ಮಹಿಳೆಯರ, ಮಕ್ಕಳ ಅನೈತಿಕ ಸಾಗಾಣೆ ತಡೆಗಟ್ಟಬೇಕು
ಬಳ್ಳಾರಿ, 18 ಡಿಸೆಂಬರ್ (ಹಿ.ಸ.) : ಆ್ಯಂಕರ್ : ಮಕ್ಕಳು ಮತ್ತು ಮಹಿಳೆಯರು ಅನೈತಿಕ ಸಾಗಾಣಿಕೆಗೆ ಒಳಗಾಗದಂತೆ ಕಾಯ್ದೆ ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದಿ ಇಲಾಖೆಯ ಉಪನಿರ್ದೇಶಕ ರಾಮಕೃಷ್ಣ ನಾಯಕ. ಎಂ ಅವರು ತಿಳಿಸಿದ್ದಾ
ಮಹಿಳೆಯರ, ಮಕ್ಕಳ ಅನೈತಿಕ ಸಾಗಾಣೆ ತಡೆಗಟ್ಟಬೇಕು


ಮಹಿಳೆಯರ, ಮಕ್ಕಳ ಅನೈತಿಕ ಸಾಗಾಣೆ ತಡೆಗಟ್ಟಬೇಕು


ಬಳ್ಳಾರಿ, 18 ಡಿಸೆಂಬರ್ (ಹಿ.ಸ.) :

ಆ್ಯಂಕರ್ : ಮಕ್ಕಳು ಮತ್ತು ಮಹಿಳೆಯರು ಅನೈತಿಕ ಸಾಗಾಣಿಕೆಗೆ ಒಳಗಾಗದಂತೆ ಕಾಯ್ದೆ ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದಿ ಇಲಾಖೆಯ ಉಪನಿರ್ದೇಶಕ ರಾಮಕೃಷ್ಣ ನಾಯಕ. ಎಂ ಅವರು ತಿಳಿಸಿದ್ದಾರೆ.

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಇವರ ಸಂಯುಕ್ತಾಶ್ರಯದಲ್ಲಿ ನಗರದ ಜಿಪಂ ಹಳೆಯ ನಜೀರ್ ಸಾಬ್ ಸಭಾಂಗಣದಲ್ಲಿ `ಮಹಿಳೆಯರ ಮತ್ತು ಮಕ್ಕಳ ಅನೈತಿಕ ಸಾಗಾಣಿಕೆ ತಡೆಗಟ್ಟುವಿಕೆ ಹಾಗೂ ಐಟಿಪಿಎ, 1956ರ ಕಾಯ್ದೆ’ ಕುರಿತು ಜಿಲ್ಲಾ ಮಟ್ಟದ ವಿವಿಧ ಸಹಭಾಗಿದಾರರ ಇಲಾಖೆಯ ಅಧಿಕಾರಿ, ಸಿಬ್ಬಂದಿಗಳಿಗೆ ಗುರುವಾರ ನಡೆದ ಒಂದು ದಿನದ ಕಾರ್ಯಾಗಾರ ಉದ್ಘಾಟಿಸಿ ಅವರು ಮಾತನಾಡಿದರು.

ಸಮಾಜದ ಪ್ರತಿಯೊಬ್ಬರಿಗೂ ಮಹಿಳೆಯರ ಮತ್ತು ಮಕ್ಕಳ ಸಾಗಾಣಿಕೆಯಿಂದಾಗುವ ದುಷ್ಪರಿಣಾಮಗಳ ಕುರಿತು ಜಿಲ್ಲೆಯ ಎಲ್ಲಾ ನಗರ-ಸ್ಥಳೀಯ ಸಂಸ್ಥೆಗಳಲ್ಲಿ ಅರಿವು ಮೂಡಿಸುವ ಅಗತ್ಯವಿದೆ. ವಿವಿಧ ಇಲಾಖೆಗಳ ಸಹಭಾಗಿತ್ವದೊಂದಿಗೆ ಮಕ್ಕಳು ಮತ್ತು ಮಹಿಳೆಯರು ಅನೈತಿಕ ಸಾಗಾಣಿಕೆಯನ್ನು ತಡೆಗಟ್ಟಬಹುದಾಗಿದೆ ಎಂದರು.

ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಬಿ.ಉಮಾದೇವಿ ಅವರು, ಪ್ರಸ್ತುತ ಶಾಲೆಗಳಲ್ಲಿ ಮಾನವ ಕಳ್ಳ ಸಾಗಾಣಿಕೆ ಕುರಿತು ಮಕ್ಕಳಲ್ಲಿ ಅರಿವು ಮೂಡಿಸುವ ಅವಶ್ಯಕವಾಗಿದೆ. ಮಕ್ಕಳಿಗೆ ಶಾಲೆಯೇ ಸುರಕ್ಷಿತ ಸ್ಥಳವಾಗಿದ್ದು, 7 ದಿನಕ್ಕಿಂತ ಹೆಚ್ಚು ಗೈರಾದಲ್ಲಿ ಅಂತಹ ಮಕ್ಕಳ ಪೋಷಕರನ್ನು ಸಂಪರ್ಕಿಸಿ ಮರಳಿ ಶಾಲೆಗೆ ಕರೆತರಬೇಕು. ಅದರಲ್ಲೂ ಪ್ರೌಢಶಾಲೆಯ ಹೆಣ್ಣುಮಕ್ಕಳ ಮೇಲೆ ನಿರಂತರ ನಿಗಾವಹಿಸಬೇಕು. ಗೈರಾದಲ್ಲಿ ಮಾಹಿತಿ ಸಂಗ್ರಹಿಸಬೇಕು. ಸಹಭಾಗೀದಾರರ ಇಲಾಖೆಗಳ ಅಧಿಕಾರಿಗಳು ಸಹ ಇದಕ್ಕೆ ಕೈಜೋಡಿಸಬೇಕಿದೆ ಎಂದು ಹೇಳಿದರು.

ಮಕ್ಕಳನ್ನು ಜೀತ ಕಾರ್ಮಿಕ ಪದ್ಧತಿಗೆ ಒಳಪಡಿಸುವಂತಿಲ್ಲ. 6 ರಿಂದ 18 ವರ್ಷದೊಳಗಿನ ಎಲ್ಲಾ ಮಕ್ಕಳ ರಕ್ಷಣೆ ನಮ್ಮೆಲ್ಲರ ಕರ್ತವ್ಯವಾಗಿದೆ. ಜಿಲ್ಲೆಯಲ್ಲಿ ಮಕ್ಕಳ ರಕ್ಷಣೆಗೆ ಜಿಲ್ಲಾಡಳಿತ ಮುತುವರ್ಜಿ ವಹಿಸಿದೆ ಎಂದು ತಿಳಿಸಿದರು.

ಜಿಲ್ಲಾ ಮಕ್ಕಳ ರಕ್ಷಣ ಘಟಕದ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಸುಭದ್ರ ದೇವಿ ಅವರು, ವಿಶ್ವಸಂಸ್ಥೆಯು 1989 ರಲ್ಲಿ ಮಕ್ಕಳ ಹಕ್ಕುಗಳ ಒಡಂಬಡಿಕೆಗೆ ಅಂತರಾಷ್ಟ್ರೀಯ ಕಾನೂನು ಒಪ್ಪಂದ ಅಂಗೀಕರಿಸಿತು. 1992 ರಲ್ಲಿ ಭಾರತ ಇದಕ್ಕೆ ಸಹಿ ಹಾಕಿತು. ಅಂದಿನಿಂದ ದೇಶದಲ್ಲಿ ಮಕ್ಕಳ ಹಕ್ಕುಗಳ ರಕ್ಷಣೆಗೆ ಬಾಲನ್ಯಾಯ ಕಾಯ್ದೆ, ಪೋಕ್ಸೋ ಕಾಯ್ದೆ ಸೇರಿದಂತೆ ಹಲವಾರು ರೀತಿಯ ಕಾಯ್ದೆ-ಕಾನೂನುಗಳನ್ನು ರೂಪಿಸಲಾಯಿತು ಎಂದು ಹೇಳಿದರು.

ಕಾರ್ಯಾಗಾರದಲ್ಲಿ ಜಿಲ್ಲಾ ಬಾಲ ಕಾರ್ಮಿಕ ಯೋಜನೆಯ ಯೋಜನಾಧಿಕಾರಿ ಎ.ಮೌನೇಶ್, ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಕಾನೂನು ಪರಿವೀಕ್ಷಣಾಧಿಕಾರಿ ಈಶ್ವರ್ ರಾವ್ ಸೇರಿದಂತೆ ವಿವಿಧ ತಾಲ್ಲೂಕುಗಳ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು, ಜಿಲ್ಲಾ ಮಟ್ಟದ ವಿವಿಧ ಸಹಭಾಗಿದಾರರ ಇಲಾಖೆಯ ಅಧಿಕಾರಿ-ಸಿಬ್ಬಂದಿ, ಎನ್.ಜಿ.ಒ ಸಂಸ್ಥೆಗಳ ಪದಾಧಿಕಾರಿಗಳು ಮಹಿಳಾ ಮತ್ತು ಮಕ್ಕಳ ಅಭಿವೃದಿ ಇಲಾಖೆಯ ಅಧಿಕಾರಿ, ಸಿಬ್ಬಂದಿ ವರ್ಗ ಹಾಗೂ ಇತರರು ಉಪಸ್ಥಿತರಿದ್ದರು.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande