ಮೈಸೂರಿನ ಘನತೆ, ಸಂಸ್ಕೃತಿಗೆ ಧಕ್ಕೆ ಬಾರದಂತೆ ಗ್ರೇಟರ್ ಮೈಸೂರು ರಚನೆ : ಸಿದ್ದರಾಮಯ್ಯ
ಮೈಸೂರು, 03 ನವೆಂಬರ್ (ಹಿ.ಸ.) : ಆ್ಯಂಕರ್ : ಗ್ರೇಟರ್ ಮೈಸೂರು ಆಗಬೇಕು. ಆದರೆ ಈಗಿನ ಮೈಸೂರಿನ ಘನತೆ, ಸಂಸ್ಕೃತಿಗೆ, ವಿಶಾಲತೆಗೆ ಧಕ್ಕೆ ಆಗಬಾರದು‌ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಧಿಕಾರಿಗಳಿಗೆ ಸ್ಪಷ್ಟ ಸೂಚನೆ ನೀಡಿದರು. ಮೈಸೂರು ಮಹಾನಗರ ಪಾಲಿಕೆ ಕಚೇರಿಯಲ್ಲಿ ನಡೆದ ಮೊದಲ ಗ್ರೇಟರ್ ಮೈ
Cm


ಮೈಸೂರು, 03 ನವೆಂಬರ್ (ಹಿ.ಸ.) :

ಆ್ಯಂಕರ್ : ಗ್ರೇಟರ್ ಮೈಸೂರು ಆಗಬೇಕು. ಆದರೆ ಈಗಿನ ಮೈಸೂರಿನ ಘನತೆ, ಸಂಸ್ಕೃತಿಗೆ, ವಿಶಾಲತೆಗೆ ಧಕ್ಕೆ ಆಗಬಾರದು‌ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಧಿಕಾರಿಗಳಿಗೆ ಸ್ಪಷ್ಟ ಸೂಚನೆ ನೀಡಿದರು.

ಮೈಸೂರು ಮಹಾನಗರ ಪಾಲಿಕೆ ಕಚೇರಿಯಲ್ಲಿ ನಡೆದ ಮೊದಲ ಗ್ರೇಟರ್ ಮೈಸೂರು ಸಭೆಯಲ್ಲಿ ಅಧಿಕಾರಿಗಳಿಗೆ ತಮ್ಮ ಸ್ಪಷ್ಟ ಪರಿಕಲ್ಪನೆಗಳನ್ನು ವಿವರಿಸಿ ಸೂಚನೆಗಳನ್ನು ನೀಡಿ, ಬೆಂಗಳೂರಿನ‌ ರೀತಿ ಸಂಚಾರ ಸಮಸ್ಯೆ, ಒಳಚರಂಡಿ, ಫುಟ್ ಪಾತ್, ಕುಡಿಯುವ ನೀರು, STP ಯಾವುದರ ಸಮಸ್ಯೆಯೂ ಇರದಂತೆ ಸ್ಪಷ್ಟ ವೈಜ್ಞಾನಿಕ ಬ್ಲೂ ಪ್ರಿಂಟ್ ಸಿದ್ದಪಡಿಸಿ ಎಂದು ಜಿಲ್ಲಾಡಳಿತಕ್ಕೆ ಸೂಚನೆ ನೀಡಿದರು.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande