
ನವದೆಹಲಿ, 11 ಡಿಸೆಂಬರ್ (ಹಿ.ಸ.) :
ಆ್ಯಂಕರ್ : ಪ್ರಧಾನಿ ನರೇಂದ್ರ ಮೋದಿ ಗುರುವಾರ ಮಹಾನ್ ಕವಿ ಸುಬ್ರಮಣ್ಯ ಭಾರತಿ ಅವರ ಜನ್ಮ ವಾರ್ಷಿಕೋತ್ಸವದಂದು ಅವರಿಗೆ ಗೌರವ ಸಲ್ಲಿಸಿದರು. ಭಾರತಿ ಅವರ ಶಕ್ತಿಶಾಲಿ ವಚನಗಳು ಜನರಲ್ಲಿ ಧೈರ್ಯ ಮತ್ತು ರಾಷ್ಟ್ರೀಯತೆಯನ್ನು ತುಂಬಿದವು ಎಂದು ಪ್ರಧಾನಿ ಹೇಳಿದ್ದಾರೆ.
ಅವರ ಸಿದ್ಧಾಂತವು ಜನರ ಮನಸ್ಸಿನಲ್ಲಿ ಅಳಿಸಲಾಗದ ಗುರುತು ಬಿಡುವ ಮತ್ತು ಭಾರತದ ಸಾಂಸ್ಕೃತಿಕ ಮತ್ತು ರಾಷ್ಟ್ರೀಯ ಪ್ರಜ್ಞೆಯನ್ನು ಬೆಳಗಿಸುವ ಶಕ್ತಿಯನ್ನು ಹೊಂದಿದೆ ಎಂದು ಸಾಮಾಜಿಕ ಮಾಧ್ಯಮ ವೇದಿಕೆ ಎಕ್ಸನಲ್ಲಿ ಹೇಳಿದ್ದಾರೆ.
ಸುಬ್ರಮಣಿಯ ಭಾರತಿ ಅವರು ನ್ಯಾಯಯುತ ಮತ್ತು ಎಲ್ಲರನ್ನೂ ಒಳಗೊಂಡ ಸಮಾಜ ನಿರ್ಮಾಣಕ್ಕಾಗಿ ಶ್ರಮಿಸಿದರು ಎಂದು ಪ್ರಧಾನಿ ಹೇಳಿದ್ದು, ತಮಿಳು ಸಾಹಿತ್ಯದ ಪುಷ್ಟೀಕರಣಕ್ಕೆ ಅವರ ಕೊಡುಗೆ ಅನುಪಮವಾಗಿದೆ ಎಂದಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa