ಹೈಕಮಾಂಡ್ ಹೇಳುವತನಕ ನಾನೇ ಮುಖ್ಯಮಂತ್ರಿ : ಸಿದ್ದರಾಮಯ್ಯ
140 ಶಾಸಕರು ನಮ್ಮೊಂದಿಗಿದ್ದು, ವಿರೋಧಪಕ್ಷದವರು ಹುಳಿಹಿಂಡುವ ಅಗತ್ಯವಿಲ್ಲ
Cm session


ಬೆಳಗಾವಿ, 16 ಡಿಸೆಂಬರ್ (ಹಿ.ಸ.) :

ಆ್ಯಂಕರ್ : 2023 ರಂತೆ 2028 ರಲ್ಲಿಯೂ ಜನಾರ್ಶೀವಾದದೊಂದಿಗೆ ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ ಬರಲಿದ್ದು, ಬಿಜೆಪಿಯವರು ಸದಾ ಪ್ರತಿ ಪಕ್ಷದ ಸ್ಥಾನದಲ್ಲಿಯೇ ಇರಲಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಅವರು ಇಂದು ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ವಿಧಾನ ಸಭಾ ಕಲಾಪದಲ್ಲಿ , ಪ್ರತಿ ಪಕ್ಷದವರ ಪ್ರಶ್ನೆಗೆ ಉತ್ತರಿಸುತ್ತ ಮಾತನಾಡಿದರು.

ಗಾದೆ ಮಾತಿನಂತೆ ಉರಿಯುವುದರ ಮೇಲೆ ಉಪ್ಪು ಹಾಕಬಾರದೆಂಬ ಗಾದೆ ಮಾತಿದೆ. ಪ್ರತಿ ಪಕ್ಷದವರು ಇರುವುದೇ ಉರಿಯುವುದರ ಮೇಲೆ ಉಪ್ಪು ಸುರಿಯಲು ಎಂದರು.

ಪ್ರತಿ ಪಕ್ಷದವರು ಏನೇ ಪ್ರಚೋದನೆ ಮಾಡಿದರೂ, ನಮ್ಮ ಶಾಸಕರಾರೂ ಪ್ರಚೋದಿತರಾಗುವುದಿಲ್ಲ. ಐದು ವರ್ಷ ನಾನೇ ಮುಖ್ಯಮಂತ್ರಿಯಾಗಿರಬೇಕೆಂದು ಜನರು ಆಶೀರ್ವಾದ ಮಾಡಿ ಕಳಿಸಿದ್ದಾರೆ. 140 ಶಾಸಕರು ನಮ್ಮೊಂದಿಗಿದ್ದಾರೆ. ಪ್ರತಿ ಪಕ್ಷದವರು ಇದರಲ್ಲಿ ಹುಳಿ ಹಿಂಡುವ ಅಗತ್ಯವಿಲ್ಲ ಎಂದರು.

2023 ರಲ್ಲಿ ಜನರು ಆಶೀರ್ವಾದ ಮಾಡಿದಂತೆ 2028 ರಲ್ಲಿಯೂ ಕಾಂಗ್ರೆಸ್ ಸರ್ಕಾರವೇ ಆಡಳಿತಕ್ಕೆ ಬರಲಿದೆ. ಜನರ ನಾಡಿಮಿಡಿತ ಸರ್ಕಾರಕ್ಕೆ ತಿಳಿದಿದೆ. ಕರ್ನಾಟಕದ ಜನ ಬಿಜೆಪಿಗೆ ಎಂದಿಗೂ ಅಧಿಕಾರಕ್ಕೆ ತರುವುದಿಲ್ಲ. ಕರ್ನಾಟಕದಲ್ಲಿ ಬಿಜೆಪಿ ಸರ್ಕಾರ ಎರಡು ಬಾರಿ ಅಧಿಕಾರ ನಡೆಸಿದರೂ, ಒಂದು ಬಾರಿಯೂ ಜನರ ಆಶೀರ್ವಾದದಿಂದ ಅಧಿಕಾರಕ್ಕೆ ಬಂದಿಲ್ಲ. 2008 , 2018 ರಲ್ಲಿ ಆಪರೇಷನ್ ಕಮಲ ಮಾಡಿ, ಹಿಂಬಾಗಿಲಿನಿಂದ ಅಧಿಕಾರಕ್ಕೆ ಬಂದಿದ್ದಾರೆ. ರಾಜ್ಯದ ಜನ ಬಿಜೆಪಿಗೆ ಆಶೀರ್ವಾದ ಮಾಡುವುದಿಲ್ಲ ಎಂಬುದು ಸ್ಪಷ್ಟವಾಗಿದೆ. 2019 ರಲ್ಲಿ ಬಿಜೆಪಿ ಅಧಿಕಾರಕ್ಕೆ ಬರಬಾರದೆಂಬ ಉದ್ದೇಶದಿಂದ ಜೆಡಿಎಸ್ ನೊಂದಿಗೆ ಸರ್ಕಾರ ರಚಿಸಲಾಯಿತು. ಆದರೆ ಬಿಜೆಪಿಯವರು , ಜೆಡಿಎಸ್ ಜೊತೆ ಮೈತ್ರಿ ಮಾಡಿಕೊಂಡಿರುವ ಉದ್ದೇಶದ ಬಗ್ಗೆ ಪ್ರಶ್ನಿಸಿದರು ಎಂದರು.

ಕಾಂಗ್ರೆಸ್ ಪಕ್ಷದಲ್ಲಿ ಹೈಕಮಾಂಡ್ ಮಾತು ಅಂತಿಮವಾಗಿರುತ್ತದೆ. ಆದರೆ ಬಿಜೆಪಿಯ ಅಧ್ಯಕ್ಷಗಿರಿ ಆಯ್ಕೆಯಲ್ಲಿ ಒಮ್ಮತ ಸಾಧಿಸಿಲ್ಲ. ಬಿಜೆಪಿಯವರಿಗೆ ಅಸೂಯೆ ಕಾಡುತ್ತಿದೆ. ಐದು ವರ್ಷ ಸುಭದ್ರ ಸರ್ಕಾರ ನೀಡುತ್ತೇವೆ ಹಾಗೂ ಮತ್ತೆ ಚುನಾವಣೆ ಎದುರಿಸಿ 2028 ರಲ್ಲಿಯೂ ಕಾಂಗ್ರೆಸ್ ಸರ್ಕಾರವೇ ಅಧಿಕಾರಕ್ಕೆ ಬರಲಿದೆ. 2013 ರಲ್ಲಿ 2023 ರಲ್ಲಿಯೂ ಕಾಂಗ್ರೆಸ್ ಗೆ ಜನರು ಆಶೀರ್ವಾದ ಮಾಡಿದ್ದಾರೆ, ಆದರೆ ಬಿಜೆಪಿಯವರಿಗೆ ಒಮ್ಮೆಯೂ ಜನಾದೇಶ ದೊರೆತಿಲ್ಲ ಹಾಗೂ ಭವಿಷ್ಯದಲ್ಲಿಯೂ ದೊರೆಯುವುದಿಲ್ಲ. ಬಿಜೆಪಿಯವರು ಸದಾ ಪ್ರತಿ ಪಕ್ಷದ ಸ್ಥಾನದಲ್ಲಿಯೇ ಇರಲಿದೆ. “‘ನಾನು’ ಹೋದರೆ ಹೋದೇನು” ಅಂತ ಕನಕದಾಸರು ಹೇಳಿದ್ದರು. “ಇದು ನನ್ನ ಸರ್ಕಾರವಲ್ಲ, ನಮ್ಮ ಸರ್ಕಾರ”. ಈಗಲೂ ನಾನೇ ಮುಖ್ಯಮಂತ್ರಿ. ಹೈಕಮಾಂಡ್ ಹೇಳುವ ತನಕ ನಾನೇ ಮುಖ್ಯಮಂತ್ರಿ ಎಂದು ತಿಳಿಸಿದರು.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande