ಲಿಂಗಾಯತ ಧರ್ಮ, ಭಾಷೆ ಕನ್ನಡ : ಶಶಿಧರ ತೋಡಕರ
ಗದಗ, 09 ನವೆಂಬರ್ (ಹಿ.ಸ.) : ಆ್ಯಂಕರ್ : ಕನ್ನಡ ನಾಡು-ನುಡಿ, ನೆಲ-ಜಲದ ಸಮಸ್ಯೆಗಳು ಎದುರಾದಾಗ ಅನೇಕ ಹೋರಾಟಗಳಲ್ಲಿ ತೋಂಟದಾರ್ಯ ಮಠದ ಪಾತ್ರ ಹಿರಿದಾದುದು. ಮಠಗಳು ಕನ್ನಡ ಉಳಿವಿಗಾಗಿ ಬೆಳವಣಿಗೆಗಾಗಿ ಪ್ರಯತ್ನಿಸಿದಾಗ ನಮ್ಮ ನಾಡು ನುಡಿ ಸಂಸ್ಕೃತಿ ಸಾಹಿತ್ಯ ಬೆಳೆಯಲು ಸಾಧ್ಯ ಎಂದು ಜಗದ್ಗುರು ಡಾ ತೋಂಟದ
ಫೋಟೋ


ಗದಗ, 09 ನವೆಂಬರ್ (ಹಿ.ಸ.) :

ಆ್ಯಂಕರ್ : ಕನ್ನಡ ನಾಡು-ನುಡಿ, ನೆಲ-ಜಲದ ಸಮಸ್ಯೆಗಳು ಎದುರಾದಾಗ ಅನೇಕ ಹೋರಾಟಗಳಲ್ಲಿ ತೋಂಟದಾರ್ಯ ಮಠದ ಪಾತ್ರ ಹಿರಿದಾದುದು. ಮಠಗಳು ಕನ್ನಡ ಉಳಿವಿಗಾಗಿ ಬೆಳವಣಿಗೆಗಾಗಿ ಪ್ರಯತ್ನಿಸಿದಾಗ ನಮ್ಮ ನಾಡು ನುಡಿ ಸಂಸ್ಕೃತಿ ಸಾಹಿತ್ಯ ಬೆಳೆಯಲು ಸಾಧ್ಯ ಎಂದು ಜಗದ್ಗುರು ಡಾ ತೋಂಟದ ಸಿದ್ದರಾಮ ಮಹಾಸ್ವಾಮಿಗಳು ಆಶೀರ್ವಚನ ನೀಡಿದರು.

ಲಿಂಗಾಯತ ಪ್ರಗತಿಶೀಲ ಸಂಘದ ವತಿಯಿಂದ ನಡೆದ 2770 ನೇ ಶಿವಾನುಭವದ ಸಾನ್ನಿಧ್ಯ ವಹಿಸಿ ಮಾತನಾಡಿದ ಶ್ರೀಗಳು, ಕರ್ನಾಟಕದ ಗಡಿಭಾಗ ಚಿಂಚಣಿಯಲ್ಲಿ ಹಾಗೂ ಬೈರನಟ್ಟಿಯಲ್ಲಿ ಭಾಷೆಯ ಉಳಿವಿಗಾಗಿ ಕನ್ನಡ ರಥವನ್ನು ಎಳೆಯುತ್ತಾರೆ. ಕರ್ನಾಟಕದಲ್ಲಿ ಕನ್ನಡ ಮಠವೆಂದರೆ ತೋಂಟದಾರ್ಯ ಮಠ. ಕನ್ನಡ ಜಗದ್ಗುರುಗಳೆಂದರೆ ಸಿದ್ದಲಿಂಗ ಶ್ರೀಗಳು. ಆರುನೂರಕ್ಕೂ ಹೆಚ್ಚು ಕನ್ನಡ ಮೌಲಿಕ ಗ್ರಂಥಗಳನ್ನು ಪ್ರಕಟಿಸುವ ಮೂಲಕ ಕನ್ನಡ ಸಾಹಿತ್ಯಲೋಕವನ್ನು ಶ್ರೀಮಂತಗೊಳಿಸಿದ್ದಾರೆ ಎಂದು ಶ್ರೀಗಳು ಮಾತನಾಡಿದರು.

ಧಾರವಾಡದ ಹಿರೇಮಲ್ಲೂರ ಈಶ್ವರನ್ ಪದವಿ ಪೂರ್ವ ಕಾಲೇಜಿನ ಪ್ರಾಚಾರ್ಯ ಶಶಿಧರ ತೋಡಕರ ಮಾತನಾಡಿ, ಕನ್ನಡ ಮತ್ತು ಕರ್ನಾಟಕ ಎರಡು ಒಂದನ್ನೊಂದು ಬಿಟ್ಟಿರಲಾರವು. ಕರ್ನಾಟಕ್ಕೆ ಗಡಿ ಇದೆ. ಆದರೆ ಕನ್ನಡಕ್ಕೆ ಗಡಿಯ ಹಂಗಿಲ್ಲ. ಲಿಂಗಾಯತರಿಗೆ ಧರ್ಮ ಭಾμÉ ಕನ್ನಡ ಒಂದೆ. ಸಿದ್ದಲಿಂಗ ಶ್ರೀಗಳು ಪೀಠಾಧಿಪತಿಗಳಾಗಿ ಕನ್ನಡ ಕೈಂಕರ್ಯಕ್ಕೆ ಕೊನೆಯುಸಿರು ಇರುವವರೆಗೂ ಹೋರಾಡಿದರು. ಕನ್ನಡದ ಜಗದ್ಗುರುಗಳೆ ಆದರು. ಶ್ರೀಮಠದಿಂದ 600 ಕ್ಕೂ ಹೆಚ್ಚು ಪುಸ್ತಕಗಳನ್ನು ಪ್ರಕಟಿಸಿದ್ದಾರೆ. ಕನ್ನಡ ಉಳಿದರೆ ನಾವೆಲ್ಲಾ ಉಳಿಯುತ್ತೇವೆ ಎಂದು ಹೇಳುತ್ತಿದ್ದರು ಎಂದು ಮಾತನಾಡಿದರು.

ಹು.ಧಾ ಮಹಾನಗರಸಭೆ ನೀಡುವ ರಾಜ್ಯೋತ್ಸವ ಧೀಮಂತ ಪ್ರಶಸ್ತಿಗೆ ಭಾಜನರಾದ ಶಶಿಧರ ತೋಡಕರ ಅವರನ್ನು, ಕನ್ನಡ ಜಾನಪದ ಪರಿಷತ್‍ಗೆ ನೂತನವಾಗಿ ಜಿಲ್ಲಾಧ್ಯಕ್ಷರಾಗಿ ನೇಮಕವಾದ ನಿವೃತ್ತ ಉಪನಿರ್ದೇಶಕರಾದ ಐ.ಬಿ. ಬೆನಕೊಪ್ಪರ ಅವರನ್ನು ಮತ್ತು ನೆಲ ಜಲ ಭಾಷೆಗಾಗಿ ಹೋರಾಟ ಮಾಡುತ್ತಿರುವ ಕನ್ನಡ ರಕ್ಷಣಾ ವೇದಿಕೆಯ ಜಿಲ್ಲಾಧ್ಯಕ್ಷರಾದ ಹನುಮಂತಪ್ಪ ಎಚ್. ಅಬ್ಬಿಗೇರಿ ಇವರುಗಳನ್ನು ಸನ್ಮಾನಿಸಲಾಯಿತು.

ವಚನ ಸಂಗೀತ ಸೇವೆಯನ್ನು ಗುರುನಾಥ್ ಸುತಾರ ಹಾಗೂ ಮೃತ್ಯುಂಜಯ ಹಿರೇಮಠ ನಡೆಸಿಕೊಟ್ಟರು. ಧಾರ್ಮಿಕ ಗ್ರಂಥ ಪಠಣವನ್ನು ಕುಮಾರಿ ಅನ್ವಿತಾ ಟಿ ಪೇತ್ತಾದ ಹಾಗೂ ವಚನ ಚಿಂತನವನ್ನು ಕುಮಾರಿ ತುಳಸಿಪ್ರಿಯಾ ಸಿ ಶಿರಹಟ್ಟಿ ಮಾಡಿದರು.

