
ಗದಗ, 29 ನವೆಂಬರ್ (ಹಿ.ಸ.) :
ಆ್ಯಂಕರ್ : ಗದಗ ಜಿಲ್ಲಾ ಆಡಳಿತ, ಜಿಲ್ಲಾ ಪಂಚಾಯತ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಏಡ್ಸ್ ತಡೆಗಟ್ಟುವಿಕೆ ಮತ್ತು ನಿಯಂತ್ರಣ ಘಟಕ, ಜಿಲ್ಲಾ ವಾರ್ತಾ & ಸಾರ್ವಜನಿಕ ಸಂಪರ್ಕ ಇಲಾಖೆ, ಕೆ.ಹೆಚ್. ಪಾಟೀಲ್ ಇನ್ ಸ್ಟಿಟ್ಯೂಟ್ ಆಪ್ ಮೆಡಿಕಲ್ ಸೈನ್ಸ್ಸ್ ಕಾಲೇಜ್ ಜಿಲ್ಲಾ ಆಸ್ಪತ್ರೆ ಮಲ್ಲಸಮುದ್ರ, ಬಸವೇಶ್ವರ ಪ್ಯಾರಾ ಮೆಡಿಕಲ್ ಕಾಲೇಜ, ಗಾಂಧೀಜಿ ಪ್ಯಾರಾ ಮೆಡಿಕಲ್ ಕಾಲೇಜ, ಪಾಲನೆಗಾಲಾ ನರ್ಸಿಂಗ್ ಕಾಲೇಜ, ಜಿಲ್ಲಾ ರೆಡ್ ಕ್ರಾಸ್ ಸಂಸ್ಥೆ, ಆಯ್.ಎಂ.ಎ ರಕ್ಷಣೆ ಜಿಲ್ಲಾ ಮಹಿಳಾ ಒಕ್ಕೂಟ, ಸೃಷ್ಟಿ ಸಂಕುಲ ಸಂಸ್ಥೆ, ಚೈತನ್ಯ ಸಂಸ್ಥೆ, ನವಚೇತನ ಸಂಸ್ಥೆ ಹಾಗೂ ರೆಡ್ ರಿಬ್ಬನ್ ಕ್ಲಬ್ ಗದಗ ಇವರುಗಳ ಸಹಯೋಗದಲ್ಲಿ ವಿಶ್ವ ಏಡ್ಸ್ ದಿನ ಸಮಾರಂಭ-2025 ವನ್ನು ಡಿ 1 ಮುಂಜಾನೆ 11 ಗಂಟೆಗೆ ಕೆ ಎಚ್ ಪಾಟೀಲ್ ಇನ್ಟಿಟ್ಯೂಟ್ ಆಫ್ ಮೇಡಿಕೆಲ್ ಕಾಲೇಜ್ ಜಿಲ್ಲಾ ಆಸ್ಪತ್ರೆ ಮಲ್ಲಸಮುದ್ರದಲ್ಲಿ ಜರುಗಲಿದೆ.
ಜನಜಾಗೃತಿ ರ್ಯಾಲಿ ಬೆಳಿಗ್ಗೆ 9 ಗಂಟೆಗೆ ಕೆಸಿ ರಾಣಿ ರಸ್ತೆ, ಮಹೀಳಾ ಮತ್ತು ಮಕ್ಕಳ ಆಸ್ಪತ್ರೆಯಿಂದ ಪ್ರಾರಂಭವಾಗಿ ನಗರದ ಪ್ರಮುಖ ಬೀದಿಗಳಲ್ಲಿ ಸಂಚರಿಸಿ ಮಹಿಳಾ ಮತ್ತು ಮಕ್ಕಳ ಆಸ್ಪತ್ರೆಗೆ ಬಂದು ಮುಕ್ತಾಯಗೊಳ್ಳುವುದು.
ಕರ್ನಾಟಕ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸಚಿವರು ದಿನೇಶ ಗುಂಡುರಾವ್ ಘನ ಉಪಸ್ಥಿತಿ ವಹಿಸುವರು. ರಾಜ್ಯದ ಕಾನೂನು, ನ್ಯಾಯ, ಮಾನವ ಹಕ್ಕುಗಳು,ಸಂಸದೀಯ ವ್ಯವಹಾರಗಳು, ಶಾಸನ ರಚನೆ ಮತ್ತು ಪ್ರವಾಸೋದ್ಯಮ ಸಚಿವರು ಹಾಗೂ ಗದಗ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಎಚ್.ಕೆ.ಪಾಟೀಲ ಅವರು ಕಾರ್ಯಕ್ರಮವನ್ನು ಉದ್ಘಾಟಿಸುವರು.
ಮುಖ್ಯ ಅತಿಥಿಗಳಾಗಿ ಮಾಜಿ ಮುಖ್ಯಮಂತ್ರಿಗಳು ಹಾಗೂ ಹಾವೇರಿ ಸಂಸದರಾದ ಬಸವರಾಜ ಬೊಮ್ಮಾಯಿ, ಸರ್ಕಾರಿ ಮುಖ್ಯ ಸಚೇತಕರು ಹಾಗೂ ವಿಧಾನ ಪರಿಷತ್ ಸದಸ್ಯರಾದ ಸಲೀಂ ಅಹ್ಮದ್, ಕರ್ನಾಟಕ ಖನಿಜ ಅಬಿವೃದ್ಧಿ ನಿಗಮ ನಿಯಮಿತದ ಅಧ್ಯಕ್ಷರು ಹಾಗೂ ರೋಣ ಶಾಸಕರಾದ ಜಿ.ಎಸ್.ಪಾಟೀಲ, ಸಂಸದ ಪಿ.ಸಿ.ಗದ್ದಿಗೌಡರ, ಕರ್ನಾಟಕ ರಾಜ್ಯ ವಿಕೇಂದ್ರಿಕರಣ ಯೋಜನೆ ಮತ್ತು ಅಭಿವೃದ್ಧಿ ಸಮಿತಿಯ ಉಪಾಧ್ಯಕ್ಷರು ಡಿ.ಆರ್.ಪಾಟೀಲ, ವಿಧಾನ ಪರಿಷತ್ ಸದಸ್ಯರಾದ ಎಸ್.ವಿ.ಸಂಕನೂರ, ಪ್ರದೀಪ ಶೆಟ್ಟರ್, ನರಗುಂದ ಶಾಸಕರಾದ ಸಿ.ಸಿ.ಪಾಟೀಲ, ಶಿರಹಟ್ಟಿ ಶಾಸಕರಾದ ಡಾ.ಚಂದ್ರು ಲಮಾಣಿ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಅಕಬರಸಾಬ ಬಬರ್ಜಿ, ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಟಾನ ಪ್ರಾಧಿಕಾರದ ಅಧ್ಯಕ್ಷರಾದ ಬಿ.ಬಿ.ಅಸೂಟಿ ಅವರುಗಳು ಆಗಮಿಸುವರು.
ವಿಶೇಷ ಆಹ್ವಾನಿತರಾಗಿ ಯೋಜನೆ ಕಾರ್ಯಕ್ರಮ ಸಂಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಹಾಗೂ ಗದಗ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ರಮಣದೀಪ್ ಚೌಧರಿ, ಪ್ರಾದೇಶಿಕ ಆಯುಕ್ತ ಶ್ರೀಮತಿ ಜಾನಕಿ ಕೆ.ಎಂ, ಜಿಲ್ಲಾಧಿಕಾರಿ ಮತ್ತು ಜಿ.ಪಂ.ಮುಖ್ಯಕಾರ್ಯನಿರ್ವಹಣಾಧಿಕಾರಿ ಸಿ.ಎನ್.ಶ್ರೀಧರ್, ಜಿಲ್ಲಾ ಪೊಲೀಸ ವರಿಷ್ಟಾದಿಕಾರಿ ರೋಹನ್ ಜಗದೀಶ್, ಹಿರಿಯ ದಿವಾಣಿ ನ್ಯಾಯಧೀಶರು ಹಾಗೂ ಸದಸ್ಯ ಕಾರ್ಯದರ್ಶಿಗಳು, ಕಾನೂನು ಸೇವೆಗಳು ಪ್ರಾಧಿಕಾರ ಸಿ ಎಸ್ ಶಿವನಗೌಡ್ರ, ಕೆಎಚ್ ಪಾಟೀಲ್ ಜಿಲ್ಲಾ ಆಸ್ಥತ್ರೆಯ ನಿರ್ದೇಶಕ ಡಾ. ಬಸವರಾಜ ಬೊಮ್ಮನಣಳ್ಳಿ ಇವರುಗಳು ಆಗಮಿಸುವರು.
ಸಮುದಾಯ ಆರೋಗ್ಯ ವಿಭಾಗದ ಕೆ.ಹೆಚ್.ಪಿ.ಆಯ್.ಎಂ.ಎಸ್ ಕಾಲೇಜ್ನ ಡಾ. ಅರವಿಂದ ಕರಿನಾಗಣ್ಣನವರ ಉಪನ್ಯಾಸ ನೀಡುವರು. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ಎಸ್ ಎಸ್ ನೀಲಗುಂದ, ಜಿಲ್ಲಾ ಏಡ್ಸ್ ನಿಯಂತ್ರಣಾಧಿಕಾರಿ ಡಾ. ಅರುಂಧತಿ ಕುಲಕರ್ಣಿ, ಜಿಲ್ಲಾ ಶಸ್ತç ಚಿಕಿತ್ಸಕರು ಜಿಲ್ಲಾ ಆಸ್ಪತ್ರೆ ಡಾ ಬಿ. ಸಿ ಕರಿಗೌಡರ ಸರ್ವರಿಗೂ ಸ್ವಾಗತ ಕೋರಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / lalita MP