
ನವದೆಹಲಿ, 27 ನವೆಂಬರ್ (ಹಿ.ಸ.) :
ಆ್ಯಂಕರ್ : ರಾಷ್ಟ್ರಪತಿ ದ್ರೌಪದಿ ಮುರ್ಮು ಇಂದಿನಿಂದ ಎರಡು ದಿನಗಳ ಕಾಲ ಒಡಿಶಾ ಹಾಗೂ ಉತ್ತರ ಪ್ರದೇಶ ಪ್ರವಾಸ ಕೈಗೊಳ್ಳಲಿದ್ದಾರೆ. ಅವರು ಇಂದು ಭುವನೇಶ್ವರದಲ್ಲಿ, ನಾಳೆ ಲಕ್ನೋದಲ್ಲಿ ನಡೆಯುವ ಹಲವು ಪ್ರಮುಖ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ರಾಷ್ಟ್ರಪತಿ ಭವನ ತಿಳಿಸಿದೆ.
ರಾಷ್ಟ್ರಪತಿ ಮುರ್ಮು ಭುವನೇಶ್ವರಕ್ಕೆ ಆಗಮಿಸಿದ ನಂತರ ಒಡಿಶಾ ವಿಧಾನಸಭೆಯ ಸದಸ್ಯರನ್ನು ಉದ್ದೇಶಿಸಿ ಆಡಳಿತ, ಸಾರ್ವಜನಿಕ ಸೇವೆ ಮತ್ತು ಸಂವಿಧಾನಿಕ ಮೌಲ್ಯಗಳ ಕುರಿತು
ಭಾಷಣ ಮಾಡಲಿದ್ದಾರೆ.
ನಾಳೆ ಲಕ್ನೋದಲ್ಲಿ ರಾಷ್ಟ್ರಪತಿಗಳು ಬ್ರಹ್ಮಕುಮಾರಿಯರ 2025–26ರ ವಾರ್ಷಿಕ ಥೀಮ್– “ಜಾಗತಿಕ ಏಕತೆ ಮತ್ತು ವಿಶ್ವಾಸಕ್ಕಾಗಿ ಧ್ಯಾನ” ಕಾರ್ಯಕ್ರಮವನ್ನು ಉದ್ಘಾಟಿಸುವರು. ಈ ಕಾರ್ಯಕ್ರಮದಲ್ಲಿ ವಿಶ್ವಶಾಂತಿ, ಆತ್ಮವಿಕಾಸ ಮತ್ತು ಧ್ಯಾನದ ಮಹತ್ವ ಕುರಿತು ರಾಷ್ಟ್ರಪತಿಗಳು ಮಾತನಾಡಲಿದ್ದಾರೆ.
ಇದಾದ ನಂತರ ಅವರು ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ನ ವಜ್ರಮಹೋತ್ಸವ ಆಚರಣೆಯ ಸಮಾರೋಪ ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ ಎಂದು ರಾಷ್ಟ್ರಪತಿ ಭವನ ಪ್ರಕಟಣೆಯಲ್ಲಿ ತಿಳಿಸಿದೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa