
ಹಾವೇರಿ, 14 ಡಿಸೆಂಬರ್ (ಹಿ.ಸ.) :
ಆ್ಯಂಕರ್ : ಬೇಡ್ತಿ-ವರದಾ ನದಿ ಜೋಡಣೆಗೆ ತಪ್ಪು ಕಲ್ಪನೆಯಿಂದ ವಿರೋಧ ಮಾಡುವುದು ಬೇಡ, ನೀರಿನ ಸದ್ಬಳಕೆಗೆ ಮಾಡಿರುವ ಯೋಜನೆ ಪರಿಷ್ಕರಣೆ ಆಗಿದೆ. ಶೇ 10% ಮಾತ್ರ ನೀರನ್ನು ಬಳಸಿಕೊಳ್ಳಲು ಯೋಜಿಸಿದ್ದು, ಒಟ್ಟು ನೀರಿನ ಹರಿವಿಗೆ ಯಾವುದೇ ತೊಂದರೆಯಿಲ್ಲ, ದಯವಿಟ್ಟು ಯೋಜನೆಗೆ ಸಹಕಾರ ನೀಡಬೇಕು ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಮನವಿ ಮಾಡಿದ್ದಾರೆ.
ಹಾವೇರಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸ್ವರ್ಣವಲ್ಲಿ ಶ್ರೀಗಳ ನೇತೃತ್ವದಲ್ಲಿ ಬೆಡ್ತಿ - ವರದಾ ಕುರಿತು ಚರ್ಚೆ ಮಾಡಿದ್ದಾರೆ. ಬೇಡ್ತಿ-ವರದಾ ನದಿ ಜೋಡಣೆ ಯೋಜನೆಗೆ ಆಕ್ಷೇಪ ವ್ಯಕ್ತ ಪಡಿಸಿದ್ದಾರೆ. ನಾವು ಆ ಭಾಗದ ಜನರ ಗುರುಗಳ ಭಾವನೆ ಗೌರವಿಸುತ್ತೇವೆ. ತಪ್ಪು ಕಲ್ಪನೆ ಮೇಲೆ ವಿರೋಧ ಮಾಡುವುದು ಬೇಡ ಎನ್ನುವ ಮನವಿಯನ್ನು ಆದರ ಪೂರಕವಾಗಿ ಮಾಡುತ್ತೇನೆ. ಈ ಯೋಜನೆ ಸುಮಾರು 30 ವರ್ಷದಿಂದ ಇದೆ. ನ್ಯಾಷನಲ್ ವಾಟರ್ ಡೆವಲಪ್ಮೆಂಟ್ ಆಥಾರಿಟಿ ಯಿಂದ ಬಂದಿರುವ ಯೋಜನೆ. ದಕ್ಷಿಣ ಭಾರತದ ಪ್ರಮುಖ ಮೂರು ಯೋಜನೆಗಳಲ್ಲಿ ಇದು ಒಂದು. ಈಗಿರುವ ರಾಜಕಾರಣಿಗಳು ಆಗ ಯಾರೂ ರಾಜಕಾರಣದಲ್ಲಿ ಇರಲೇ ಇಲ್ಲ ಎಂದು ಹೇಳಿದರು.
ಇದು ನೀರಿನ ಸದ್ಬಳಕೆಗೆ ಮಾಡಿರುವ ಯೋಜನೆ. ಈಗ ಯೋಜನೆ ಪರಿಷ್ಕರಿಣೆ ಆಗಿದೆ. ಸಣ್ಣ ಬ್ಯಾರೇಜ್ ಮಾಡಿ ಲಿಪ್ಟ್ ಮಾಡಲಾಗುತ್ತದೆ ಯಾವುದೆ ದೊಡ್ಡ ಪ್ರಮಾಣದಲ್ಲಿ ಹಾನಿಯಾಗುವುದಿಲ್ಲ. ನದಿಯ ಕೇವಲ 10 % ರಷ್ಟು ನೀರು ಮಾತ್ರ ತೆಗೆದುಕೊಳ್ಳಬೇಕು ಅನ್ನುವ ಚಿಂತನೆ ಇದೆ. ಹೀಗಾಗಿ ನದಿ ಪಾತ್ರದ ನೀರಿನ ಹರಿವಿಗೆ ಯಾವುದೇ ತೊಂದರೆ ಇಲ್ಲ. ಈ ಯೋಜನೆಗೆ ಡಿ ಪಿ ಆರ್ ಆಗಬೇಕು ಪರಿಸರದ ಪರಿಣಾಮಗಳ ಅಧ್ಯಯನ ಆಗಬೇಕು. ಅದರ ಸಾಧಕ ಬಾಧಕ ನೋಡುತ್ತಾರೆ. ಇದೆಲ್ಲ ಪ್ರಕ್ರಿಯೆ ಇದೆ. ದಯವಿಟ್ಟು ಸಹಕಾರ ಮಾಡಬೇಕು. ಯೋಜನೆ ಸಂಪೂರ್ಣ ವಿವರ ಬಂದಾಗ ಪರಿಣಿತರು ತೀರ್ಮಾನ ಮಾಡುತ್ತಾರೆ. ನೀರಿನ ಸಂಪತ್ತು ಸದ್ಬಳಕೆ ಆಗಬೇಕು. ನೀರೇ ಇಲ್ಲದ ಈ ಭಾಗದಲ್ಲಿ ಕುಡಿಯುವ ನೀರಿನ ಸಮಸ್ಯೆ ಕೂಡ ಇದೆ. ನಾವು ಮಳೆಗಾಲದಲ್ಲಿ ನೀರು ಹಿಡಿದಿಟ್ಟು ಬೇಸಿಗೆಯಲ್ಲಿ ನೀರು ಉಪಯೋಗಿಸ್ತೇವೆ ಬರ ಪ್ರದೇಶಕ್ಕೆ ಈ ನೀರು ಅನುಕೂಲ ಅಗುತ್ತದೆ. ಒಬ್ಬರಿಗೊಬ್ಬರು ಸಹಕಾರ ಕೊಡಬೇಕು. ಯೋಜನೆಯಿಂದ ಯಾವುದೇ ತೊಂದರೆ ಇಲ್ಲ. ಇದರಿಂದ ಬರ ಪೀಡಿತ ಹಾವೇರಿ ಮತ್ತು ಇತರ ಜಿಲ್ಲೆಗೆ ಅನುಕೂಲ ಆಗುತ್ತದೆ ಎಂದು ಹೇಳಿದರು.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa