ಕರ್ನಾಟಕ ವಾಸ್ತುಶಿಲ್ಪ ತೊಟ್ಟಿಲು ಹಾಗು ಪ್ರಯೋಗಾಲಯ : ಸಚಿವ ಎಚ್.ಕೆ.ಪಾಟೀಲ
ಗದಗ, 09 ನವೆಂಬರ್ (ಹಿ.ಸ.) : ಆ್ಯಂಕರ್ : ಕರ್ನಾಟಕದಲ್ಲಿರುವ ವೈವಿದ್ಯಮಯ ಸ್ಮಾರಕಗಳು ಎಲ್ಲಿಯೂ ಕಂಡು ಬರುವುದಿಲ್ಲ ಹಾಗಾಗಿ ಕರ್ನಾಟಕ ವಾಸ್ತುಶಿಲ್ಪಗಳ ತೊಟ್ಟಿಲು ಹಾಗು ಪ್ರಯೋಗಾಲಯ ಎಂದು ಸಚಿವ ಎಚ್.ಕೆ.ಪಾಟೀಲ ಹೇಳಿದರು. ಗದಗ ನಗರದ ಮಹಾತ್ಮ ಗಾಂಧಿ ಆರ್ ಡಿ ಪಿ ಆರ್ ವಿಶ್ವ ವಿದ್ಯಾಲಯದಲ್ಲಿ ಕರ್ನಾಟಕ ಇ
ಫೋಟೋ


ಗದಗ, 09 ನವೆಂಬರ್ (ಹಿ.ಸ.) :

ಆ್ಯಂಕರ್ : ಕರ್ನಾಟಕದಲ್ಲಿರುವ ವೈವಿದ್ಯಮಯ ಸ್ಮಾರಕಗಳು ಎಲ್ಲಿಯೂ ಕಂಡು ಬರುವುದಿಲ್ಲ ಹಾಗಾಗಿ ಕರ್ನಾಟಕ ವಾಸ್ತುಶಿಲ್ಪಗಳ ತೊಟ್ಟಿಲು ಹಾಗು ಪ್ರಯೋಗಾಲಯ ಎಂದು ಸಚಿವ ಎಚ್.ಕೆ.ಪಾಟೀಲ ಹೇಳಿದರು.

ಗದಗ ನಗರದ ಮಹಾತ್ಮ ಗಾಂಧಿ ಆರ್ ಡಿ ಪಿ ಆರ್ ವಿಶ್ವ ವಿದ್ಯಾಲಯದಲ್ಲಿ ಕರ್ನಾಟಕ ಇತಿಹಾಸ ಅಕಾಡೆಮಿ, ಮಹಾತ್ಮ ಗಾಂಧಿ ಆರ್ ಡಿ ಪಿ ಆರ್ ವಿಶ್ವ ವಿದ್ಯಾಲಯ, ಲಕ್ಕುಂಡಿ ಪಾರಂಪರಿಕ ಪ್ರದೇಶ ಅಭಿವೃದ್ಧಿ ಪ್ರಾಧಿಕಾರ ಸಹಯೋಗದಲ್ಲಿ ಜರುಗಿದ ೩೯ ನೇ ವಾರ್ಷಿಕ ರಾಷ್ಟ್ರೀಯ ಸಮ್ಮೇಳನ ಮತ್ತು ಪ್ರಶಸ್ತಿ ಪ್ರಧಾನ ಸಮಾರಂಭವನ್ನು ಸಚಿವ ಎಚ್. ಕೆ ಪಾಟೀಲ ಉದ್ಘಾಟಿಸಿ ಮಾತನಾಡಿದರು.

ಗದಗ ಜಿಲ್ಲೆಯಲ್ಲಿ ಅತಿಹೆಚ್ಚು ವಾಸ್ತು ಶಿಲ್ಪಗಳಿದ್ದು, ಇಲ್ಲಿರುವ ಒದೊಂದು ಕಲ್ಲೂ ಒದೊಂದು ಇತಿಹಾಸ ಹೇಳುತ್ತವೆ, ಲಕ್ಕುಂಡಿ ಯಲ್ಲಿ ೧೦೧ ಬಾವಿ ೧೦೧ ಗುಡಿಗಳಿದ್ದು, ಲಕ್ಕುಂಡಿ ಪ್ರಾಧಿಕಾರದ ಸಹಯೋಗದಲ್ಲಿ ಉತ್ಖನನ ಕಾರ್ಯ ಹಮ್ಮಿಕೊಂಡು ಹುದುಗಿ ಹೋದ ಶಾಸನ, ಕಲಾಕೃತಿಗಳ್ನು ಸಂಗ್ರಹಿಸಿ ತೆರೆದ ಮೈಧಾನದಲ್ಲಿ ಇಡಲಾಗಿದೆ. ಗದಗ ಜಿಲ್ಲೆ ನಯಸೇನ, ಭೀಮಸೇನ ಜೋಶಿ, ಕುಮಾರವ್ಯಾಸ, ಹುಯೀಲಗೋಳ ನಾರಾಯಣ, ಕೆ.ಎಚ್.ಪಾಟೀಲ ರಂತಹ ಅನೇಕ ಮಹಾತ್ಮರು ಜನಿಸಿ ಜಿಲ್ಲೆಯನ್ನು ಶ್ರೀಮಂತಗೊಳಿಸಿದ್ದಾರೆ. ಹಾಗಾಗಿ ಇತಿಹಾಸಕಾರರು ಗದಗ ಜಿಲ್ಲೆಯ ಪ್ರಾಮುಖ್ಯವನ್ನು ತಿಳಿಯಬೇಕು ಎಂದರು.

ಜಿಲ್ಲೆಯಲ್ಲಿ ಹರಿದಿರುವ ತುಂಗಭದ್ರಾ ಮತ್ತು ಮಲಪ್ರಭಾ ನದಿಯ ದಂಡೆಗಳು ಪ್ರಾಚೀನ ಕಾಲದಲ್ಲಿಯೇ ನಾಗರಿಕತೆಯನ್ನು ಹುಟ್ಟುಹಾಕಿವೆ. ಈ ನೆಲದಲ್ಲಿ ಅನೇಕ ಪ್ರಾಗೈತಿಹಾಸಿಕ ಕುರುಹುಗಳು ಕಂಡುಬಂದಿವೆ ಎಂದು ಹೇಳಿದರು.

‘ಕರ್ನಾಟಕದಲ್ಲಿರುವ ಪ್ರಾಚ್ಯಾವಶೇಷಗಳ ಕುರಿತು ಸಂಪೂರ್ಣ ಸಮೀಕ್ಷೆ ಮಾಡುವ ಕೆಲಸ ಆರಂಭಿಸಲಾಗಿದೆ ಸ್ಮಾರಕ ದತ್ತು ಯೋಜನೆಯಡಿಯಲ್ಲಿ ಇತಿಹಾಸಕಾರರು ಆಸಕ್ತಿವಹಿಸಿ ರಾಜ್ಯದ ೧೧೯ ತಾಲೂಕಗಳಲ್ಲಿ ಸರ್ವೇ ಮಾಡಿ ಸಮೀಕ್ಷಾ ಕಾರ್ಯವನ್ನು ಪೂರ್ಣಗೋಳಿಸಬೇಕು ನಂತರ ಡಿಜಿಟಲಿಕರಣ ಗೊಳಿಸಬೇಕು ಎಂದು ಅವರು ಹೇಳಿದರು.

ಸಮ್ಮೇಳನದ ಸರ್ವಾಧ್ಯಕ್ಷ ಡಾ.ರಾಜಾರಾಮ ಹೆಗಡೆ ಮಾತನಾಡಿ ಗ್ರಾಮೀಣ ಭಾಗದ ಐತಿಹಾಸಿಕ ಸ್ಥಳಗಳಲ್ಲಿ ಹುದುಗಿಹೋದ ಪ್ರಾಚ್ಯಾವಶೇಗಳ ಉತ್ಖನನ ಕಾರ್ಯ ಮಾಡಿ ಸಂಶೋಧನೆ ಮಾಡಲು ನಿಟ್ಟಿನಲ್ಲಿ ಸರ್ವೆ ಕಾರ್ಯವನ್ನು ಲಕ್ಕುಂಡಿಯಲ್ಲಿ ಮಾಡಿದ ಸಚಿವರು ಇತಿಹಾಸಕಾರರಿಗೆ ಸ್ಪೂರ್ತಿಆಗಿದ್ದಾರೆ ಮತ್ತು ಇತಿಹಾಸ ಬಗ್ಗೆ ಅವರ ಕಾಳಜಿ ನಮ್ಮೆಲ್ಲರಿಗು ಧೈರ್ಯತುಂಬಿದೆ ಸಚಿವರ ಆಶಯದಂತೆ ರಾಜ್ಯದ ಪ್ರತಿ ತಾಲೂಕಿನಲ್ಲಿ ಸರ್ವೆ ಕೈಗೊಂಡು ಮಾಹಿತಿಯನ್ನು ಕಲೆಹಾಕಲು ಇದು ಸುವರ್ಣ ಕ್ಷಣವಾಗಿದೆ ಎಂದರು.

ಸಮಾರಂಭದಲ್ಲಿ ಇತಿಹಾಸತಜ್ಞ ಡಾ.ಶ್ರೀನಿವಾಸ ವಿ.ಪಾಡಿಗಾರ, ಡಾ.ಕೆ.ವಸಂತಲಕ್ಷ್ಮೀ, ಡಾ.ಎಸ್.ನಾಗರಾಜಪ್ಪ, ಡಾ.ಮಲ್ಲಿಕಾರ್ಜುನ ಕುಂಬಾರ, ಡಾ.ಶರಣಬಸಪ್ಪ ಕೋಲ್ಕಾರ, ಡಾ.ರಮೇಶ ನಾಯಕ, ಡಾ.ಪದ್ಮಜಾ ದೇಸಾಯಿ, ಪ್ರೋ ಶಾಶ್ವತಸ್ವಾಮಿ ಮುಕ್ಕುಂದಿಮಠ, ಡಾ.ಎಂ.ಕೋಟ್ರೇಶ್, ಮಹಾದೇವ ಜಗತಾಪ, ಡಾ.ಎ.ಓ.ನರಸಿಂಹಮೂರ್ತಿ, ಒವನ್ ಮೌರ್ಯ ಚಕ್ರವರ್ತಿ ಅವರಿಗೆ ಪ್ರಶಸ್ತಿ ಪ್ರಧಾನ ಮಾಡಲಾಯಿತು.

ವಿಶ್ವವಿದ್ಯಾಲಯದ ಸಹಾಯಕ ನಿರ್ದೇಶಕ ಡಾ.ಅಬ್ದುಲ್ ಮುಲ್ಲಾ ಪ್ರಾಸ್ತಾವಿಕಾವಾಗಿ ಮಾತನಾಡಿ ಸ್ವಾಗತಿಸಿದರು.

ಕಾರ್ಯಕ್ರಮದಲ್ಲಿ ಇತಿಹಾಸ ತಜ್ಞ ಡಾ.ಲಕ್ಷ್ಮಣ್ ತೆಲಗಾವಿ, ವಿಶ್ವವಿದ್ಯಾಲಯದ ಕುಲಪತಿ ಡಾ.ಸುರೇಶ ನಾಡಗೌಡರ ,ಶರಣು ಗೋಗೇರಿ, ಡಾ. ದೇವರಕೊಂಡಾರೆಡ್ಡಿ ಹಾಜರಿದ್ದರು. ದತ್ತ ಪ್ರಸನ್ನ ಪಾಟೀಲ ಕಾರ್ಯಕ್ರಮ ನಿರ್ವಹಿಸಿದರು.

ಹಿಂದೂಸ್ತಾನ್ ಸಮಾಚಾರ್ / lalita MP


 rajesh pande