
ಗದಗ, 30 ನವೆಂಬರ್ (ಹಿ.ಸ.) :
ಆ್ಯಂಕರ್ : ಅನುಸೂಚಿತ ಜಾತಿಗಳು ಮತ್ತು ಬುಡಕಟ್ಟುಗಳ (ದೌರ್ಜನ್ಯ ನಿಯಂತ್ರಣ) ಕಾಯ್ದೆ 1989 ಹಾಗೂ 1995 ತಿದ್ದುಪಡಿ ನಿಯಮಗಳಂತೆ ಕಂದಾಯ ವಿಭಾಗ ಮಟ್ಟದ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ರಚಿಸಲು ಸರ್ಕಾರದ ಅಧಿಸೂಚನೆ ಅನ್ವಯ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗಕ್ಕೆ ಸೇರಿದ ಇಬ್ಬರು ಅಧಿಕಾರೇತರ ಸದಸ್ಯರನ್ನಾಗಿ ನೇಮಕ ಮಾಡಬೇಕಾಗಿರುತ್ತದೆ.
ಆಸಕ್ತರು ನಿಗದಿತ ನಮೂನೆಯಲ್ಲಿ ಅರ್ಜಿ ಯನ್ನು ಸಹಾಯಕ ನಿರ್ದೇಶಕರು ಸಮಾಜ ಕಲ್ಯಾಣ ಇಲಾಖೆ ಗದಗ ಕಚೇರಿಯಿಂದ ಪಡೆದು ಡಿ.13 ರೊಳಗಾಗಿ ಭರ್ತಿ ಮಾಡಿದ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ ಎಂದು ಉಪವಿಭಾಗಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ಹಿಂದೂಸ್ತಾನ್ ಸಮಾಚಾರ್ / lalita MP