ಏಡ್ಸ್ ನಿರ್ಮೂಲನೆಗೆ ಸಾರ್ವಜನಿಕರು ಸಹಕರಿಸಬೇಕು : ನ್ಯಾ.ಹೆಚ್.ಎ.ಸಾತ್ವಿಕ್
ರಾಯಚೂರು, 01 ಡಿಸೆಂಬರ್ (ಹಿ.ಸ.) : ಆ್ಯಂಕರ್ : ಭಯಾನಕ ಏಡ್ಸ್ ಕಾಯಿಲೆಯನ್ನು 2030ರ ವೇಳೆಗೆ ಸಂಪೂರ್ಣ ನಿರ್ಮೂಲನೆ ಮಾಡಲು ಸರ್ಕಾರ, ಆರೋಗ್ಯ ಇಲಾಖೆ ಹತ್ತು-ಹಲವು ಯೋಜನೆಗಳನ್ನು ಹಮ್ಮಿಕೊಂಡು ಶ್ರಮಿಸುತ್ತಿದೆ. ಇದಕ್ಕೆ ಜಿಲ್ಲೆಯ ಸಾರ್ವಜನಿಕರು ಸಹಕಾರ ನೀಡಬೇಕೆಂದು ಗೌರವಾನ್ವಿತ ಜಿಲ್ಲಾ ಕಾನೂನು ಸೇವೆಗ
ಏಡ್ಸ್ ನಿರ್ಮೂಲನೆಗೆ ಸಾರ್ವಜನಿಕರು ಸಹಕರಿಸಬೇಕು: ನ್ಯಾ.ಹೆಚ್.ಎ.ಸಾತ್ವಿಕ್


ಏಡ್ಸ್ ನಿರ್ಮೂಲನೆಗೆ ಸಾರ್ವಜನಿಕರು ಸಹಕರಿಸಬೇಕು: ನ್ಯಾ.ಹೆಚ್.ಎ.ಸಾತ್ವಿಕ್


ಏಡ್ಸ್ ನಿರ್ಮೂಲನೆಗೆ ಸಾರ್ವಜನಿಕರು ಸಹಕರಿಸಬೇಕು: ನ್ಯಾ.ಹೆಚ್.ಎ.ಸಾತ್ವಿಕ್


ರಾಯಚೂರು, 01 ಡಿಸೆಂಬರ್ (ಹಿ.ಸ.) :

ಆ್ಯಂಕರ್ : ಭಯಾನಕ ಏಡ್ಸ್ ಕಾಯಿಲೆಯನ್ನು 2030ರ ವೇಳೆಗೆ ಸಂಪೂರ್ಣ ನಿರ್ಮೂಲನೆ ಮಾಡಲು ಸರ್ಕಾರ, ಆರೋಗ್ಯ ಇಲಾಖೆ ಹತ್ತು-ಹಲವು ಯೋಜನೆಗಳನ್ನು ಹಮ್ಮಿಕೊಂಡು ಶ್ರಮಿಸುತ್ತಿದೆ. ಇದಕ್ಕೆ ಜಿಲ್ಲೆಯ ಸಾರ್ವಜನಿಕರು ಸಹಕಾರ ನೀಡಬೇಕೆಂದು ಗೌರವಾನ್ವಿತ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳು ಹಾಗೂ ಹಿರಿಯ ಶ್ರೇಣಿಯ ದಿವಾನಿ ನ್ಯಾಯಾಧೀಶರಾದ ಹೆಚ್.ಎ.ಸಾತ್ವಿಕ್ ಅವರು ಹೇಳಿದರು.

ಸೋಮವಾರ ನಗರದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಕಚೇರಿಯ ಆವರಣದಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಡ್ಯಾಪ್ಕೋ, ಪೊಲೀಸ್ ಇಲಾಖೆ, ಯುವಜನ ಸಬಲೀಕರಣ ಇಲಾಖೆ, ಶಿಕ್ಷಣ ಇಲಾಖೆ, ರಿಮ್ಸ್, ರೋಟರಿ, ಲಯನ್ಸ್ ಕ್ಲಬ್, ಎನ್‌ವೈಕೆ, ನವೋದಯ ವೈದ್ಯಕೀಯ ಕಾಲೇಜು, ಎ.ಎಮ್.ಈ.ಎಸ್ ಡೆಂಟಲ್ ಕಾಲೇಜು, ಹೊಸ ಬೆಳಕು, ರೆಡ್ ರಿಬ್ಬನ್ ಸೇರಿದಂತೆ ವಿವಿಧ ಸಂಘ ಸಂಸ್ಥೆಗಳ ಆಶ್ರಯದಲ್ಲಿ ವಿಶ್ವ ಏಡ್ಸ್ಸ್ ದಿನಾಚರಣೆ ಅಂಗವಾಗಿ ಆಯೋಜಿಸಿದ್ದ ಜನಜಾಗೃತಿ ಜಾಥಾ ಕಾರ್ಯಕ್ರಮಕ್ಕೆ ಹಸಿರು ಬಾವುಟ ತೋರಿ ಅವರು ಮಾತನಾಡಿದರು.

ಜಗತ್ತಿನ ಎಲ್ಲ ದೇಶಗಳು ಸೋಂಕಿನ ತಡೆಗೆ ಹಗಲಿರಳು ಶ್ರಮಿಸುತ್ತಿವೆ. ಇದಕ್ಕೆ ಭಾರತವು ಹೊರತಾಗಿಲ್ಲ. ಸೋಂಕಿತರನ್ನು ಕಳಂಕರನ್ನಾಗಿ ಮಾಡದೇ ಸಮಾಜಮುಖಿಯಾಗಿಸಲು ಮತ್ತು ಅವರನ್ನು ಎಲ್ಲರಂತೆ ಕಾಣಬೇಕಿದೆ.

ಜೊತೆ ಜೊತೆಗೆ ಇತ್ತೀಚಿನ ಅಂಕಿ ಅಂಶಗಳ ಪ್ರಕಾರ ಯುವ ಜನತೆಗೆ ಹೆಚ್ಚು ಸೋಂಕಿಗೆ ಒಳಗಾಗುತ್ತಿರುವ ಗಂಭೀರತೆಯನ್ನು ಸಮುದಾಯದ ಪ್ರತಿಯೊಬ್ಬರೂ ಸಹ ಅರ್ಥಮಾಡಿಕೊಂಡು ಇಂದಿನಿ0ದಲೆ ಜಾಗೃತರಾಗಬೇಕು. ಸೋಂಕು ಮುಕ್ತ ರಾಯಚೂರು ಜಿಲ್ಲೆಯನ್ನಾಗಿಸಲು ಪ್ರತಿಯೊಬ್ಬರು ಶ್ರಮಿಸಬೇಕೆಂದರು.

ಈ ವೇಳೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಧಿಕಾರಿ ಡಾ.ಸುರೇಂದ್ರ ಬಾಬು ಅವರು ಮಾತನಾಡಿ, ಆಧುನಿಕತೆಯ ಜಂಜಡಗಳ ಮಧ್ಯದಲ್ಲಿರುವ ಯುವಜನತೆಯು ತಮ್ಮ ತಂದೆ, ತಾಯಿ, ಗುರುಗಳ ಮಾರ್ಗದರ್ಶನ ಪಡೆಯುವ ಮೂಲಕ ತಮ್ಮ ತಮ್ಮ ತನ ಉಳಿಸಿಕೊಳ್ಳುವ ಮೂಲಕ ಹೆಚ್‌ಐವಿ ಸೋಂಕಿನ ಹೊಸ ಪ್ರಕರಣಗಳ ತಡೆಗೆ ಕೈಜೊಡಿಸಬೇಕಿದೆ ಎಂದರು.

