
ಗಂಗಾವತಿ, 25 ನವೆಂಬರ್ (ಹಿ.ಸ.) :
ಆ್ಯಂಕರ್ : ಗಂಗಾವತಿ ಮೀನುಗಾರಿಕೆ ಇಲಾಖೆ ವತಿಯಿಂದ 2025-26ನೇ ಸಾಲಿನ ಪ್ರಧಾನ ಮಂತ್ರಿ ಮತ್ಸ್ಯ ಸಂಪದ ಯೋಜನೆಯಡಿ ಧರ್ತಿ ಆಭಾ ಜನ ಜಾತಿಯ ಗ್ರಾಮ ಉತ್ಕರ್ಷ ಅಭಿಯಾನವನ್ನು ಜಾರಿಗೊಳಿಸುವ ಸಲುವಾಗಿ ಗಂಗಾವತಿ, ಕನಕಗಿರಿ, ಕಾರಟಗಿ ತಾಲ್ಲೂಕುಗಳ ಆಯ್ದ ಗ್ರಾಮಗಳ ಮೀನುಗಾರರಿಂದ ಅರ್ಜಿ ಆಹ್ವಾನಿಸಲಾಗಿದೆ.
ಪರಿಶಿಷ್ಟ ಪಂಗಡ ವರ್ಗದ ಮೀನುಗಾರರಿಂದ ಮೀನು ಮಾರಾಟಕ್ಕಾಗಿ ಐಸ್ ಬಾಕ್ಸ್ ನೊಂದಿಗೆ ದ್ವಿಚಕ್ರ ವಾಹನ, ಐಸ್ ಬಾಕ್ಸ್ ನೊಂದಿಗೆ ತ್ರಿಚಕ್ರ ವಾಹನ ಮತ್ತು ಜೀವಂತ ಮೀನು ಮಾರಾಟ ಕೇಂದ್ರಗಳನ್ನು ಸ್ಥಾಪಿಸಲು ಸಹಾಯಧನ ನೀಡಲಾಗುತ್ತಿದ್ದು, ಗಂಗಾವತಿ ತಾಲೂಕಿನ ಕೆಸಕಿಹಂಚಿನಾಳ, ಕನಕಗಿರಿ ತಾಲೂಕಿನ ಲಾಯದುಣಸಿ, ಬಸರಿಹಾಳ, ಪರಾಪುರ, ಹಿರೇಖೇಡಾ, ಮಲ್ಲಿಗೆವಾಡ, ಕಾಟಾಪುರ, ಹಿರೇಮಾದಿನಾಳ, ಮಲ್ಲಾಪುರ, ಅಕಟಕುಂಪಿ, ವಡಕಿ, ಚಿಕ್ಕಡಂಕನಕಲ್ಲ ಮತ್ತು ಕಾರಟಗಿ ತಾಲೂಕಿನ ಗುಡೂರು, ತೊಂಡಿಹಾಳ, ಜೂರಟಗಿ, ಹಾಲಸಮುದ್ರ ಗ್ರಾಮಗಳನ್ನು ಈ ಯೋಜನೆಯಡಿ ಆಯ್ಕೆ ಮಾಡಲಾಗಿರುತ್ತದೆ.
ಈ ಎಲ್ಲ ಗ್ರಾಮಗಳಿಂದ ಮಾತ್ರ ಬುಡಕಟ್ಟು ಸಮುದಾಯದ ಅಥವಾ ಪರಿಶಿಷ್ಟ ಪಂಗಡ ವರ್ಗದ ಅರ್ಹ ಮೀನುಗಾರರು ಮತ್ತು ಮೀನುಕೃಷಿಕರು ಅರ್ಜಿ ಸಲ್ಲಿಸಬಹುದು. ಸರ್ಕಾರದ ಮಾರ್ಗಸೂಚಿ ಹಾಗೂ ಲಭ್ಯವಿರುವ ಅನುದಾದ ಮೇರೆಗೆ ಫಲಾನುಭವಿಗಳನ್ನು ಆಯ್ಕೆ ಮಾಡಲಾಗುವುದರಿಂದ ಅರ್ಹ ಮೀನುಗಾರರು ಮತ್ತು ಮೀನುಕೃಷಿಕರು ಡಿಸೆಂಬರ್ 8 ರೊಳಗಾಗಿ ಗಂಗಾವತಿ ತಾಲೂಕಿನ ಮೀನುಗಾರಿಕೆ ಸಹಾಯಕ ನಿರ್ದೇಶಕರ ಕಚೇರಿಗೆ ಯೋಜನೆಯ ನಿಯಮಾನುಸಾರ ಅಗತ್ಯ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸಬಹುದು.
ಹೆಚ್ಚಿನ ಮಾಹಿತಿಗಾಗಿ ಮೀನುಗಾರಿಕೆ ಇಲಾಖೆ ಗಂಗಾವತಿ ತಾಲ್ಲೂಕು ಕಚೇರಿಗೆ ಸಂಪರ್ಕಿಸಬಹುದು ಎಂದು ಗಂಗಾವತಿ ಮೀನುಗಾರಿಕೆ ಇಲಾಖೆಯ ಪ್ರಭಾರಿ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್