
ಕೋಲಾರ, 29 ನವೆಂಬರ್ (ಹಿ.ಸ.) :
ಆ್ಯಂಕರ್ : ಉಪ
ಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ರವರ ಆದೇಶದ ಮೇರೆಗೆ ಕೋಲಾರ ಜಿಲ್ಲಾ
ಕಿಸಾನ್ ಕಾಂಗ್ರೆಸ್ ಅಧ್ಯಕ್ಷರಾಗಿ ಈ ತಕ್ಷಣದಿಂದ ಜಾರಿಗೆ ಬರುವಂತೆ ತಾಲೂಕಿನ ಸೀತಿಹೊಸೂರು ಗ್ರಾಮದ
ಮುರಳಿಗೌಡ ಎನ್ ಅವರನ್ನು ಶನಿವಾರ ನೇಮಿಸಿ ಆದೇಶ ಹೊರಡಿಸಲಾಗಿದೆ.
ಕಾಂಗ್ರೆಸ್
ಪಕ್ಷದಲ್ಲಿ ಸಕ್ರಿಯರಾಗಿ ಪಕ್ಷದ ಸಂಘಟನೆ, ಹೋರಾಟದಲ್ಲಿ ತೊಡಗಿಸಿಕೊಂಡ ಹಿನ್ನೆಲೆಯಲ್ಲಿ ಹಾಗೂ ಕೋಲಾರ
ಜಿಲ್ಲೆಯ ಪಕ್ಷದ ಮುಖಂಡರುಗಳ ಶಿಫಾರಸ್ಸಿನೊಂದಿಗೆ ಈ ನೇಮಕಾತಿ ಮಾಡಲಾಗಿದ್ದು ತಮಗೆ ನೀಡಿರುವ ಜವಾಬ್ದಾರಿಯನ್ನು
ಯಶಸ್ವಿಯಾಗಿ ನಿರ್ವಹಿಸಬೇಕು ಹಾಗೂ ಕಿಸಾನ್ ಕಾಂಗ್ರೆಸ್ ಮೂಲಕ ರೈತರನ್ನು ಪಕ್ಷದಲ್ಲಿ ಸಂಘಟಿಸಲು ಶ್ರಮಿಸಬೇಕು
ಎಂದು ಈ ಮೂಲಕ ಸೂಚಿಸಲಾಗಿದೆ.
ಕೋಲಾರ ಜಿಲ್ಲೆಯ
ಮುಖಂಡರುಗಳ ಸಹಕಾರ ದೊಂದಿಗೆ ಬೂತ್ ಮಟ್ಟದಿಂದ ಕಾಂಗ್ರೆಸ್ ಪಕ್ಷ ಸಂಘಟನೆಯಲ್ಲಿ ತೊಡಗಿಕೊಂಡು ಪಕ್ಷದ
ಸಿದ್ಧಾಂತಗಳಿಗೆ ಬದ್ಧರಾಗಿ ಕಾರ್ಯನಿರ್ವಹಿಸುವಂತೆ ಡಿ.ಕೆ ಶಿವಕುಮಾರ್ ಆದೇಶದಂತೆ ಕಿಸಾನ್ ಕಾಂಗ್ರೆಸ್
ರಾಜ್ಯ ಅಧ್ಯಕ್ಷ ಸಚಿನ್ ಮೀಗಾ ಅನುಮೋದನೆ ನೀಡಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / ಎಸ್.ಚಂದ್ರಶೇಖರ್