
ಕುಷ್ಟಗಿ, 25 ನವೆಂಬರ್ (ಹಿ.ಸ.) :
ಆ್ಯಂಕರ್ : ಕುಷ್ಟಗಿ ಮೀನುಗಾರಿಕೆ ಇಲಾಖೆ ವತಿಯಿಂದ 2025-26ನೇ ಸಾಲಿನ ಪ್ರಧಾನ ಮಂತ್ರಿ ಮತ್ಸ್ಯಸಂಪದ ಯೋಜನೆಯಡಿ ಧರ್ತಿ ಆಭಾ ಜನ ಜಾತೀಯ ಗ್ರಾಮ ಉತ್ಕರ್ಷ ಅಭಿಯಾನವನ್ನು ಜಾರಿಗೊಳಿಸುವ ಸಲುವಾಗಿ ಕುಷ್ಟಗಿ ತಾಲ್ಲೂಕಿನ ಆಯ್ದ ಗ್ರಾಮಗಳ ಮೀನುಗಾರರಿಂದ ಅರ್ಜಿ ಆಹ್ವಾನಿಸಲಾಗಿದೆ.
ಪರಿಶಿಷ್ಟ ಪಂಗಡ ವರ್ಗದ ಮೀನುಗಾರರಿಂದ ಮೀನು ಮಾರಾಟಕ್ಕಾಗಿ ಐಸ್ ಬಾಕ್ಸ್ ನೊಂದಿಗೆ ದ್ವಿಚಕ್ರ ವಾಹನ, ಐಸ್ ಬಾಕ್ಸ್ ನೊಂದಿಗೆ ತ್ರಿಚಕ್ರ ವಾಹನ ಮತ್ತು ಜೀವಂತ ಮೀನು ಮಾರಾಟ ಕೇಂದ್ರಗಳನ್ನು ಸ್ಥಾಪಿಸಲು ಸಹಾಯಧನ ನೀಡಲಾಗುತ್ತಿದ್ದು, ಕುಷ್ಟಗಿ ತಾಲೂಕಿನ ಆಯ್ದ ಗ್ರಾಮಗಳಾದ ಬಸಾಪುರ, ನೀರಲಕೊಪ್ಪ, ಗೊರ್ಬಿಹಾಳ, ತುಮರಿಕೊಪ್ಪ, ಹನಮಗೇರಿ, ಬಿಸನಾಳ, ಚಿಕ್ಕನಂದಿಹಾಳ, ಗಂಗನಾಳ, ನಾಗರಾಳ, ಇಡ್ಲಾಪುರ, ಮೆಟ್ಟಿನಹಾಳ, ವಿರುಪಾಪುರ, ಹಿರೇಮುಕರ್ತಿಹಾಳ ಗ್ರಾಮಗಳನ್ನು ಈ ಯೋಜನೆಯಡಿ ಆಯ್ಕೆ ಮಾಡಲಾಗಿರುತ್ತದೆ.
ಈ ಎಲ್ಲಾ ಗ್ರಾಮಗಳಿಂದ ಮಾತ್ರ ಬುಡಕಟ್ಟು ಸಮುದಾಯದ ಅಥವಾ ಪರಿಶಿಷ್ಟ ಪಂಗಡ ವರ್ಗದ ಅರ್ಹ ಮೀನುಗಾರರು ಮತ್ತು ಮೀನುಕೃಷಿಕರಿಂದ ಅರ್ಜಿ ಸಲ್ಲಿಸಬಹುದು. ಸರ್ಕಾರದ ಮಾರ್ಗಸೂಚಿ ಹಾಗೂ ಲಭ್ಯವಿರುವ ಅನುದಾದ ಮೇರೆಗೆ ಫಲಾನುಭವಿಗಳನ್ನು ಆಯ್ಕೆ ಮಾಡಲಾಗುವುದರಿಂದ ಅರ್ಹ ಮೀನುಗಾರರು ಮತ್ತು ಮೀನುಕೃಷಿಕರು ಡಿಸೆಂಬರ್ 8 ರೊಳಗಾಗಿ ಕುಷ್ಟಗಿ ತಾಲೂಕಿನ ಮೀನುಗಾರಿಕೆ ಸಹಾಯಕ ನಿರ್ದೇಶಕರ ಕಛೇರಿಗೆ ಯೋಜನೆಯ ನಿಯಮಾನುಸಾರ ಅಗತ್ಯ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸಬಹುದು.
ಹೆಚ್ಚಿನ ಮಾಹಿತಿಗಾಗಿ ಮೀನುಗಾರಿಕೆ ಇಲಾಖೆಯ ಕುಷ್ಟಗಿ ತಾಲ್ಲೂಕು ಕಛೇರಿಯನ್ನು ಸಂಪರ್ಕಿಸಬಹುದು ಎಂದು ಕುಷ್ಟಗಿ ಮೀನುಗಾರಿಕೆ ಇಲಾಖೆಯ ಪ್ರಭಾರಿ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್