ರಾಯಚೂರು ಜಿಲ್ಲಾ ಮಕ್ಕಳ ರಕ್ಷಣಾ ಘಟಕ : ಎರಡು ಕಂದಮ್ಮಗಳಿಗೆ ಸಂಭ್ರಮದ ನಾಮಕರಣ
ರಾಯಚೂರು, 06 ನವೆಂಬರ್ (ಹಿ.ಸ.) : ಆ್ಯಂಕರ್ : ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಹಾಗೂ ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿ ಮತ್ತು ಸರ್ಕಾರಿ ಮಕ್ಕಳ ಪಾಲನಾ ಸಂಸ್ಥೆಗಳ ಸಹಯೋಗದಲ್ಲಿ ಸರ್ಕಾರಿ ದತ್ತು ಸಂಸ್ಥೆಯ ಎರಡು ಕಂದಮ್ಮಗಳಿಗೆ ನಾಮಕರಣ ಕಾರ್ಯಕ್ರಮವು ನವೆಂಬರ್ 06ರಂದು ಶಾಸ್ತ್ರೋಕ್ತವಾಗಿ ನೆರವೇರಿಸಲ
ರಾಯಚೂರು ಜಿಲ್ಲಾ ಮಕ್ಕಳ ರಕ್ಷಣಾ ಘಟಕ : ಎರಡು ಕಂದಮ್ಮಗಳಿಗೆ ಸಂಭ್ರಮದ  ನಾಮಕರಣ


ರಾಯಚೂರು ಜಿಲ್ಲಾ ಮಕ್ಕಳ ರಕ್ಷಣಾ ಘಟಕ : ಎರಡು ಕಂದಮ್ಮಗಳಿಗೆ ಸಂಭ್ರಮದ  ನಾಮಕರಣ


ರಾಯಚೂರು ಜಿಲ್ಲಾ ಮಕ್ಕಳ ರಕ್ಷಣಾ ಘಟಕ : ಎರಡು ಕಂದಮ್ಮಗಳಿಗೆ ಸಂಭ್ರಮದ  ನಾಮಕರಣ


ರಾಯಚೂರು ಜಿಲ್ಲಾ ಮಕ್ಕಳ ರಕ್ಷಣಾ ಘಟಕ : ಎರಡು ಕಂದಮ್ಮಗಳಿಗೆ ಸಂಭ್ರಮದ  ನಾಮಕರಣ


ರಾಯಚೂರು, 06 ನವೆಂಬರ್ (ಹಿ.ಸ.) :

ಆ್ಯಂಕರ್ : ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಹಾಗೂ ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿ ಮತ್ತು ಸರ್ಕಾರಿ ಮಕ್ಕಳ ಪಾಲನಾ ಸಂಸ್ಥೆಗಳ ಸಹಯೋಗದಲ್ಲಿ ಸರ್ಕಾರಿ ದತ್ತು ಸಂಸ್ಥೆಯ ಎರಡು ಕಂದಮ್ಮಗಳಿಗೆ ನಾಮಕರಣ ಕಾರ್ಯಕ್ರಮವು ನವೆಂಬರ್ 06ರಂದು ಶಾಸ್ತ್ರೋಕ್ತವಾಗಿ ನೆರವೇರಿಸಲಾಯಿತು.

ಎರಡು ತಿಂಗಳ ಹಿಂದೆ ಕಲ್ಮಲ ಗ್ರಾಮದ ಹತ್ತಿರ ರಸ್ತೆ ಪಕ್ಕದಲ್ಲಿ ಸಿಕ್ಕಿದ್ದ ಪರಿತ್ಯಕ್ತ ಗಂಡು ಮಗುವನ್ನು ಹಾಗೂ ದೇವದುರ್ಗ ತಾಲೂಕಿನ ಗೋಪಾಲಪುರ ಗ್ರಾಮದ ಹತ್ತಿರ ಸಿಕ್ಕಿದ್ದ ಪರಿತ್ಯಕ್ತ ಹೆಣ್ಣು ಹೆಣ್ಣು ಮಗುವನ್ನು ಸಾರ್ವಜನಿಕರ ಸಹಕಾರದಿಂದ ರಕ್ಷಿಸಿ ಸದ್ಯಕ್ಕೆ ಸರ್ಕಾರಿ ದತ್ತು ಸ್ವೀಕಾರ ಕೇಂದ್ರದಲ್ಲಿ ಮಕ್ಕಳು ಪಾಲನೆ ಮತ್ತು ಪೋಷಣೆ ಮಾಡಲಾಗುತ್ತಿದ್ದು, ಈ ಎರಡು ಮಕ್ಕಳಿಗೆ ನಾಮಕರಣ ಕಾರ್ಯಕ್ರಮವನ್ನು ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಅಧಿಕಾರಿಗಳು ಮಕ್ಕಳ ಪಾಲನಾ ಕೇಂದ್ರಗಳ ಅಧೀಕ್ಷಕರು ಮತ್ತು ಸಿಬ್ಬಂದಿ ಅತ್ಯಂತ ಸಂಭ್ರಮದಿAದ ನೆರವೇರಿಸಿದರು.

ಎಲ್ಲ ಸಿಬ್ಬಂದಿ, ತಮ್ಮ ಮನೆಯ ಕಾರ್ಯಕ್ರಮದಂತೆ ಹಬ್ಬದ ರೀತಿಯಲ್ಲಿ ಹೊಸ ಉಡುಗೆ ಧರಿಸಿ ಆಗಮಿಸಿದ್ದರು. ದತ್ತು ಕೇಂದ್ರವನ್ನು ತಳಿರು ತೋರಣಗಳಿಂದ ಅಲಂಕರಿಸಲಾಗಿತ್ತು. ಸಿಬ್ಬಂದಿಯು ನಾಮಕರಣದ ಹಾಡುಗಳನ್ನು ಹೇಳಿದರು.

ಈ ವೇಳೆ ಜಿಲ್ಲಾ ಮಕ್ಕಳ ರಕ್ಷಣಾ ಅಧಿಕಾರಿ ಅಮರೇಶ್ ಹಾವಿನ ಅವರು ಮಕ್ಕಳಿಗೆ ನಾಮಕರಣ ಮಾಡಿದರು. ಯಾರೇ ಸಾರ್ವಜನಿಕರು ಮಕ್ಕಳು ತಮಗೆ ಬೇಡವದಲ್ಲಿ ಅಂತ ಮಕ್ಕಳನ್ನು ಮಕ್ಕಳ ಸಹಾಯವಾಣಿ 1098 ಗೆ ಕರೆ ಮಾಡುವ ಮೂಲಕ ಅಥವಾ ಮಕ್ಕಳನ್ನು ಮಮತೆಯ ತೊಟ್ಟಿಲಿಗೆ ಹಾಕುವ ಮೂಲಕ ಮಕ್ಕಳನ್ನು ದತ್ತು ಸಂಸ್ಥೆಗೆ ಒಪ್ಪಿಸಬೇಕು. ಯಾವುದೇ ಕಾರಣಕ್ಕೂ ಮಕ್ಕಳನ್ನು ಬಿಸಾಡಬಾರದು ಎಂದು ಸಾರ್ವಜನಿಕರಿಗೆ ಸಲಹೆ ಮಾಡಿದರು. ಮತ್ತು ಮಕ್ಕಳನ್ನು ಕಾನೂನು ಪ್ರಕಾರ ಮಾತ್ರ ದತ್ತು ಪಡೆಯಬೇಕು. ಮಕ್ಕಳ ಅಕ್ರಮ ಮಾರಾಟ ಮತ್ತು ಅಕ್ರಮವಾಗಿ ದತ್ತು ಪಡೆಯುವದು ಕಾನೂನು ಬಾಹಿರ ಅಪರಾಧವಾಗಿದ್ದು ಶಿಕ್ಷಾರ್ಹ ಅಪರಾಧವಾಗಿರುತ್ತದೆ ಎಂದು ತಿಳಿಸಿದರು.

ಇದೇ ಸಂದರ್ಭದಲ್ಲಿ ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿಯ ಅಧ್ಯಕ್ಷರಾದ ಸುದರ್ಶನ ಹಾಗೂ ನಿಕಟಪೂರ್ವ ಅಧ್ಯಕ್ಷರಾದ ಮಂಗಳಾ ಹೆಗಡೆ ಹಾಗೂ ಸದಸ್ಯರು ಹಾಗೂ ಬಾಲಕಿಯರ ಬಾಲ ಮಂದಿರದ ಅಧೀಕ್ಷಕಿ ಭಾರತಿ ನಾಯಕ, ರಾಧಾಬಾಯಿ, ಬಾಲಕರ ಬಾಲ ಮಂದಿರದ ಅಧೀಕ್ಷಕ ನಾಗರಾಜ್, ಶೇಖ್ ಮಾಹೇಬೂಬ್ ಹಾಗೂ ಸಿಬ್ಬಂದಿ ಇದ್ದರು.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande