಿತ್ರ : ಸರ್ದಾರ್ ವಲ್ಲಭಬಾಯಿ ಪಟೇಲ್ ೧೫೦ನೇ ಜನ್ಮಜಯಂತಿ ಅಂಗವಾಗಿ ಕೋಲಾರದಲ್ಲಿ ಮೈಭಾರತ್ ಕೇಂದ್ರದ ಆಶ್ರಯದಲ್ಲಿ ಏಕತಾ ನಡಿಗೆ ನಡೆಯಿತು.
ಹಿಂದೂಸ್ತಾನ್ ಸಮಾಚಾರ್ / ಎಸ್.ಚಂದ್ರಶೇಖರ್