
ಬೆಳಗಾವಿ, 10 ಡಿಸೆಂಬರ್ (ಹಿ.ಸ.) :
ಆ್ಯಂಕರ್ : 2025 ನೇ ಸಾಲಿನ ಕರ್ನಾಟಕ ಸಿನಿ ಮತ್ತು ಸಾಂಸ್ಕೃತಿಕ ಕಾರ್ಯಕರ್ತರ ಕ್ಷೇಮಾಭಿವೃದ್ಧಿ ತಿದ್ದುಪಡಿ ಮಸೂದೆಯ ಪ್ರಸ್ತಾವಕ್ಕೆ ವಿಧಾನ ಸಭೆ ಅಂಗೀಕಾರ ನೀಡಿತು.
ಬೆಳಗಾವಿಯ ಸುವರ್ಣಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನದ ಮೂರನೇ ದಿನ ವಿಧಾನ ಸಭೆಯಲ್ಲಿ ಪ್ರಸ್ತಾವವನ್ನು ಕಾರ್ಮಿಕ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ್ ಎಸ್ ಲಾಡ್ ಅವರು ಮಂಡಿಸಿದರು. ಪ್ರಸ್ತಾವನೆಗೆ ವಿಧಾನಸಭೆಯು ಅಂಗೀಕಾರ ನೀಡಿತು.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa