ಸಂಡೂರು : ಶ್ರೀಶೈಲೇಶ್ವರ ವಿದ್ಯಾಕೇಂದ್ರದಲ್ಲಿ ಉಚಿತ ರಕ್ತದಾನ ಶಿಬಿರ
ಸಂಡೂರು, 13 ಡಿಸೆಂಬರ್ (ಹಿ.ಸ.) : ಆ್ಯಂಕರ್ : ರಕ್ತದ ಅಗತ್ಯ ದಿನೇ ದಿನೇ ಹೆಚ್ಚುತ್ತಿದ್ದು ರಕ್ತದಾನದ ಮಹತ್ವ ಮತ್ತು ಅನಿವಾರ್ಯತೆಗಳ ಕುರಿತು ಜಾಗೃತಿ ಮೂಡಿಸಲು ಶ್ರೀಶೈಲೇಶ್ವರ ವಿದ್ಯಾಕೇಂದ್ರವು ವಿಶೇಷ ಪ್ರಯತ್ನ ನಡೆಸುತ್ತಿದೆ ಎಂದು ಸಂಸ್ಥೆಯ ಆಡಳಿತಾಧಿಕಾರಿಗಳಾದ ಕುಮಾರ್ ಎಸ್. ನಾನಾವ
ಸಂಡೂರು : ಶ್ರೀಶೈಲೇಶ್ವರ ವಿದ್ಯಾಕೇಂದ್ರದಲ್ಲಿ ಉಚಿತ ರಕ್ತದಾನ ಶಿಬಿರ


ಸಂಡೂರು : ಶ್ರೀಶೈಲೇಶ್ವರ ವಿದ್ಯಾಕೇಂದ್ರದಲ್ಲಿ ಉಚಿತ ರಕ್ತದಾನ ಶಿಬಿರ


ಸಂಡೂರು : ಶ್ರೀಶೈಲೇಶ್ವರ ವಿದ್ಯಾಕೇಂದ್ರದಲ್ಲಿ ಉಚಿತ ರಕ್ತದಾನ ಶಿಬಿರ


ಸಂಡೂರು : ಶ್ರೀಶೈಲೇಶ್ವರ ವಿದ್ಯಾಕೇಂದ್ರದಲ್ಲಿ ಉಚಿತ ರಕ್ತದಾನ ಶಿಬಿರ


ಸಂಡೂರು, 13 ಡಿಸೆಂಬರ್ (ಹಿ.ಸ.) :

ಆ್ಯಂಕರ್ : ರಕ್ತದ ಅಗತ್ಯ ದಿನೇ ದಿನೇ ಹೆಚ್ಚುತ್ತಿದ್ದು ರಕ್ತದಾನದ ಮಹತ್ವ ಮತ್ತು ಅನಿವಾರ್ಯತೆಗಳ ಕುರಿತು ಜಾಗೃತಿ ಮೂಡಿಸಲು ಶ್ರೀಶೈಲೇಶ್ವರ ವಿದ್ಯಾಕೇಂದ್ರವು ವಿಶೇಷ ಪ್ರಯತ್ನ ನಡೆಸುತ್ತಿದೆ ಎಂದು ಸಂಸ್ಥೆಯ ಆಡಳಿತಾಧಿಕಾರಿಗಳಾದ ಕುಮಾರ್ ಎಸ್. ನಾನಾವಟೆ ಅವರು ತಿಳಿಸಿದ್ಧಾರೆ.

ಶ್ರೀಶೈಲೇಶ್ವರ ವಿದ್ಯಾಕೇಂದ್ರ ಮತ್ತು ಭಾರತೀಯ ಸುರಾಜ್ಯ ಸಂಸ್ಥೆ ಹಾಗೂ ಹೆಚ್.ಡಿ.ಎಫ್.ಸಿ. ಬ್ಯಾಂಕ್ ಇವರುಗಳ ಜಂಟಿ ಸಹಯೋಗದಲ್ಲಿ ನಡೆದ `ಸ್ವಯಂ ಪ್ರೇರಿತ ರಕ್ತದಾನ ಶಿಬಿರ'ವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ರಕ್ತದಾನ ಶಿಬಿರಗಳು ಮಾನವೀಯತೆ ಮತ್ತು ಸೇವೆಯ ಗುಣಗಳನ್ನು ಬೆಳೆಸುವ ಉತ್ತಮ ಮಾರ್ಗವಾಗಿವೆ. ಸಮಾಜದಲ್ಲಿ ರಕ್ತದಾನದ ಕುರಿತು ಜಾಗೃತಿ ಮೂಡಿಸಿ ಅನೇಕ ಜೀವಗಳನ್ನು ರಕ್ಷಿಸಲು ಸಹಕಾರಿಯಾಗುತ್ತವೆ. ಆರೋಗ್ಯವಂತರು ರಕ್ತದಾನ ಮಾಡುವ ಮೂಲಕ ರಕ್ತದ ಅಗತ್ಯ ಇರುವವರಿಗೆ ಜೀವದಾನ ಮಾಡಬಹುದು ಎಂದರು.

ತಾಲೂಕು ಆರೋಗ್ಯ ಅಧಿಕಾರಿ ಡಾ. ಭರತ್ ಕುಮಾರ್, ಬಳ್ಳಾರಿಯ ಸ್ವಾಮಿ ವಿವೇಕಾನಂದ ರಕ್ತ ಬಂಡಾರದ ಮಂಜುನಾಥ, ಎಚ್‍ಡಿಎಫ್‍ಸಿ ಬ್ಯಾಂಕ್‍ನ ತೋರಣಗಲ್ಲು ಶಾಖೆಯ ವ್ಯವಸ್ಥಾಪಕ ಸಾಗರ್ ಅವರು ವೇದಿಕೆಯಲ್ಲಿದ್ದರು.

ಶಿಕ್ಷಣ ಸಂಸ್ಥೆಯ ಬಿಇಡಿ ಮತ್ತು ಡಿಗ್ರಿ ಕಾಲೇಜ್ ಹಾಗೂ ಸಿಬಿಎಸ್‍ಇ ಪ್ರಾಂಶುಪಾಲರು, ಸಂಯೋಜಕರು, ಆರೋಗ್ಯ ಸಿಬ್ಬಂದಿಗಳು, ಬಿಇಡಿ ಪ್ರಶಿಕ್ಷಣಾರ್ಥಿಗಳು, ಡಿಗ್ರಿ ವಿದ್ಯಾರ್ಥಿಗಳು, ಪೆÇೀಷಕರು, ಶಾಲಾ ಸಿಬ್ಬಂದಿಗಳು ಉಪಸ್ಥಿತರಿದ್ದು ಸ್ವಯಂ ಪ್ರೇರಿತರಾಗಿ ರಕ್ತದಾನ ಮಾಡಿದರು.

ಸ್ವಯಂ ಪ್ರೇರಿತ ರಕ್ತದಾನ ಶಿಬಿರದಲ್ಲಿ 120 ಮಂದಿ ಸ್ವಯಂ ಪ್ರೇರಿತರಾಗಿ ರಕ್ತದಾನ ಮಾಡಿದರು.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande