
ವಿಜಯಪುರ, 03 ನವೆಂಬರ್ (ಹಿ.ಸ.) :
ಆ್ಯಂಕರ್ : ವಿಜಯಪುರ ಜಿಲ್ಲೆಯಲ್ಲಿರುವ ಕಬ್ಬು ನುರಿಸುವ ಸಕ್ಕರೆ ಕಾರ್ಖಾನೆಗಳು ಎರಡು ದಿನಗಳಲ್ಲಿ ರೈತರ ಸಮಸ್ಯೆಗಳಿಗೆ ಸ್ಪಂದಿಸಿ, ಸಾಗಾಣಿಕೆ ಮತ್ತು ಕಟಾವು ದರವನ್ನು ಹೊರತುಪಡಿಸಿ ರೈತರಿಗೆ ಪಾವತಿಸಬೇಕಾಗುವ ದರವನ್ನು ನಿಗದಿಗೊಳಿಸಿ ಘೋಷಿಸಿ ಸಕ್ಕರೆ ಕಾರ್ಖಾನೆ ಆರಂಭಿಸಲು ಕ್ರಮ ವಹಿಸುವಂತೆ ಜಿಲ್ಲಾಧಿಕಾರಿ ಡಾ.ಆನಂದ ಕೆ ಸೂಚಿಸಿದರು.
ನಗರದ ಜಿಲ್ಲಾ ಪಂಚಾಯತ ಸಭಾಂಗಣದಲ್ಲಿ ಸಕ್ಕರೆ ಕಾರ್ಖಾನೆ ಮಾಲೀಕರು ಹಾಗೂ ರೈತರೊಂದಿಗೆ ಏರ್ಪಡಿಸಿದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿ, ಜಿಲ್ಲೆಯಲ್ಲಿ 10 ಸಕ್ಕರೆ ಕಾರ್ಖಾನೆಗಳಿದ್ದು, ಕೇವಲ ಒಂದು ಕಾರ್ಖಾನೆ ಮಾತ್ರ ದರ ನಿಗದಿಪಡಿಸಿದ್ದು, ಇನ್ನುಳಿದ ಕಾರ್ಖಾನೆಗಳು ಆದಷ್ಟು ಬೇಗ ಸಮರ್ಪಕ ದರ ನಿಗದಿಪಡಿಸಿ ಸಕ್ಕರೆ ಕಾರ್ಖಾನೆಗಳನ್ನು ಕಾರ್ಯಾರಂಭಿಸುವಂತೆ ಸೂಚಿಸಿದ ಅವರು, ರೈತರಿಗೆ ಪಾವತಿಯಾಗಬೇಕಾದ ಈ ಹಿಂದಿನ ಯಾವುದೇ ಬಿಲ್ಲಗಳನ್ನು ಬಾಕಿ ಉಳಿಸಿಕೊಳ್ಳದೇ ಶೀಘ್ರವಾಗಿ ಇತ್ಯರ್ಥಪಡಿಸಿ ಪಾವತಿಗೆ ಕ್ರಮವಹಿಸಬೇಕು. ಈ ಹಂಗಾಮಿನಲ್ಲಿ ಸರ್ಕಾರದ ಮಾನದಂಡವನ್ನು ಬಳಸಿಕೊಂಡು ತಮ್ಮ ಅಧಿಕೃತ ಕಾರ್ಖಾನೆಯ ಲೆಟರ್ ಹೆಡ್ನಲ್ಲಿ ಕಬ್ಬು ನುರಿಸುವ ಕುರಿತು ಪತ್ರ ನೀಡಿ ಕಾರ್ಖಾನೆಗಳನ್ನು ಆರಂಭಿsಸುವಂತೆ ಅವರು ಸೂಚನೆ ನೀಡಿದರು.
ರೈತ ಮುಖಂಡರು ತಮ್ಮ ಸಮಸ್ಯೆಗಳ ಕುರಿತು ಜಿಲ್ಲಾಡಳಿತದ ಗಮನಕ್ಕೆ ತಂದಿದ್ದು, ಬಹುತೇಕ ಸ್ಥಳೀಯವಾಗಿರುವ ಸಮಸ್ಯೆ ಪರಿಹರಿಸಲಾಗುವುದು. ವಾಯು ಮಾಲಿನ್ಯ ನೈರ್ಮಲ್ಯ ಪರಿಶೀಲನೆ ನಡೆಸಿದ ವರದಿ ಸಲ್ಲಿಸಿ, ಸಕ್ಕರೆ ಕಾರ್ಖಾನೆಗಳು ಕೊಳಚೆ ನೀರು ಹರಿಬಿಡದಂತೆ ನೋಡಿಕೊಂಡು ಮಾಲಿನ್ಯವಾಗದಂತೆ ನಿಗಾವಹಿಸಬೇಕು. ಸಕ್ಕರೆ ಕಾರ್ಖಾನೆಗಳಲ್ಲಿ ತೂಕ ಮಾಪನದಲ್ಲಿ ಯಾವುದೇ ದೂರಿಗೆ ಆಸ್ಪದ ನೀಡದಂತೆ ನಿಯಮಾನುಸಾರ ಕ್ರಮವಹಿಸಬೇಕು. ಎಲ್ಲಾ ಕಾರ್ಖಾನೆಗಳಲ್ಲಿ ಡಿಜಿಟಲ್ ತೂಕದ ಯಂತ್ರಗಳನ್ನು ಅಳವಡಿಸಿರಬೇಕು ಸಕ್ಕರೆ ಕಾರ್ಖಾನೆಗಳು ಅಳವಡಿಸಿಕೊಂಡಿರುವ ಡಿಜಿಟಲ್ ತೂಕ ಯಂತ್ರ ಸಮರ್ಪಕವಾಗಿ ಕಾರ್ಯನಿರ್ವಹಿಸುತ್ತಿರುವ ಕುರಿತಾಗಿ ಆಹಾರ ಇಲಾಖೆ, ಕಂದಾಯ ಇಲಾಖೆ ಹಾಗೂ ಇಬ್ಬರು ರೈತರನ್ನೊಳಗೊಂಡು ಸಮಿತಿ ರಚಿಸಲಾಗಿದೆ. ಸಮಿತಿಯು ಪ್ರತಿ ಹದಿನೈದು ದಿನಕ್ಕೊಮ್ಮೆ ಜಿಲ್ಲೆಯ ಎಲ್ಲಾ ಕಾರ್ಖಾನೆಗಳಿಗೆ ತೆರಳಿ ಪರಿಶೀಲನೆ ನಡೆಸಬೇಕು. ಪರಿಶೀಲನಾ ಸಮಗ್ರ ವರದಿಯನ್ನು ಜಿಲ್ಲಾಡಳಿತಕ್ಕೆ ಸಲ್ಲಿಸಲಿದೆ. ತೂಕದಲ್ಲಿ ವ್ಯತ್ಯಾಸ ಕಂಡು ಬಂದಲ್ಲಿ ಅಂತಹ ಕಾರ್ಖಾನೆಗಳ ವಿರುದ್ಧ್ದ ಕಾನೂನಿನ ಕ್ರಮವಹಿಸಲಾಗುವುದು ಎಂದು ಅವರು ಹೇಳಿದರು.
ರೈತರು ಕಬ್ಬು ಪೂರೈಸಿದ ನಿಗದಿತ ಕಾಲಾವಧಿಯೊಳಗೆ ರೈತರಿಗೆ ಕಬ್ಬಿನ ಬಿಲ್ಲು ಪಾವತಿಯಾಗುವಂತೆ ನೋಡಿಕೊಳ್ಳಬೇಕು. ¸ಕ್ಕರೆ ಕಾರ್ಖಾನೆಗಳಲ್ಲಿ ಪ್ರತಿ ದಿನ ಕಾರ್ಖಾನೆಗೆ ಬರುವ ಕಬ್ಬು ತುಂಬಿದ ವಾಹನಗಳ ಕುರಿತ ಮಾಹಿತಿ ಲಾಗ್ ಬುಕ್ನಲ್ಲಿ ದಾಖಲಿಸಬೇಕು. ಕಬ್ಬಿನ ಕಾಸ್ಟ್ ಆಪ್ ಕಲ್ಟಿವೇಶನ್ ಲಾಭಾಂಶ ಕುರಿತು 15 ಅಂಶಗಳ ಕಬ್ಬಿನ ದರ ನಿಗದಿ ಪಡಿಸುವಂತೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಸಕ್ಕರೆ ಕಾರ್ಖಾನೆಗಳು ರೈತರಿಗೆ ಅನ್ಯಾಯವಾಗದಂತೆ ನೋಡಿಕೊಳ್ಳಬೇಕು. ಕಾರ್ಖಾನೆಗಳ ಮಾಲೀಕರು ಒಂದು ನಿಖರÀತೆÉಯಿಂದ ದರ ನಿಗದಿಪಡಿಸಿ ಘೋಷಿಸಿ ಕಾರ್ಖಾನೆ ಆರಂಭಿಸಬೇಕು. ರೈತ ಮುಖಂಡರು ಮಾತನಾಡಿದರು. ಸಭೆಯಲ್ಲಿ ಜಿಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ರಿಷಿ ಆನಂದ, ಜಿಲ್ಲಾ ಪೆÇಲೀಸ್ ವರಿμÁ್ಠಧಿಕಾರಿ ಲಕ್ಷಣ ನಿಂಬರಗಿ, ಹೆಚ್ಚುವರಿ ಪೆÇಲೀಸ್ ವರಿμÁ್ಠಧಿಕಾರಿ ರಾಮನಗೌಡ ಹಟ್ಟಿ, ಉಪ ವಿಭಾಗಾಧಿಕಾರಿಗಳಾದ ಗುರುನಾಥ ದಡ್ಡೆ ಹಾಗೂ ಅನುರಾಧಾ ವಸ್ತ್ರದ, ಕೃಷಿ ಇಲಾಖೆಯ ಜಂಟಿ ನಿರ್ದೇಶಕರಾದ ಶಿವನಗೌಡ ಪಾಟೀಲ, ಆಹಾರ ಇಲಾಖೆಯ ಉಪ ನಿರ್ದೇಶಕರಾದ ವಿನಯಕುಮಾರ ಪಾಟೀ¯, ರೈತ ಮುಖಂಡರು, ವಿವಿಧ ಸಂಘಟನೆಗಳ ಪದಾಧಿಕಾರಿಗಳು ಕಾರ್ಖಾನೆಗಳ ಪ್ರತಿನಿಧಿಗಳು, ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ಇತರರು ಉಪಸ್ಥಿತರಿದ್ದರು.
ಹಿಂದೂಸ್ತಾನ್ ಸಮಾಚಾರ್ / jyothi deshpande