ಜಾಗಿರ ವೆಂಕಟಪೂರ, ರಘುನಾಥಹಳ್ಳಿ, ಸುಲ್ತಾನಪೂರ ಗ್ರಾಮಗಳಲ್ಲಿ ಅಭಿವೃದ್ಧಿ
ರಾಯಚೂರು, 25 ನವೆಂಬರ್ (ಹಿ.ಸ.) : ಆ್ಯಂಕರ್ : ಮಹರ್ಷಿ ವಾಲ್ಮೀಕಿ ಕರ್ನಾಟಕ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಅಧ್ಯಕ್ಷರು ಆಗಿರುವ ರಾಯಚೂರು ಗ್ರಾಮೀಣ ಕ್ಷೇತ್ರದ ಶಾಸಕರಾದ ಬಸನಗೌಡ ದದ್ದಲ್ ಹಾಗೂ ಲೋಕಸಭಾ ಸದಸ್ಯರಾದ ಜಿ.ಕುಮಾರ ನಾಯಕ ಅವರು ನವೆಂಬರ್ 25ರಂದು ಜಾಗಿರ ವೆಂಕಟಪೂರ, ರಘುನಾಥಹಳ್ಳಿ, ಸು
ಜಾಗಿರ ವೆಂಕಟಪೂರ, ರಘುನಾಥಹಳ್ಳಿ, ಸುಲ್ತಾನಪೂರ ಗ್ರಾಮಗಳಲ್ಲಿ ಅಭಿವೃದ್ಧಿ


ಜಾಗಿರ ವೆಂಕಟಪೂರ, ರಘುನಾಥಹಳ್ಳಿ, ಸುಲ್ತಾನಪೂರ ಗ್ರಾಮಗಳಲ್ಲಿ ಅಭಿವೃದ್ಧಿ


ಜಾಗಿರ ವೆಂಕಟಪೂರ, ರಘುನಾಥಹಳ್ಳಿ, ಸುಲ್ತಾನಪೂರ ಗ್ರಾಮಗಳಲ್ಲಿ ಅಭಿವೃದ್ಧಿ


ರಾಯಚೂರು, 25 ನವೆಂಬರ್ (ಹಿ.ಸ.) :

ಆ್ಯಂಕರ್ : ಮಹರ್ಷಿ ವಾಲ್ಮೀಕಿ ಕರ್ನಾಟಕ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಅಧ್ಯಕ್ಷರು ಆಗಿರುವ ರಾಯಚೂರು ಗ್ರಾಮೀಣ ಕ್ಷೇತ್ರದ ಶಾಸಕರಾದ ಬಸನಗೌಡ ದದ್ದಲ್ ಹಾಗೂ ಲೋಕಸಭಾ ಸದಸ್ಯರಾದ ಜಿ.ಕುಮಾರ ನಾಯಕ ಅವರು ನವೆಂಬರ್ 25ರಂದು ಜಾಗಿರ ವೆಂಕಟಪೂರ, ರಘುನಾಥಹಳ್ಳಿ, ಸುಲ್ತಾನಪೂರ ಗ್ರಾಮಗಳಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಭೂಮಿ ಪೂಜೆ ಹಾಗೂ ಉದ್ಘಾಟನೆ ನೆರವೇರಿಸಿದರು.

ಜಾಗಿರ ವೆಂಕಟಪೂರ ಗ್ರಾಮದಲ್ಲಿ ಪಂಚಾಯತ್ ರಾಜ್ ಎಂಜಿನಿಯರಿ0ಗ್ ವಿಭಾಗದಿಂದ ಶ್ರೀ ಮಾರೆಮ್ಮದೇವಿ ದೇವಸ್ಥಾನ ಅಭಿವೃದ್ಧಿಗೆ ಹಾಗೂ ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಯ ಮ್ಯಾಕ್ರೋ ಯೋಜನೆಯಡಿ ಅಂಬೇಡ್ಕರ್ ಭವನ ನಿರ್ಮಾಣಕ್ಕೆ ಶಾಸಕರು ಭೂಮಿಪೂಜೆ ನೆರವೇರಿಸಿದರು.

ರಘುನಾಥಹಳ್ಳಿ ಗ್ರಾಮದಲ್ಲಿ ಶಾಸಕರ ಅನುದಾನದಡಿಯಲ್ಲಿ ಶ್ರೀ ಆಂಜನೇಯ್ಯ ಸ್ವಾಮಿ ಗುಡಿ ನಿರ್ಮಾಣಕ್ಕೆ ಶಾಸಕರು ಚಾಲನೆ ನೀಡಿದರು.

ಕೆಕೆಆರ್‌ಡಿಬಿ ಮ್ಯಾಕ್ರೋ ಯೋಜನೆಯಡಿ ಪರಿಶಿಷ್ಟ ಜಾತಿ ಕಾಲೋನಿಯಲ್ಲಿ ಸಮುದಾಯ ಭವನ ನಿರ್ಮಾಣಕ್ಕೆ, ಗ್ರಂಥಾಲಯ ಕಟ್ಟಡ ನಿರ್ಮಾಣಕ್ಕೆ, ಲೋಕಸಭಾ ಸದಸ್ಯರ ಅನುದಾನದಡಿ ಸಾಂಸ್ಕೃತಿಕ ಭವನ ನಿರ್ಮಾಣಕ್ಕೆ ಭೂಮಿ ಪೂಜೆ ನೆರವೇರಿಸಲಾಯಿತು.

ಸುಲ್ತಾನಪೂರ ಗ್ರಾಮದಲ್ಲಿ ಶಾಸಕರ ಅನುದಾನದಡಿಯಲ್ಲಿ ಶ್ರೀ ಮಾರೆಮ್ಮದೇವಿ ಗುಡಿ ಅಭಿವೃದ್ಧಿಗೆ ಮತ್ತು ಕೆಕೆಆರ್‌ಡಿಬಿ ಮ್ಯಾಕ್ರೋ ಯೋಜನೆಯಡಿ ಡಾ.ಬಿ.ಆರ್.ಅಂಬೇಡ್ಕರ್ ಭವನ ನಿರ್ಮಾಣಕ್ಕೆ ಸಹ ಇದೆ ವೇಳೆ ಭೂಮಿ ಪೂಜೆ ನೆರವೇರಿತು.

ದೇವರ ದರ್ಶನ ಪಡೆದರು: ನವೆಂಬರ್ 25ರಂದು ಗ್ರಾಮೀಣ ಪ್ರವಾಸ ಕೈಗೊಂಡ ವೇಳೆಯಲ್ಲಿ ಶಾಸಕರಾದ ಬಸನಗೌಡ ದದ್ದಲ್ ಅವರು ಶ್ರೀ ಮಾರಿಕಾಂಬಾ ದೇವಿಯ, ಶ್ರೀ ಆಂಜನೇಯ್ಯ ಸ್ವಾಮಿ ಮತ್ತು ಮರಡಿ ಗಂಗಾಧರ ತಾತನವರ ದರ್ಶನಾಶೀರ್ವಾದ ಪಡೆದರು.

ಈ ಸಂದರ್ಭದಲ್ಲಿ ದೇವಸೂಗುರ ಬ್ಲಾಕ್ ಅಧ್ಯಕ್ಷರು, ಊರಿನ ಹಿರಿಯ ಮುಖಂಡರು, ಸುತ್ತಲಿನ ಗ್ರಾಮಗಳ ಹಿರಿಯ ಮುಖಂಡರು, ನಾಮನಿರ್ದೇಶಿತ ಸದಸ್ಯರು, ತಾಲೂಕು ಮಟ್ಟದ ಅಧಿಕಾರಿಗಳು, ಗ್ರಾಮ ಪಂಚಾಯತ್ ಅಧ್ಯಕ್ಷರು, ಸದಸ್ಯರು, ಕಾರ್ಯಕರ್ತರು ಗ್ರಾಮಸ್ಥರು ಉಪಸ್ಥಿತರಿದ್ದರು.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande