ಜಲ ಸಂರಕ್ಷಣೆ ಕಾಮಗಾರಿಗಳ ಅನುಷ್ಠಾನ : ದೇಶದಲ್ಲೇ 4ನೇ ಸ್ಥಾನ ಪಡೆದ ನರಗುಂದ
ಗದಗ, 11 ಡಿಸೆಂಬರ್ (ಹಿ.ಸ.) : ಆ್ಯಂಕರ್ : ಜಲಶಕ್ತಿ ಅಭಿಯಾನದ ಮಹತ್ವದ ಭಾಗವಾಗಿರುವ ‘ಜಲಸಂಚಾಯಿ ಜನಭಾಗಿದಾರಿ 1.0’ ಕಾರ್ಯಕ್ರಮದಲ್ಲಿ ಗದಗ ಜಿಲ್ಲೆಯ ನರಗುಂದ ತಾಲೂಕು ಐತಿಹಾಸಿಕ ಸಾಧನೆ ಮಾಡುವ ಮೂಲಕ ಗದಗ ಜಿಲ್ಲೆಗೆ ಕೀರ್ತಿ ತಂದಿದೆ. ಜಲ ಸಂರಕ್ಷಣೆ ಕಾಮಗಾರಿಗಳ ಅನುಷ್ಠಾನದಲ್ಲಿ ಗದಗ ಜಿಲ್ಲೆಯಲ್ಲಿ ನರಗ
ಫೋಟೋ


ಗದಗ, 11 ಡಿಸೆಂಬರ್ (ಹಿ.ಸ.) :

ಆ್ಯಂಕರ್ : ಜಲಶಕ್ತಿ ಅಭಿಯಾನದ ಮಹತ್ವದ ಭಾಗವಾಗಿರುವ ‘ಜಲಸಂಚಾಯಿ ಜನಭಾಗಿದಾರಿ 1.0’ ಕಾರ್ಯಕ್ರಮದಲ್ಲಿ ಗದಗ ಜಿಲ್ಲೆಯ ನರಗುಂದ ತಾಲೂಕು ಐತಿಹಾಸಿಕ ಸಾಧನೆ ಮಾಡುವ ಮೂಲಕ ಗದಗ ಜಿಲ್ಲೆಗೆ ಕೀರ್ತಿ ತಂದಿದೆ. ಜಲ ಸಂರಕ್ಷಣೆ ಕಾಮಗಾರಿಗಳ ಅನುಷ್ಠಾನದಲ್ಲಿ ಗದಗ ಜಿಲ್ಲೆಯಲ್ಲಿ ನರಗುಂದ ತಾಲೂಕು ಪ್ರಥಮ ಸ್ಥಾನ ಗಳಿಸಿದ್ದು, ದೇಶದ 780 ಜಿಲ್ಲೆಗಳಲ್ಲಿ (ಝೋನ್ 3, ಕೆಟಗರಿ 3 ರಲ್ಲಿ) ಗದಗ ಜಿಲ್ಲೆ ನಾಲ್ಕನೇ ಸ್ಥಾನ ಪಡೆಯಲು ನರಗುಂದ ತಾಲೂಕು ಪ್ರಮುಖವಾದ ಕೊಡುಗೆ ನೀಡಿದೆ. ಈ ಮೂಲಕ ಗದಗ ಜಿಲ್ಲೆ ಕೇಂದ್ರದಿಂದ 25 ಲಕ್ಷ ರೂಪಾಯಿಗಳ ನಗದು ಬಹುಮಾನಕ್ಕೆ ಭಾಜನವಾಗಿದೆ.

ನೀರಿಗಾಗಿ ಒಂದಾಗಿ ಪ್ರತಿ ಹನಿ ನೀರನ್ನು ಸಂರಕ್ಷಿಸಿ ಎಂಬ ಧ್ಯೇಯದೊಂದಿಗೆ ಜಲಸಂಚಾಯಿ ಜನಭಾಗಿದಾರಿ 1.0 ಅಭಿಯಾನವನ್ನು ಪ್ರಾರಂಭಿಸಲಾಗಿತ್ತು. ಮಳೆ ನೀರನ್ನು ಸಂಗ್ರಹಿಸುವುದು, ಜಲ ಸಂರಕ್ಷಣೆಯ ಸಂಸ್ಕೃತಿಯನ್ನು ಬೆಳೆಸುವುದು, ನೀರಿನ ಗುಣಮಟ್ಟವನ್ನು ಸುಧಾರಿಸುವುದು, ನೀರಿನ ಕೊರತೆಯ ಸವಾಲಿಗೆ ಸಮುದಾಯದ ಸಹಭಾಗಿತ್ವದೊಂದಿಗೆ ಸಮರ್ಥ ಪರಿಹಾರವನ್ನು ಒದಗಿಸುವುದು ಈ ಕಾರ್ಯಕ್ರಮದ ಮುಖ್ಯ ಗುರಿಯಾಗಿತ್ತು.

ನರಗುಂದ ತಾಲೂಕಿನಿಂದ 4029 ಕಾಮಗಾರಿಗಳ ಮಾಹಿತಿಯನ್ನು ಜಲಸಂಚಾಯಿ ಜನಭಾಗಿದಾರಿ 1.0 ಪೋರ್ಟಲ್ ನಲ್ಲಿ ಅಪಲೋಡ ಮಾಡಲಾಗಿದೆ. ಗದಗ ಜಿಲ್ಲೆಯಿಂದ ಒಟ್ಟು 11971 ಕಾಮಗಾರಿಗಳನ್ನು ಅಪಲೋಡ್ ಮಾಡಲಾಗಿದ್ದು, ಅದರಲ್ಲಿ ಲಕ್ಷ್ಮೇಶ್ವರ-353, ಮುಂಡರಗಿ-1272, ರೋಣ-2669, ಗಜೇಂದ್ರಗಡ-74, ಶಿರಹಟ್ಟಿ-45 ಹಾಗೂ ಗದಗ ತಾಲೂಕಿನಿಂದ 3529 ಜಲಸಂರಕ್ಷಣೆಯ ಕಾಮಗಾರಿಗಳ ಪೋಟೋಗಳನ್ನು ಅಪಲೋಡ್ ಮಾಡಲಾಗಿದೆ. ಈ ಮೂಲಕ ನರಗುಂದ ತಾಲೂಕಿನಿಂದ ಅತೀ ಹೆಚ್ಚು ಜಲಸಂರಕ್ಷಣೆಯ ಕಾಮಗಾರಿಗಳನ್ನು ಅನುಷ್ಠಾನ ಮಾಡಿ ಅವುಗಳ ಪೋಟೋಗಳನ್ನು ಅಪಲೋಡ್ ಮಾಡುವುದರ ಮೂಲಕ ಗದಗ ಜಿಲ್ಲೆ ದೇಶದಲ್ಲೇ ನಾಲ್ಕನೇ ಸ್ಥಾನ ಮತ್ತು ಕರ್ನಾಟಕದಲ್ಲಿ ಪ್ರಥಮ ಸ್ಥಾನ ಪಡೆಯಲು ನರಗುಂದ ತಾಲೂಕು ಪ್ರಮುಖ ಪಾತ್ರ ವಹಿಸಿದೆ..

2024 ಏಪ್ರಿಲ್ 1 ರಿಂದ 2025 ಮಾರ್ಚ್ 31 ರ ವರೆಗಿನ ಅವಧಿಯಲ್ಲಿ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ (ಮನರೇಗಾ) ಸೇರಿದಂತೆ ವಿವಿಧ ಯೋಜನೆಗಳಡಿ ಬೃಹತ್ ಜಲ ಕ್ರಾಂತಿಗೆ ನರಗುಂದ ತಾಲೂಕಿನಲ್ಲಿ ನಾಂದಿ ಹಾಡಲಾಯಿತು. ಈ ಅವಧಿಯಲ್ಲಿ ಒಟ್ಟು ತಾಲೂಕಿನಲ್ಲಿ 4029 ಜಲ ಸಂರಕ್ಷಣೆ ಕಾಮಗಾರಿಗಳನ್ನು ಯಶಸ್ವಿಯಾಗಿ ಪೂರ್ಣಗೊಳಿಸಿ, ಜಲಸಂಚಾಯಿ ಪೋರ್ಟಲ್ನಲ್ಲಿ ದಾಖಲಿಸಲಾಯಿತು. ಮುಖ್ಯವಾಗಿ ವೈಯಕ್ತಿಕ ಮತ್ತು ಸಮುದಾಯ ಬದು ನಿರ್ಮಾಣ, ಮಳೆ ನೀರು ಕೊಯ್ಲು ಕಾಮಗಾರಿಗಳು, ಬೋರವೆಲ್ ರಿಚಾರ್ಜ್ , ಚೆಕ್ ಡ್ಯಾಂ ನಿರ್ಮಾಣದಂತಹ ಕಾಮಗಾರಿಗಳು ಪ್ರಮುಖವಾಗಿವೆ.

ಕೇಂದ್ರ ತಂಡದಿಂದ ಮನ್ನಣೆ

ನರಗುಂದ ತಾಲೂಕಿನ ಈ ಶ್ರಮಕ್ಕೆ ಕೇಂದ್ರ ತಂಡದಿಂದಲೂ ಮನ್ನಣೆ ದೊರೆತಿದೆ. ಕೇಂದ್ರ ನೋಡಲ್ ಅಧಿಕಾರಿಗಳು 2025 ಜೂನ್ 16 ರಿಂದ 21ರ ವರೆಗೆ ಗದಗ ಜಿಲ್ಲೆಯ ಎಲ್ಲ ತಾಲೂಕುಗಳ ಸ್ಥಳ ಪರಿಶೀಲನೆ, ದಾಖಲೆಗಳ ಪರಿಶೀಲನೆ ನಡೆಸಿದರು. ಈ ವೇಳೆ ನರಗುಂದ ತಾಲೂಕಿನ ವಿವಿಧ ಗ್ರಾಮ ಪಂಚಾಯತಗಳಲ್ಲಿ ಕೈಗೊಂಡ ಜಲಸಂರಕ್ಷಣೆಯ ಕಾಮಗಾರಿಗಳಿಗೆ ಭೇಟಿ ನೀಡಿ ಪರಿಶೀಲಿಸಿ ಕಾಮಗಾರಿಗಳ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದರು. ಅಲ್ಲದೆ ಉನ್ನತ ಮಾನದಂಡಗಳನ್ನು ಪೂರೈಸಿರುವುದು ಖಚಿತಪಡಿಸಿಕೊಂಡು ಮೆಚ್ಚುಗೆ ವ್ಯಕ್ತಪಡಿಸಿದ್ದೆ ಗದಗ ಜಿಲ್ಲೆಗೆ ಈ ಪ್ರಶಸ್ತಿ ಬರಲು ಕಾರಣವಾಗಿದೆ.

ಮಾನವ ದಿನಗಳ ಸೃಜನೆಯಲ್ಲಿ ಗದಗ ಜಿಲ್ಲೆಗೆ ನರಗುಂದ ತಾಲೂಕು ಪ್ರಥಮ ಸ್ಥಾನ ಪಡೆದಿದೆ. ನರೇಗಾ ಕೂಲಿಕಾರರ ಇ-ಕೆವೈಸಿ ಕಾರ್ಯದಲ್ಲೂ ನರಗುಂದ ತಾಲೂಕು ಪ್ರಥಮ ಸ್ಥಾನ ಪಡೆದಿದೆ. ಜೊತೆಗೆ ಸದ್ಯ ಜಲಸಂಚಾಯಿ ಜನಭಾಗಿದಾರಿ ಅಭಿಯಾನದಲ್ಲಿ ಗದಗ ಜಿಲ್ಲೆಗೆ ನರಗುಂದ ತಾಲೂಕು ಪ್ರಥಮ ಸ್ಥಾನ ಬಂದಿರುವುದು ಸಂತಸ ತಂದಿದೆ. ಅಂತರ್ಜಲ ಮಟ್ಟ ಹೆಚ್ಚಳ ಮತ್ತು ಪರಿಸರ ಸಂರಕ್ಷಣೆ ಕುರಿತು ತಾಲೂಕಿನ ನರೇಗಾ ಸಿಬ್ದಂದಿಗಳು ಸೇರಿದಂತೆ ಎಲ್ಲ ಅಧಿಕಾರಿಗಳು ಶ್ರಮವಹಿಸಿ ಹಲವು ಕಾಮಗಾರಿಗಳನ್ನು ಅನುಷ್ಟಾನ ಮಾಡಿರುವುದು ಪ್ರಶಂಸೆನೀಯ. ನರಗುಂದ ತಾಲೂಕಿನಿಂದ ಜಿಲ್ಲೆಯಲ್ಲೇ ಅತೀ ಹೆಚ್ಚು ಕಾಮಗಾರಿಗಳ ಪೋಟೋಗಳನ್ನು ಅಪಲೋಡ್ ಮಾಡಲಾಗಿದೆ. ಹೀಗಾಗಿ ಗದಗ ಜಿಲ್ಲೆ ದೇಶದಲ್ಲಿ ಪ್ರಥಮ ಸ್ಥಾನ ಮತ್ತು ಕರ್ನಾಟಕದಲ್ಲಿ ಪ್ರಥಮ ಸ್ಥಾನ ಪಡೆದಿದೆ. ತಾಲೂಕು ಪಂಚಾಯತ ನರಗುಂದ

ಕಾರ್ಯನಿರ್ವಾಹಕ ಅಧಿಕಾರಿ ಎಸ್.ಕೆ.ಇನಾಮದಾರ ಹೇಳಿದ್ದಾರೆ.

ನರಗುಂದ ತಾಲೂಕಿನಲ್ಲಿ ಅಂತರ್ಜಲ ಮಟ್ಟ ಹೆಚ್ಚಿಸುವ ಉದ್ದೇಶದಿಂದ ಹಲವು ಪರಿಸರ ಸ್ನೇಹಿ ಕಾಮಗಾರಿಗಳನ್ನು ಅನುಷ್ಟಾನ ಮಾಡಲಾಗಿದೆ. ಕೇಂದ್ರ ಅಧ್ಯಯನ ತಂಡ ಕಾಮಗಾರಿಗಳ ಗುಣಮಟ್ಟದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದೆ. ಹೀಗಾಗಿ ಗದಗ ಜಿಲ್ಲೆಗೆ ಪ್ರಥಮ ಸ್ಥಾನ ಪಡೆಯಲು ನರಗುಂದ ತಾಲೂಕಿನ ಕೊಡುಗೆ ಅಪಾರ. ಜಿಲ್ಲೆಯಲ್ಲಿ ನಾವು ಪ್ರಥಮ ಸ್ಥಾನ ದೊರೆತಿರುವುದು ನಮಗೆ ಮತ್ತಷ್ಟು ಕ್ರಿಯಾತ್ಮಕ ಕಾಮಗಾರಿಗಳನ್ನು ಅನುಷ್ಠಾನ ಮಾಡಲು ಪ್ರೋತ್ಸಾಹಕವಾಗಿದೆ. ಸದರಿ ಅಭಿಯಾನಧಡಿ ಶ್ರಮಿಸಿದ ಮನರೇಗಾ ತಂಡಕ್ಕೆ ಹಾಗೂ ತಾಲೂಕಿನ ಎಲ್ಲ ಆರ್.ಡಿ.ಪಿ.ಆರ್ ಅಧಿಕಾರಿ ಸಿಬ್ಬಂದಿ ವರ್ಗಕ್ಕೆ ಅಭಿನಂದನೆಗಳು ತಿಳಿಸಿದ್ದಾರೆ ಸಹಾಯಕ ನಿರ್ದೇಶಕರು, ಸಂತೋಷಕುಮಾರ್ ಪಾಟೀಲ್, ಅವರು.

ಹಿಂದೂಸ್ತಾನ್ ಸಮಾಚಾರ್ / lalita MP


 rajesh pande