
ಹೊಸಪೇಟೆ, 27 ನವೆಂಬರ್ (ಹಿ.ಸ.) :
ಆ್ಯಂಕರ್ : 2025-26ನೇ ಸಾಲಿನ ನಗರಸಭೆ ನಿಧಿಯ ಯೋಜನೆ ಅಡಿಯಲ್ಲಿ ವ್ಯಕ್ತಿ ಸಂಬಂಧಿತ ಅನುಕೂಲಗಳಿಗಾಗಿ ಅರ್ಜಿ ಆಹ್ವಾನಿಸಲಾಗಿದ್ದು, ವೈಯಕ್ತಿಕ ಫಲಾನುಭವಿಗಳಾಗಿ ಬಯಸುವವರು ಯೋಜನೆಯಡಿ ಅರ್ಜಿಯನ್ನು ಡಿಸೆಂಬರ್ 11 ರೊಳಗಾಗಿ ಹೊಸಪೇಟೆ ನಗರಸಭೆ ಕಾರ್ಯಾಲಯಕ್ಕೆ ಸಲ್ಲಿಸಬಹುದು.
ಹೊಸಪೇಟೆ ನಗರದ ಎಂಬಿಬಿಎಸ್ ಅಥವಾ ಬಿಇ ವ್ಯಾಸಂಗ ಮಾಡುತ್ತಿರುವ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಲ್ಯಾಪ್ಟಾಪ್ ಖರೀದಿಗಾಗಿ 50 ಸಾವಿರ ರೂ. ಮೀರದಂತೆ ಸಹಾಯಧನ ನೀಡಲಾಗುವುದು. ಮತ್ತು ವಿಕಲಚೇತನರಿಗೆ ತ್ರಿ-ಚಕ್ರ ವಾಹನ ಖರೀದಿಸಿ ನೀಡಲಾಗುವುದು.
ಸರ್ಕಾರದ ಸತ್ತೋಲೆ ಅನ್ವಯ ಎಸ್ಎಫ್ಸಿ ಮತ್ತು ನಗರಸಭೆ ನಿಧಿಯ ಯೋಜನೆ ಅಡಿಯಲ್ಲಿ ಫಲಾನುಭವಿಗಳ ಆಯ್ಕೆ ಸಂದರ್ಭದಲ್ಲಿ ಅತಿ ಕಡುಬಡವರಿಗೆ ಆದ್ಯತೆ ನೀಡಲಾಗುವುದು. ಅರ್ಜಿ ಸಲ್ಲಿಸಲು ಫಲಾನುಭವಿಗಳು ಕುಟುಂಬದ ಆದಾಯ ಪ್ರಮಾಣ ಪತ್ರ, ಪಡಿತರ ಚೀಟಿ, ಆಧಾರ್ ಕಾರ್ಡ್ ಹಾಗೂ ಇತರೆ ದಾಖಲಾತಿಗಳನ್ನು ನೀಡಿ ಸಹಾಯಧನಕ್ಕೆ ಅರ್ಜಿಯನ್ನು ಸಲ್ಲಿಸತಕ್ಕದು, (ತಪ್ಪು ಮಾಹಿತಿ ನೀಡಿದಲ್ಲಿ ಕಾನೂನು ಕ್ರಮ ಕೈಗೊಳ್ಳಲಾಗುವುದು) ಹೆಚ್ಚಿನ ಮಾಹಿತಿಯನ್ನು ಹಾಗೂ ಅರ್ಜಿ ನಮೂನೆಯನ್ನು ಕಾರ್ಯಾಲಯದ ವಿಷಯ ನಿರ್ವಾಹಕರಿಂದ ಪಡೆಯಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ www.hospetcity.gov.in ವೆಬ್ಸೈಟ್ ಅನ್ನು ಸಂಪರ್ಕಿಸಿ ಮಾಹಿತಿಯ ವಿವರವನ್ನು ಪಡೆದುಕೊಳ್ಳಬಹುದು ಎಂದು ನಗರಸಭೆ ಪೌರಾಯುಕ್ತರು ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್