ಪ್ರಸ್ತುತ ವರ್ಷ ಜಿಲ್ಲೆಯಲ್ಲಿ 55,275 ಜನರನ್ನು ಪರೀಕ್ಷಿಸಲಾಗಿ 236 ಜನರಿಗೆ ಸೊಂಕೀರುವುದು ಕಂಡುಬAದಿದ್ದು, ಇದರಲ್ಲಿ ಯುವ ಸಮುದಾಯದ ಸಂಖ್ಯೆ ಹೆಚ್ಚಳವಾಗುತ್ತಿರುವುದು ಕಳವಳದ ಸಂಗತಿಯಾಗಿದೆ. ಒಮ್ಮೆ ಸೋಂಕಿಗೆ ಒಳಗಾದಲ್ಲಿ ಜೀವನಪೂರ್ತಿ ಜೊತೆಗೆ ಇರುವ ಹೆಚ್‌ಐವಿ ಏಡ್ಸ್ನಿಂದ ಯುವಜನತೆಯನ್ನು ಪಾರುಮಾಡಲು ಎಲ್ಲರೂ ಸೇರಿ ಪ್ರಯತ್ನಿಸೋಣ ಎಂದು ಮನವಿ ಮಾಡಿದರು.

ಎಚ್.ಐ.ವಿ ಮತ್ತು ಏಡ್ಸ್ ಕಾಯಿಲೆಯು ಕಳೆದ 40 ವರ್ಷಗಳಿಂದ ಮಾನವ ಜನಾಂಗವನ್ನು ಕಾಡುತ್ತಿದೆ. ಏಡ್ಸ್ ರೋಗವನ್ನು ಸಮಾಜದಿಂದ ಸಂಪೂರ್ಣವಾಗಿ ತೊಲಗಿಸಲು ಜಿಲ್ಲಾ ಮಟ್ಟದಿಂದ ತಾಲೂಕು ಹಾಗೂ ಗ್ರಾಮ ಮಟ್ಟದವರೆಗೆ ಏಡ್ಸ್ ನಿಯಂತ್ರಣ ಕಾರ್ಯಕ್ರಮಗಳನ್ನು ವಿಸ್ತರಿಸಲಾಗಿದೆ ಎಂದರು.

ಏಡ್ಸ್ ಕುರಿತು ವ್ಯಾಪಕ ಪ್ರಚಾರ: ಏಡ್ಸ್ ಕುರಿತು ಜನಜಾಗೃತಿಗಾಗಿ ಆರೋಗ್ಯ ಇಲಾಖೆಯ ಐಇಸಿ ಕಾರ್ಯಕ್ರಮಗಳ ಮೂಲಕ ಜಿಲ್ಲೆಯ ಎಲ್ಲ ತಾಲೂಕು, ಗ್ರಾಮಗಳಲ್ಲಿ ಜಾನಪದ ಕಲಾ ತಂಡಗಳ ಮೂಲಕ ಅರಿವು ಮೂಡಿಸಿ ಮನೆಮನೆಗೆ ಮಾಹಿತಿ ತಲುಪಿಸಲಾಗುತ್ತಿದೆ. ಕರಪತ್ರ, ಪೋಸ್ಟರ್, ಬಿತ್ತಿಪತ್ರ ಮತ್ತು ಮಾಧ್ಯಮಗಳ ಮೂಲಕ ಏಡ್ಸ್ ಕುರಿತು ವ್ಯಾಪಕ ಪ್ರಚಾರ ಮಾಡಲಾಗುತ್ತಿದೆ. ಯುವ ಸಮೂಹ ಕೇಂದ್ರಿಕರಿಸಿ, ವಿವಿಧ ರೀತಿಯ ಅರಿವು ಕಾರ್ಯಕ್ರಮಗಳನ್ನು ಜಿಲ್ಲೆಯಾದ್ಯಂತ ಹಮ್ಮಿಕೊಳ್ಳಲಾಗುತ್ತಿದೆ ಎಂದರು.

ಸಾಧಕರಿಗೆ ಸನ್ಮಾನ: ರಾಜ್ಯ ಮಟ್ಟದಲ್ಲಿ ರಸಪ್ರಶ್ನೆ ಕಾರ್ಯಕ್ರಮದಲ್ಲಿ ಮೊದಲ ಸ್ಥಾನ ಪಡೆದ ರಾಯಚೂರು ತಾಲೂಕಿನ ಸಗಮಕುಂಟಾ ಸರಕಾರಿ ಪ್ರೌಢಶಾಲಾ ವಿಧ್ಯಾರ್ಥಿಗಳು, ಮುಖ್ಯ ಶಿಕ್ಷಕರು ಹಾಗೂ ಸೋಂಕಿತ ಗರ್ಭಿಣಿಯರ ಹೆರಿಗೆ ಮಾಡಿದ ರಿಮ್ಸ್ ಪ್ರಸೂತಿ ತಜ್ಞರು, ಹೆಚ್ಚು ಪರೀಕ್ಷೆ ಕೈಗೊಂಡ ಜಹೀರಾಬಾದ್ ನಗರ ಆರೋಗ್ಯ ಕೇಂದ್ರ ವೈದ್ಯಾಧಿಕಾರಿಯವರಿಗೆ ಗಣ್ಯರಿಂದ ಸನ್ಮಾನಿಸಲಾಯಿತು.

ನಗರದ ಪ್ರಮುಖ ಬೀದಿಗಳಲ್ಲಿ ಜಾಥಾ: ಏಡ್ಸ್ ಕುರಿತು ಜನಜಾಗೃತಿ ಜಾಥಾನಡಿಗೆಯು ಡಿಎಚ್‌ಒ ಕಚೇರಿಯಿಂದ ಆರಂಭಗೊ0ಡು, ಮಹಾವೀರ್ ಸರ್ಕಲ್, ಭಗತ್ ಸಿಂಗ್ ಸರ್ಕಲ್ ಮೂಲಕ ಡಿಎಚ್‌ಒ ಕಚೇರಿಗೆ ತಲುಪಿತು. ಜಾಥಾದಲ್ಲಿ ಸುಮಾರು 400ಕ್ಕೂ ಹೆಚ್ಚು ವಿದ್ಯಾರ್ಥಿಗಳು ಭಾಗಿಯಾಗಿದ್ದರು.

ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ವಿಜಯಶಂಕರ್, ಜಿಲ್ಲಾ ಆರ್‌ಸಿಹೆಚ್ ಅಧಿಕಾರಿ ಡಾ.ನಂದಿತಾ ಎಂ.ಎನ್. ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ಗಣೇಶ ಕೆ, ರಿಮ್ಸ್ ಪ್ರಸೂತಿ ತಜ್ಞೆ ಡಾ.ಇಸ್ರತ್ ಸಿದ್ದಿಕಿ, ಎಎಮ್‌ಇಎಸ್ ದಂತ ಕಾಲೇಜಿನ ಡಾ.ಸೋಮನಾಥ, ಡಾ.ಅರುಣಾ, ಮಾನಸಿಕ ತಜ್ಞರಾದ ಮನೋಹರ ಪತ್ತಾರ, ರಿಮ್ಸ್ ನರ್ಸಿಂಗ್ ಕಾಲೇಜಿನ ಪ್ರಾಂಶುಪಾಲರಾದ ಶ್ರೀಶೈಲ್ ಶಂಕರ ರೆಡ್ಡಿ, ಸರಕಾರಿ ಮಹಿಳಾ ಕಾಲೇಜು ಪ್ರಾಂಶುಪಾಲರಾದ ಡಾ.ಸುಗುಣಾ, ರೆಡ್ ಕ್ರಾಸ್ ಕಾರ್ಯದರ್ಶಿ ಅತ್ತಾವುಲ್ಲಾ, ಜಿಲ್ಲಾ ಸಂಚಾಲಕರು ಡಾ.ದಂಡಪ್ಪ ಬಿರಾದಾರ, ಡಿಹೆಚ್‌ಇಓ ಈಶ್ವರ ದಾಸಪ್ಪನವರ, ಡ್ಯಾಪ್ಕೋ ಜಿಲ್ಲಾ ಮೇಲ್ವಿಚಾರಕ ಮಲ್ಲಯ್ಯ ಮಠಪತಿ, ಡಿವೈಹೆಚ್‌ಇಓ ಬಸಯ್ಯ, ಅರ್ಚನಾ, ಸಂತೋಷ ಕುಮಾರ್ ಸೇರಿದಂತೆ ಡ್ಯಾಪ್ಕೋ, ಟಿಬಿ ಸಿಬ್ಬಂದಿ ಹಾಗೂ ಕಾಲೇಜು ವಿದ್ಯಾರ್ಥಿಗಳು ಇದ್ದರು.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande