
ರಾಯಚೂರು, 27 ನವೆಂಬರ್ (ಹಿ.ಸ.)
ಆ್ಯಂಕರ್ : ದೀರ್ಘಕಾಲದವರೆಗೆ ಹಕ್ಕು ಪಡೆಯದೆ ಉಳಿದಿರುವ ಬ್ಯಾಂಕ್ ಠೇವಣಿಗಳು, ವಿಮಾ ಕಂತುಗಳು ಮತ್ತು ಷೇರುಗಳನ್ನು ಅವುಗಳ ಮಾಲಿಕರು ಅಥವಾ ಕಾನೂನು ಬದ್ದ ವಾರಸುದಾರರಿಗೆ ಹಸ್ತಾಂತರಿಸುವ ಶಿಬಿರವನ್ನು ನವೆಂಬರ್ 28 ರಂದು ಮಧ್ಯಾಹ್ನ 11ಕ್ಕೆ ಜಿಲ್ಲಾ ಪಂಚಾಯತ್ ಕಚೇರಿ ಸಭಾ ಭವನದಲ್ಲಿ ಹಮ್ಮಿಕೊಳ್ಳಲಾಗಿದೆ.
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಈಶ್ವರ ಕಾಂದೂ, ಲೀಡ್ ಬ್ಯಾಂಕ್ ಮ್ಯಾನೇಜರ್ ಪಾಂಡಪ್ಪ ಆರ್.ಬಿ., ಮ್ಯಾನೇಜರ್ ಶ್ರೀ ಪ್ರಭಾಕರನ್ ಉಪಸ್ಥಿತರಿರುವರು.
ಈ ಶಿಬಿರವು ಭಾರತದ ಹಣಕಾಸು ಸಚಿವಾಲಯದ ಮಾರ್ಗಸೂಚಿಗಳ ಪ್ರಕಾರ ಎಲ್ಲಾ ಬ್ಯಾಂಕಿ0ಗ್, ವಿಮೆ ಮತ್ತು ಇತರ ವಲಯಕ್ಕೆ ಸಂಬ0ಧಿಸಿದ ಕಚೇರಿ ಶಾಖೆಗಳಲ್ಲಿ ಡಿಸೆಂಬರ್ 31ರವರೆಗೆ ಮುಂದುವರೆಯುತ್ತದೆ.
ಖಾತೆದಾರರು ಅಥವಾ ಕಾನೂನು ಬದ್ಧ ವಾರಸುದಾರರು ಬ್ಯಾಂಕಿನಲ್ಲಿ ಸತತ 10 ವರ್ಷಗಳಿಗೂ ಹೆಚ್ಚು ಕಾಲ ನಿಷ್ಕ್ರಿಯವಾಗಿರುವ ಖಾತೆಗಳಲ್ಲಿನ ಹಣ ಮತ್ತು ಕ್ಲೇಮ್ ಮಾಡದ ಠೇವಣಿಗಳನ್ನು ಕ್ಲೇಮ್ ಮಾಡಬಹುದು. ಬ್ಯಾಂಕಿ0ಗ್ ವಲಯ, ವಿಮಾ ವಲಯ, ಹಣಕಾಸು ವಲಯ ಮತ್ತು ಇತರ ವಲಯಗಳ ಅಧಿಕಾರಿಗಳು ಶಿಬಿರದಲ್ಲಿ ಭಾಗವಹಿಸಿ ಸಲಹೆ ನೀಡಲಿದ್ದಾರೆ.
ಬ್ಯಾಂಕಿನಲ್ಲಿ 10 ವರ್ಷಗಳಿಗೂ ಹೆಚ್ಚು ಕಾಲ ನಿಷ್ಕ್ರಿಯವಾಗಿರುವ ಮತ್ತು ಕ್ಲೇಮ್ ಮಾಡದ ಖಾತೆಗಳು ಮತ್ತು ಠೇವಣಿಗಳ ವಿವರಗಳನ್ನು http?://udgam.rbi.org.in ನಲ್ಲಿ ಕಾಣಬಹುದು.
ಸೂಕ್ತ ಗುರುತಿನ ದಾಖಲೆಗಳು ಮತ್ತು ಪುರಾವೆಗಳೊಂದಿಗೆ ಶಿಬಿರದಲ್ಲಿ ಭಾಗವಹಿಸುವ ಮೂಲಕ ಅಗತ್ಯ ಸಲಹೆಯನ್ನು ಪಡೆಯಬಹುದು ಮತ್ತು ಹಕ್ಕು ಪಡೆಯದ ಮೊತ್ತವನ್ನು ಮರುಪಡೆಯಲು ಈ ಶಿಬಿರವನ್ನು ಬಳಸಿಕೊಳ್ಳಬಹುದು ಎಂದು ಲೀಡ್ ಬ್ಯಾಂಕ್ ತಿಳಿಸಿದೆ.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್