ನಾವೀನ್ಯತೆ ಆವಿಷ್ಕಾರ ಪುರಸ್ಕಾರಕ್ಕಾಗಿ ಅರ್ಜಿ ಆಹ್ವಾನ
ಗದಗ, 02 ಡಿಸೆಂಬರ್ (ಹಿ.ಸ.) : ಆ್ಯಂಕರ್ : ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿಯ ವತಿಯಿಂದ ವಿಜ್ಞಾನ ಮತ್ತು ತಂತ್ರಜ್ಞಾನ ಅಥವಾ ಆರ್ಥಿಕತೆಯ ಯಾವುದೇ ವಿಭಾಗದಿಂದ ಮೂಡಿದ ಜನಸಾಮಾನ್ಯರ ಅದರಲ್ಲೂ ಗ್ರಾಮೀಣ ಪ್ರದೇಶದ ಜನಜೀವನವನ್ನು ಪರಿವರ್ತಿಸಲು ಸಹಾಯಕವಾದ ಅಥವಾ ಉದ್ಯಮಗಳು ಹಾಗೂ ಉದ್ಯೋಗ ಸೃಷ
ಫೋಟೋ


ಗದಗ, 02 ಡಿಸೆಂಬರ್ (ಹಿ.ಸ.) :

ಆ್ಯಂಕರ್ : ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿಯ ವತಿಯಿಂದ ವಿಜ್ಞಾನ ಮತ್ತು ತಂತ್ರಜ್ಞಾನ ಅಥವಾ ಆರ್ಥಿಕತೆಯ ಯಾವುದೇ ವಿಭಾಗದಿಂದ ಮೂಡಿದ ಜನಸಾಮಾನ್ಯರ ಅದರಲ್ಲೂ ಗ್ರಾಮೀಣ ಪ್ರದೇಶದ ಜನಜೀವನವನ್ನು ಪರಿವರ್ತಿಸಲು ಸಹಾಯಕವಾದ ಅಥವಾ ಉದ್ಯಮಗಳು ಹಾಗೂ ಉದ್ಯೋಗ ಸೃಷ್ಟಿಗೆ ಕಾರಣವಾದ ಅನುಕರಣೀಯ ಆವಿಷ್ಕಾರಗಳು/ ಪರಿಹಾರಗಳನ್ನು ಪ್ರತಿ ವರ್ಷ ಗುರುತಿಸಿ ಪದವಿ, ಸ್ನಾತಕೋತ್ತರ ವಿದ್ಯಾರ್ಥಿಗಳ ಹಾಗೂ ಬೋಧಕರಿಗೆ ಮತ್ತು ಜನಸಾಮಾನ್ಯರಿಗೆ ಆವಿಷ್ಕಾರ , ನಾವೀನ್ಯತೆ ಪುರಸ್ಕಾರಕ್ಕೆ ಅರ್ಜಿ ಆಹ್ವಾನಿಸಲಾಗಿದೆ.

ಸ್ನಾತಕೋತ್ತರ ವಿದ್ಯಾರ್ಥಿಗಳ ಅತ್ಯುತ್ತಮ ಆವಿಷ್ಕಾರ, ನಾವೀನ್ಯತೆಗೆ ಪ್ರೊ. ಯು.ಆರ್. ರಾವ್ ಪುರಸ್ಕಾರ, ಪದವಿ ವಿದ್ಯಾರ್ಥಿಗಳ ಅತ್ಯುತ್ತಮ ಆವಿಷ್ಕಾರ , ನಾವೀನ್ಯತೆಗೆ ಡಾ.ಎಸ್.ಕೆ.ಶಿವಕುಮಾರ್ ಪುರಸ್ಕಾರ , ಬೋಧಕರು ಹಾಗೂ ಜನಸಾಮಾನ್ಯರ ಅತ್ಯುತ್ತಮ ಆವಿಷ್ಕಾರ, ನಾವೀನ್ಯತೆಗೆ ಪ್ರೊ. ಎಸ್. ಅಯ್ಯಪ್ಪನ್ ಪುರಸ್ಕಾರಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ.

ಮೇಲ್ಕಂಡ ಪುರಸ್ಕಾರಕ್ಕೆ ರೂ,10,000/ಗಳ ನಗದು ಬಹುಮಾನ ಹಾಗೂ ಪ್ರಶಸ್ತಿ ಪತ್ರವನ್ನು ನೀಡಲಾಗುವುದು. ಆಸಕ್ತರು ಡಿಸೆಂಬರ್ 31 ರೊಳಗಾಗಿ ಅಕಾಡೆಮಿಯ ವೆಬ್‌ಸೈಟ್‌ನಲ್ಲಿ ನೀಡಿರುವ ಮಾರ್ಗಸೂಚಿಯನ್ವಯ ಆನ್‌ಲೈನ್ ಮೂಲಕ ಅಗತ್ಯ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸಬಹುದಾಗಿರುತ್ತದೆ.

ಹೆಚ್ಚಿನ ಮಾಹಿತಿಗಾಗಿ ಶ್ರೀನಿವಾಸು ಮೊ. ಸಂ. 9620767819 ಹಾಗೂ ಚಂದ್ರಶೇಖರ ಮೂರ್ತಿ ಮೊ.9686449019/080-29721550 ) ಸಂಪರ್ಕಿಸಬಹುದಾಗಿದೆ.

ಹಿಂದೂಸ್ತಾನ್ ಸಮಾಚಾರ್ / lalita MP


 rajesh pande