
ಚಿತ್ರದುರ್ಗ, 30 ನವೆಂಬರ್ (ಹಿ.ಸ.) :
ಆ್ಯಂಕರ್ : ಚಿತ್ರದುರ್ಗ ಜಿಲ್ಲೆಯ ಹಿರಿಯೂರು ನಗರಸಭೆಯ 2026-27ನೇ ಸಾಲಿನ ಆಯ-ವ್ಯಯ ತಯಾರಿ ಬಗ್ಗೆ ಸಾರ್ವಜನಿಕ ಸಲಹಾ ಸೂಚನಾ ಸಭೆಯನ್ನು ನಗರಸಭೆ ಆಡಳಿತಾಧಿಕಾರಿಗಳು, ಪೌರಾಯುಕ್ತರು ಅಧ್ಯಕ್ಷತೆಯಲ್ಲಿ ಡಿ.02ರಂದು ಬೆಳಿಗ್ಗೆ 11.30ಕ್ಕೆ ನಗರಸಭೆ ಸಭಾಂಗಣದಲ್ಲಿ ಏರ್ಪಡಿಸಲಾಗಿದೆ.
ನಗರದ ಗಣ್ಯ ವ್ಯಕ್ತಿಗಳು, ವರ್ತಕರು, ಹಿರಿಯ ನಾಗರೀಕರು, ಸಂಘ-ಸಂಸ್ಥೆಗಳ ಪದಾಧಿಕಾರಿಗಳು, ನಿವೃತ್ತ ಅಧಿಕಾರಿ, ನೌಕರರು, ಪತ್ರಕರ್ತರು, ಸಾರ್ವಜನಿಕರು ತಮ್ಮ ಸಲಹೆ ಸೂಚನೆಗಳನ್ನು ಲಿಖಿತ ರೂಪದಲ್ಲಿ ನೀಡಬೇಕು ಎಂದು ಹಿರಿಯೂರು ನಗರಸಭೆ ಪೌರಾಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa