ಕಬ್ಬು ಬೆಳೆಗಾರರಿಗೆ ಅನ್ಯಾಯ ಆಗದಂತೆ ಕ್ರಮ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್
ಬೆಂಗಳೂರು, 04 ನವೆಂಬರ್ (ಹಿ.ಸ.) : ಆ್ಯಂಕರ್ : ನಾವು ಕೂಡ ರೈತರು, ಕಾರ್ಖಾನೆ ಇದ್ದ ಕಾರಣಕ್ಕೆ ರೈತರ ಕಷ್ಟ ಗೊತ್ತಿಲ್ಲ ಅಂತಲ್ಲ. ರೈತರಿಗೂ ಅನ್ಯಾಯ ಆಗಬಾರದು, ಕಾರ್ಖಾನೆ ಮಾಲೀಕರಿಗೂ ಅನ್ಯಾಯ ಆಗಬಾರದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಪ್ರತಿಕ್ರಿಯಿಸಿದ್
ಕಬ್ಬು ಬೆಳೆಗಾರರಿಗೆ ಅನ್ಯಾಯ ಆಗದಂತೆ ಕ್ರಮ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್


ಬೆಂಗಳೂರು, 04 ನವೆಂಬರ್ (ಹಿ.ಸ.) :

ಆ್ಯಂಕರ್ : ನಾವು ಕೂಡ ರೈತರು, ಕಾರ್ಖಾನೆ ಇದ್ದ ಕಾರಣಕ್ಕೆ ರೈತರ ಕಷ್ಟ ಗೊತ್ತಿಲ್ಲ ಅಂತಲ್ಲ. ರೈತರಿಗೂ ಅನ್ಯಾಯ ಆಗಬಾರದು, ಕಾರ್ಖಾನೆ ಮಾಲೀಕರಿಗೂ ಅನ್ಯಾಯ ಆಗಬಾರದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಪ್ರತಿಕ್ರಿಯಿಸಿದ್ದಾರೆ.

ಕಬ್ಬು ಬೆಲೆ ಹೆಚ್ಚಳಕ್ಕೆ ರೈತರ ಪ್ರತಿಭಟನೆ ಕುರಿತಂತೆ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಚಿವರು,‌ ಈಗಾಗಲೇ ಎರಡು ಬಾರಿ ಸಭೆ ನಡೆಸಲಾಗಿದೆ. ನಾನು ಕಾರ್ಯನಿರತ ಇದ್ದ ಕಾರಣ ಸಭೆಯಲ್ಲಿ ಇರಲಿಲ್ಲ. ನನ್ನ ತಮ್ಮ ಹಾಗೂ ಮಗ ರೈತರ ಸಂಪರ್ಕದಲ್ಲಿದ್ದಾರೆ ಎಂದರು.

ಕಾರ್ಖಾನೆ ಮಾಲೀಕರು, ರೈತರು ಸೇರಿ ಸಭೆ ಮಾಡುತ್ತೇವೆ. ದರದ ಬಗ್ಗೆ ಮಾತನಾಡಲು ಹೋದರೆ ಬೇರೆ ರೀತಿ ಆಗುತ್ತೆ. ರೈತರಿಗೆ ದಕ್ಕೆಯಾಗದ ರೀತಿಯಲ್ಲಿ ನಡೆದುಕೊಳ್ಳಬೇಕು ಎಂದು ‌ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.

ರೈತರ ಪ್ರತಿಭಟನೆಯಲ್ಲಿ ‌ಬಿಜೆಪಿ ನಾಯಕರು ಭಾಗಿಯಾಗಿರುವ ಬಗ್ಗೆ ಪ್ರತಿಕ್ರಿಯಿಸಿದ ಸಚಿವರು, ರೈತರ ಹೋರಾಟದಲ್ಲಿ ಎಲ್ಲರೂ ಭಾಗಿಯಾಗಲಿ, ರಾಜಕೀಯ ಬಿಟ್ಟು ಪ್ರತಿಭಟನೆಗೆ ಹೋಗಲಿ. ರೈತರ ಬಗೆಗಿನ ಬಿಜೆಪಿ ಹೋರಾಟ ನಮಗೂ ಗೊತ್ತಿದೆ ಎಂದರು.

ಕೇಂದ್ರ ಸರ್ಕಾರ ರೈತರ ಪ್ರತಿಭಟನೆಯನ್ನು ಹೇಗೆಲ್ಲಾ ಹತ್ತಿಕ್ಕಿತು. ಈ ಹೋರಾಟದಲ್ಲಿ ಎಷ್ಟು ಜನ ರೈತರು ತೀರಿಕೊಂಡರು ಎನ್ನುವುದು ಗೊತ್ತಿದೆ. ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಅವರಿಗೆ ನಿಜವಾಗಿಯೂ ರೈತರ ಬಗ್ಗೆ ಕಾಳಜಿ ಇರಲಿ.‌ ಸದ್ಯಕ್ಕೆ ನಾನು ಈ ಬಗ್ಗೆ ಏನೂ ಮಾತನಾಡಲ್ಲ ಎಂದು‌ ಸಚಿವರು ಪ್ರತಿಕ್ರಿಯಿಸಿದರು.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande