ಡಿಸೆಂಬರ್ 03 ರಂದು `ರಫ್ತು ಉತ್ತೇಜನ’ ಕಾರ್ಯಾಗಾರ
ಬಳ್ಳಾರಿ, 01 ಡಿಸೆಂಬರ್ (ಹಿ.ಸ.) : ಆ್ಯಂಕರ್ : ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ, ಜಿಲ್ಲಾ ಕೈಗಾರಿಕಾ ಕೇಂದ್ರ ವತಿಯಿಂದ ಆರ್‍ಎಎಂಪಿ ಯೋಜನೆಯಡಿ ಉದ್ಯಮಶೀಲತಾ ಚಟುವಟಿಕೆಗಳನ್ನು ಬೆಂಬಲಿಸಲು, ಪೋಷಿಸಲು ಹಾಗೂ ಸ್ಥಳೀಯ ಮಟ್ಟದ ಎಂಎಸ್‍ಎಂಇ ಕಾರ್ಯಕ್ಷಮತೆಯನ್ನು ಹೆಚ್ಚಿಸಲು ರಫ್ತು ಉತ್ತೇಜನ ಕುರಿತು ಡಿಸೆಂ
ಡಿಸೆಂಬರ್ 03 ರಂದು `ರಫ್ತು ಉತ್ತೇಜನ’ ಕಾರ್ಯಾಗಾರ


ಬಳ್ಳಾರಿ, 01 ಡಿಸೆಂಬರ್ (ಹಿ.ಸ.) :

ಆ್ಯಂಕರ್ : ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ, ಜಿಲ್ಲಾ ಕೈಗಾರಿಕಾ ಕೇಂದ್ರ ವತಿಯಿಂದ ಆರ್‍ಎಎಂಪಿ ಯೋಜನೆಯಡಿ ಉದ್ಯಮಶೀಲತಾ ಚಟುವಟಿಕೆಗಳನ್ನು ಬೆಂಬಲಿಸಲು, ಪೋಷಿಸಲು ಹಾಗೂ ಸ್ಥಳೀಯ ಮಟ್ಟದ ಎಂಎಸ್‍ಎಂಇ ಕಾರ್ಯಕ್ಷಮತೆಯನ್ನು ಹೆಚ್ಚಿಸಲು ರಫ್ತು ಉತ್ತೇಜನ ಕುರಿತು ಡಿಸೆಂಬರ್ 03 ರಂದು ಬೆಳಿಗ್ಗೆ 10.30 ಗಂಟೆಗೆ ವಿಜಯನಗರ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯದ ಸಭಾಂಗಣದಲ್ಲಿ ಒಂದು ದಿನದ ಜಾಗೃತಿ ಕಾರ್ಯಾಗಾರ ಹಮ್ಮಿಕೊಳ್ಳಲಾಗಿದೆ.

ಕಾರ್ಯಾಗಾರದಲ್ಲಿ ವಿದ್ಯಾರ್ಥಿಗಳಿಗೆ, ಉದ್ಯಮಿದಾರರಿಗೆ ವ್ಯಾಪಾರ ಅವಕಾಶಗಳ ಕುರಿತು ಮಾರ್ಗದರ್ಶನ ವ್ಯವಹಾರ ಹಾಗೂ ರಫ್ತು ಪ್ರಚಾರÀ, ತಂತ್ರಜ್ಞಾನದ ಉನ್ನತೀಕರಣ, ಗುಣಮಟ್ಟದ ಪ್ರಮಾಣೀಕರಣಕ್ಕೆ ಬೆಂಬಲ, ಬ್ರಾಂಡಿಂಗ್ ಕುರಿತು ಜಾಗೃತಿ ಮೂಡಿಸಲಾಗುತ್ತದೆ.

ಆಸಕ್ತರು ಕಾರ್ಯಾಗಾರದಲ್ಲಿ ಭಾಗವಹಿಸಬಹುದಾಗಿದೆ ಎಂದು ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕರು ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande