
ಹೊಸಪೇಟೆ, 17 ಡಿಸೆಂಬರ್ (ಹಿ.ಸ.) :
ಆ್ಯಂಕರ್ : ರಾಷ್ಟ್ರೀಯ ಆರೋಗ್ಯ ಅಭಿಯಾನ ರಾಷ್ಟ್ರೀಯ ಕ್ಷಯರೋಗ ನಿರ್ಮೂಲನಾ ಕಾರ್ಯಕ್ರಮಯಡಿಯಲ್ಲಿ ಮಂಜೂರಾಗಿರುವ ಒಂದು ಅಕೌಂಟೆಡ್ ಒಂದು ಹುದ್ದೆಗೆ ಅರ್ಹ ಅಭ್ಯರ್ಥಿಗಳಿಂದ ಮೇರಿಟ್ ಆಧಾರದ ಮೇಲೆ ನೇಮಕಾತಿ ನಿಯಾಮಾಗಳನ್ವಯ ನೇರಗುತ್ತಿಗೆ ಆಧಾರದ ಮೇಲೆ ಭರ್ತಿ ಮಾಡಲು ವಿಜಯನಗರ ಜಿಲ್ಲಾ ಎನ್ಐಸಿ ವೆಬ್ಸೈಟ್ www.vijayanagara.nic.in ಆನ್ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಡಿಸೆಂಬರ್.24 ರೊಳಗೆ ಸಂಜೆ 5 ಗಂಟೆಯೊಳಗಾಗಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಸಂಪೂರ್ಣ ಅಧಿಸೂಚನೆ ಮತ್ತು ಅರ್ಜಿ ಸಲ್ಲಿಸುವ ಲಿಂಕ್ಗಾಗಿ ವಿಜಯನಗರ ಜಿಲ್ಲಾ ಎನ್ಐಸಿ ವೆಬ್ಸೈಟ್ www.vijayanagara.nic.in ಆನ್ಲೈನ್ನಲ್ಲಿ ಪರಿಶೀಲಿಸಬಹುದಾಗಿದೆ ಎಂದು ಜಿಲ್ಲಾ ಕ್ಷಯರೋಗ ನಿರ್ಮೂಲನಾಧಿಕಾರಿ ಕೆ.ರಾಧಿಕ ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್