



ಬಳ್ಳಾರಿ, 05 ನವೆಂಬರ್ (ಹಿ.ಸ.) :
ಆ್ಯಂಕರ್ : ಆರೋಗ್ಯವಂತ ನಾಡನ್ನು ರೂಪಿಸಬೇಕೆಂದರೆ ಮಕ್ಕಳು ಉತ್ತಮ ಆರೋಗ್ಯವಂತರಾಗಿ ಇರಬೇಕು ಎಂದು ಬಳ್ಳಾರಿ ಪೂರ್ವ ವಲಯ ಕ್ಷೇತ್ರ ಶಿಕ್ಷಾಣಾಧಿಕಾರಿ ಲಕ್ಷ್ಮಿದೇವಿ ಅವರು ತಿಳಿಸಿದ್ದಾರೆ.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಮತ್ತು ಜಿಲ್ಲಾ ಪಂಚಾಯಿತಿ ಪೆÇೀಷಣ್ ವಿಭಾಗದಿಂದ ಕೆ.ಎಂ.ಇ.ಅರ್.ಸಿ ಇಲಾಖೆಯ ಸಿಇಪಿಎಂಐಜೆಡ್ ಯೋಜನೆಯಡಿ ಕರ್ನಾಟಕ ಪಬ್ಲಿಕ್ ಶಾಲೆ (ಬಾಲಕಿಯರ) ಯಲ್ಲಿ ನಡೆದ ವಿಶೇಷ ಪೂರಕ ಪೌಷ್ಠಿಕ ಅಹಾರ ವಿತರಣೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಶಾಲಾ ಮಕ್ಕಳಲ್ಲಿರುವ ಅಪೌಷ್ಠಿಕತೆ, ರಕ್ತಹೀನತೆ ಮತ್ತು ಬಹು ಪೆÇೀಷಕಾಂಶಗಳ ನ್ಯೂನ್ನತೆಯನ್ನು ಪರಿಹರಿಸುವ ನಿಟ್ಟಿನಲ್ಲಿ ಬಿಸಿಯೂಟ, ಕ್ಷೀರಭಾಗ್ಯ ಯೋಜನೆ ಮತ್ತು ಎಎನ್ಎಎಫ್ ಯೋಜನೆಯ ಜೊತೆಗೆ ಶಾಲಾವಧಿಯ ನಂತರ ಮಕ್ಕಳಿಗೆ ಉಸುಲಿಕಾಳು ಹಾಗೂ ಹಣ್ಣನ್ನು ವಿತರಿಸಲಾಗುತ್ತದೆ ಎಂದರು.
ಜಿಲ್ಲಾ ಪಂಚಾಯಿತಿ ಪೆÇೀಷಣ್ ವಿಭಾಗದ ಶಿಕ್ಷಣಾಧಿಕಾರಿ ಡಿ. ಕಸ್ತೂರಿ ಅವರು ಪ್ರಾಸ್ತಾವಿಕವಾಗಿ, ರಾಜ್ಯ ಸರ್ಕಾರವು ಶಾಲಾ ಮಕ್ಕಳ ಪೆÇೀಷಕರಂತೆ ಕಾಳಜಿ ವಹಿಸುತ್ತಿದೆ. ಮಕ್ಕಳಿಗೆ ಹಲವಾರು ಸೌಲಭ್ಯಗಳನ್ನು ನೀಡುತ್ತಿದೆ. ಉಸುಲಿ ಕಾಳಲ್ಲಿರುವ ವಿಟಮಿನ್, ಪೆÇ್ರೀಟಿನ್ಗಳು ಮಕ್ಕಳ ದೈಹಿಕ ಬೆಳವಣಿಗೆಯ ಆರೋಗ್ಯಕ್ಕೆ ಸಹಕಾರಿಯಾಗಲಿದೆ ಎಂದು ಹೇಳಿದರು.
ಬಳ್ಳಾರಿ ಉಪಯೋಜನಾ ಸಮನ್ವಯಾಧಿಕಾರಿಗಳ ಕಚೇರಿಯ ಎಪಿಸಿ ಶಖೀಲ್ ಅಹ್ಮದ್, ಬಳ್ಳಾರಿ ಪಶ್ಚಿಮ ವಲಯದ ಕ್ಷೇತ್ರ ಸಮನ್ವಯಾಧಿಕಾರಿ ಮನೋಹರ್ ಜಿ.ಎಸ್., ಸಿರುಗುಪ್ಪ ತಾಲ್ಲೂಕು ಅಕ್ಷರ ದಾಸೋಹದ ಸಹಾಯಕ ನಿರ್ದೇಶಕ ಝಾಫರ್ ಷರೀಫ್, ಜಿಲ್ಲೆಯ ಅಇPಒIZ ಯೋಜನೆಯ ನಿಕಟಪೂರ್ವ ನೋಡಲ್ ಅಧಿಕಾರಿ ಬಸವರಾಜ್ ಮಿಂಚೇರಿ ಸೇರಿದಂತೆ ವಿದ್ಯಾರ್ಥಿಗಳು ಹಾಗೂ ಇತರರು ಇದ್ದರು.
ಬಳ್ಳಾರಿ ಪೂರ್ವ ಮತ್ತು ಪಶ್ಚಿಮ ವಲಯಗಳ ಅಕ್ಷರ ದಾಸೋಹ ಸಹಾಯಕ ಅಧಿಕಾರಿ ಶಿವನನಾಯ್ಡ್ ಸ್ವಾಗತಿಸಿದರು. ಸಂಡೂರಿನ ಅಕ್ಷರ ದಾಸೋಹ ಯೋಜನೆಯ ಸಹಾಯಕ ನಿರ್ದೇಶಕ ಶ್ರೀಧರಮೂರ್ತಿ.ಪಿ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್