
ಬಳ್ಳಾರಿ, 08 ನವೆಂಬರ್ (ಹಿ.ಸ.) :
ಆ್ಯಂಕರ್ : ಸಿರವಾರ ತಾಲೂಕಿನ ಬಾಗಲವಾಡ ಗ್ರಾಮದಲ್ಲಿ ಇಂದಿರಾ ಬಡಾವಣೆಯಲ್ಲಿರುವ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ ಯೋಜನೆ ಅಡಿಯಲ್ಲಿ 14 ಲಕ್ಷ ರೂ ವೆಚ್ಚದಲ್ಲಿ ನಿರ್ಮಿಸಲಾದ ಶಾಲಾ ತರಗತಿ ಕೊಠಡಿಯನ್ನು ಸಣ್ಣ ನೀರಾವರಿ ಹಾಗೂ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯ ಸಚಿವರಾದ ಎನ್ ಎಸ್ ಬೋಸರಾಜು ಹಾಗೂ ಮಾನ್ವಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಹಂಪಯ್ಯ ನಾಯಕ ಅವರು ನೂತನ ತರಗತಿ ಕೊಠಡಿಯನ್ನು ಲೋಕಾರ್ಪಣೆ ಗೊಳಿಸಿದರು.
ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಯಿಂದ ಗ್ರಾಮೀಣ ಭಾಗದ ಮಕ್ಕಳ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ ನೀಡುವ ನಿಟ್ಟಿನಲ್ಲಿ ಶಾಲೆಗಳಿಗೆ ಹೆಚ್ಚುವರಿ ಕೊಠಡಿಗಳ ನಿರ್ಮಾಣ ಹಾಗೂ ಶಾಲೆಗಳಿಗೆ ಮೂಲ ಸೌಲಭ್ಯಗಳನ್ನು ಒದಗಿಸಲು ಹೆಚ್ಚಿನ ಅನುದಾನವನ್ನ ಮೀಸಲಿಡಲಾಗುತ್ತಿದೆ. ಸಾರ್ವಜನಿಕರು ಮಕ್ಕಳ ಶಿಕ್ಷಣದ ಬಗ್ಗೆ ಹೆಚ್ಚಿನ ಕಾಳಜಿ ವಹಿಸಿ ಶಾಲೆಗಳಿಗೆ ಮಕ್ಕಳನ್ನು ಕಳುಹಿಸಿ ವಿದ್ಯಾವಂತರನ್ನಾಗಿ ಮಾಡಬೇಕು ಎಂದು ತಿಳಿ ಹೇಳಿದರು.
ಈ ಸಂದರ್ಭದಲ್ಲಿ ಮಾನ್ವಿ ನಗರ ಯೋಜನ ಪ್ರಾಧಿಕಾರದ ಅಧ್ಯಕ್ಷರಾದ ಅಬ್ದುಲ್ ಗಪೂರ್, ಕಾಂಗ್ರೆಸ್ ಮುಖಂಡರಾದ ಶರಣಯ್ಯ ನಾಯಕ್ ಗ್ಯಾರಂಟಿ ಯೋಜನೆಗಳ ಮಾನ್ವಿ ತಾಲೂಕ ಅಧ್ಯಕ್ಷರಾದ ಬಿಕೆ ಅಮರೇಶಪ್ಪ ತಿಪ್ಪಣ್ಣ ಬಾಗಲವಾಡ ಖಾಲಿದ್ ಗುರು ಶಿವಕುಮಾರ್ ಬಾಗಲವಾಡ ದೇವೇಂದ್ರಪ್ಪ, ಹಿರಿಯರಾದ ಶಿವಮೂರ್ತಿ ರುದ್ರಪ್ಪ ಅಂಗಡಿ ಶೇಖರ್ ರೆಡ್ಡಿ ಸತ್ಯನಾರಾಯಣ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್