ಮುಖ್ಯ ಅತಿಥಿಗಳಾಗಿ ಎಸ್.ಎಸ್. ಹರ್ಲಾಪೂರ ಉಪಸ್ಥಿತರಿದ್ದರು. ದಾಸೋಹ ಸೇವೆಯನ್ನು ಬಸಪ್ಪ ಅಮೃತಪ್ಪ ಪಲ್ಲೇದ, ಅಣ್ಣಿಗೇರಿ ವಹಿಸಿಕೊಂಡಿದ್ದರು. ತೋಂಟದಾರ್ಯ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳಿಂದ ಕನ್ನಡ ನಾಡು ನುಡಿಯ ಕುರಿತು ತುಂಬಾ ಆಕರ್ಷಕವಾದ ನೃತ್ಯ ಮತ್ತು ರೂಪಕಗಳ ಪ್ರದರ್ಶನ ನಡೆಯಿತು. ವಿದ್ಯಾರ್ಥಿಗಳ ನೃತ್ಯವನ್ನು ಮನಮೋಹಕವಾಗಿ ಶಿಕ್ಷಕರು ಆಯೋಜನೆ ಮಾಡಿದ್ದರು.

ಲಿಂಗಾಯತ ಪ್ರಗತಿಶೀಲ ಸಂಘದ ಅಧ್ಯಕ್ಷರಾದ ಬಾಲಚಂದ್ರ ಭರಮಗೌಡ್ರ ಉಪಾಧ್ಯಕ್ಷರಾದ ಡಾ. ಉಮೇಶ ಪುರದ ಹಾಗೂ ವಿದ್ಯಾ ಪ್ರಭು ಗಂಜಿಹಾಳ ಕಾರ್ಯದರ್ಶಿ ವೀರಣ್ಣ ಗೋಟಡಕಿ ಸಹಕಾರ್ಯದರ್ಶಿ ಸೋಮನಾಥ ಪುರಾಣಿಕ ಹಾಗೂ ನಾಗರಾಜ್ ಹಿರೇಮಠ ಸಂಘಟನಾ ಕಾರ್ಯದರ್ಶಿ ಮಹೇಶ್ ಗಾಣಿಗೇರ ಕೋಶಾಧ್ಯಕ್ಷ ಬಸವರಾಜ ಕಾಡಪ್ಪನವರ ಹಾಗೂ ಶಿವಾನುಭವ ಸಮಿತಿಯ ಸಹ ಚೇರ್ಮನ್ ಶಿವಾನಂದ ಹೊಂಬಳ ಹಾಗೂ ಮಠದ ಭಕ್ತರು ಉಪಸ್ಥಿತರಿದ್ದರು. ಶಿವಾನುಭವ ಸಮಿತಿಯ ಚೇರ್ಮನ್ ಐ.ಬಿ. ಬೆನಕೊಪ್ಪ ಸ್ವಾಗತಿಸಿದರು. ಶರಣ ಅಶೋಕ ಹಾದಿಯನ್ನು ಕಾರ್ಯಕ್ರಮ ನಿರೂಪಿಸಿದರು.

ಪೋಟೋಕ್ಯಾಪ್ಸನ್ : ಹು.ಧಾ ಮಹಾನಗರಸಭೆ ನೀಡುವ ರಾಜ್ಯೋತ್ಸವ ಧೀಮಂತ ಪ್ರಶಸ್ತಿಗೆ ಭಾಜನರಾದ ಶಶಿಧರ ತೋಡಕರ ಅವರನ್ನು, ಕನ್ನಡ ಜಾನಪದ ಪರಿಷತ್‍ಗೆ ನೂತನವಾಗಿ ಜಿಲ್ಲಾಧ್ಯಕ್ಷರಾಗಿ ನೇಮಕವಾದ ನಿವೃತ್ತ ಉಪನಿರ್ದೇಶಕರಾದ ಐ.ಬಿ. ಬೆನಕೊಪ್ಪರ ಅವರನ್ನು ಮತ್ತು ನೆಲ ಜಲ ಭಾμÉಗಾಗಿ ಹೋರಾಟ ಮಾಡುತ್ತಿರುವ ಕನ್ನಡ ರಕ್ಷಣಾ ವೇದಿಕೆಯ ಜಿಲ್ಲಾಧ್ಯಕ್ಷರಾದ ಹನುಮಂತಪ್ಪ ಎಚ್. ಅಬ್ಬಿಗೇರಿ ಇವರುಗಳನ್ನು ಸನ್ಮಾನಿಸಲಾಯಿತು.

ಹಿಂದೂಸ್ತಾನ್ ಸಮಾಚಾರ್ / lalita MP


 rajesh pande