ಮಕ್ಕಳ ದಿನಾಚರಣೆ ಅಂಗವಾಗಿ ಕಲಾಶ್ರೀ ಆಯ್ಕೆ ಸ್ಪರ್ಧೆ-2025
ಗದಗ, 04 ನವೆಂಬರ್ (ಹಿ.ಸ.) : ಆ್ಯಂಕರ್ : 2025-26ನೇ ಸಾಲಿನ ಜಿಲ್ಲಾ ಮಟ್ಟದ ಮಕ್ಕಳ ದಿನಾಚರಣೆ ಅಂಗವಾಗಿ ಕಲಾಶ್ರೀ ಸ್ಪರ್ಧೆ ಹಮ್ಮಿಕೊಂಡಿದ್ದು, ಸ್ಪರ್ಧೆಯಲ್ಲಿ ಸೃಜನಾತ್ಮಕ ಕಲೆ (ಚಿತ್ರಕಲೆ, ಕರಕುಶಕಲೆ, ಜೇಡಿಮಣ್ಣಿನ ಕಲೆ, ಮೂರರಲ್ಲೂ ಕಡ್ಡಾಯವಾಗಿ ಭಾಗವಹಿಸಬೇಕು) ; ಸೃಜನಾತ್ಮಕ ಬರವಣಿಗೆ (ಕಥೆ, ಕವನ
ಫೋಟೋ


ಗದಗ, 04 ನವೆಂಬರ್ (ಹಿ.ಸ.) :

ಆ್ಯಂಕರ್ : 2025-26ನೇ ಸಾಲಿನ ಜಿಲ್ಲಾ ಮಟ್ಟದ ಮಕ್ಕಳ ದಿನಾಚರಣೆ ಅಂಗವಾಗಿ ಕಲಾಶ್ರೀ ಸ್ಪರ್ಧೆ ಹಮ್ಮಿಕೊಂಡಿದ್ದು, ಸ್ಪರ್ಧೆಯಲ್ಲಿ ಸೃಜನಾತ್ಮಕ ಕಲೆ (ಚಿತ್ರಕಲೆ, ಕರಕುಶಕಲೆ, ಜೇಡಿಮಣ್ಣಿನ ಕಲೆ, ಮೂರರಲ್ಲೂ ಕಡ್ಡಾಯವಾಗಿ ಭಾಗವಹಿಸಬೇಕು) ; ಸೃಜನಾತ್ಮಕ ಬರವಣಿಗೆ (ಕಥೆ, ಕವನ, ಪ್ರಬಂಧ ಬರೆಯುವುದು.. ಮೂರರಲ್ಲೂ ಕಡ್ಡಾಯವಾಗಿ ಭಾಗವಹಿಸಬೇಕು) ; ಸೃಜನಾತ್ಮಕ ಪ್ರದರ್ಶನ ಕಲೆ (ಶಾಸ್ತ್ರೀಯ ನೃತ್ಯ, ಜಾನಪದ ನೃತ್ಯ, ಕರ್ನಾಟಕ ಹಾಗೂ ಹಿಂದೂಸ್ತಾನಿ ಶಾಸ್ತ್ರೀಯ ಸಂಗೀತ, ವಾದ್ಯ ಸಂಗೀತ, ಏಕಪಾತ್ರಾಭಿನಯ, ಯೋಗನೃತ್ಯ ಇತ್ಯಾದಿಗಳಲ್ಲಿ ಯಾವುದಾದರೊಂದು ಕಲೆಯನ್ನು ಮಾತ್ರ ಪ್ರದರ್ಶಿಸಲು ಅವಕಾಶವಿರುತ್ತದೆ.

ವಿಜ್ಞಾನದಲ್ಲಿ ನೂತನ ಆವಿಷ್ಕಾರ (ವಿಜ್ಞಾನಕ್ಕೆ ಸಂಬಂಧಪಟ್ಟ ಒಂದು ವಿಷಯದ ಬಗ್ಗೆ ಮಾದರಿ ಪ್ರದರ್ಶನ ಹಾಗೂ ವಿವರಣೆ ಈ ಸ್ಪರ್ಧೆಯಲ್ಲಿ 09 ರಿಂದ 16 ವರ್ಷದ ಮಕ್ಕಳು ಭಾಗವಹಿಸಲು ಅವಕಾಶವಿರುತ್ತದೆ.

ಸ್ಪರ್ಧೆಯಲ್ಲಿ ಪ್ರಥಮ, ದ್ವಿತೀಯ ಬಂದ ಮಕ್ಕಳನ್ನು ರಾಜ್ಯ ಮಟ್ಟಕ್ಕೆ ಆಯ್ಕೆ ಮಾಡಲಾಗುವುದು ಹಾಗೂ ಭಾಗವಹಿಸಿದ ಎಲ್ಲ ಮಕ್ಕಳಿಗೂ ಪ್ರಶಂಸಾ ಪತ್ರ ನೀಡಲಾಗುವುದು. ನವೆಂಬರ್ 8 ರಂದು ಮಧ್ಯಾಹ್ನ 11 ಗಂಟೆಗೆ ವಿಧ್ಯಾದಾನ ಸಮಿತಿ ವಿಡಿಎಸ್‌ಟಿ ಗಂಡು ಮಕ್ಕಳ ಪ್ರೌಢಶಾಲೆ, ಗದಗ ಇಲ್ಲಿ ಏರ್ಪಡಿಸಲಾಗಿದೆ. ಮಕ್ಕಳು ನೇರವಾಗಿ ಬಂದು ಸ್ಪರ್ಧೆಯಲ್ಲಿ ಭಾಗವಹಿಸಬಹ್ಮದು.

ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: 9916152347 ಸಂಪರ್ಕಿಸಬಹುದಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಪ್ರಕಟಣೆ ತಿಳಿಸಿದೆ.

ಹಿಂದೂಸ್ತಾನ್ ಸಮಾಚಾರ್ / lalita MP


 rajesh pande