
ಬಳ್ಳಾರಿ, 27 ನವೆಂಬರ್ (ಹಿ.ಸ.) :
ಆ್ಯಂಕರ್ : ವಿಜಯನಗರ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯದ ಪ್ರಭಾರ ಕುಲಸಚಿವರಾಗಿ ನಿರ್ವಹಣಾಶಾಸ್ತ್ರ ವಿಭಾಗದ ಪ್ರಾಧ್ಯಾಪಕರಾದ ಡಾ ಜಿ.ಪಿ. ದಿನೇಶ್ ಅವರು ಕುಲಪತಿಗಳಾಗಿ ಅಧಿಕಾರ ಸ್ವೀಕರಿಸಿದ್ದಾರೆ.
ನಿಕಟಪೂರ್ವ ಕುಲಸಚಿವರಾಗಿದ್ದ ನಾಗರಾಜು. ಸಿ ಅವರ ವರ್ಗಾವಣೆಯಿಂದ ತೆರವಾದ ಸ್ಥಾನಕ್ಕೆ ಪ್ರೊ. ಜಿ.ಪಿ. ದಿನೇಶ್ ಅವರನ್ನು ಹಂಗಾಮಿ ಕುಲಸಚಿವರನ್ನಾಗಿ ನೇಮಿಸಲಾಗಿದೆ.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್