ರೋಗ, ಕೀಟಬಾಧೆ ಕಂಡುಬಂದಲ್ಲಿ ಸೂಕ್ತ ನಿರ್ವಹಣೆ ಕ್ರಮ ಅನುಸರಿಸಿ ಸಲಹೆ
ಬಳ್ಳಾರಿ, 20 ಡಿಸೆಂಬರ್ (ಹಿ.ಸ.) : ಆ್ಯಂಕರ್ : ಜಿಲ್ಲೆಯಲ್ಲಿ ಪ್ರಸ್ತುತ ವಾತವರಣ ಏರುಪೇರು, ಮೋಡ ಕವಿದ ವಾತವರಣ ಹಾಗೂ ತಾಪಮಾನ ಇಳಿಕೆಯಾಗಿರುವುದರಿಂದ ಮೆಣಸಿನಕಾಯಿ ಬೆಳೆಯಲ್ಲಿ ರೋಗ ಮತ್ತು ಕೀಟಬಾಧೆಯಿಂದ ಇಳುವರಿ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇದ್ದು, ಹಾಗಾಗಿ ರೈತರು ಸೂಕ್ತ ನಿರ್ವಹಣೆಯ ಕ್ರಮ ಅನುಸರ
ರೋಗ, ಕೀಟಬಾಧೆ ಕಂಡುಬಂದಲ್ಲಿ ಸೂಕ್ತ ನಿರ್ವಹಣೆ ಕ್ರಮ ಅನುಸರಿಸಿ ಸಲಹೆ


ಬಳ್ಳಾರಿ, 20 ಡಿಸೆಂಬರ್ (ಹಿ.ಸ.) :

ಆ್ಯಂಕರ್ : ಜಿಲ್ಲೆಯಲ್ಲಿ ಪ್ರಸ್ತುತ ವಾತವರಣ ಏರುಪೇರು, ಮೋಡ ಕವಿದ ವಾತವರಣ ಹಾಗೂ ತಾಪಮಾನ ಇಳಿಕೆಯಾಗಿರುವುದರಿಂದ ಮೆಣಸಿನಕಾಯಿ ಬೆಳೆಯಲ್ಲಿ ರೋಗ ಮತ್ತು ಕೀಟಬಾಧೆಯಿಂದ ಇಳುವರಿ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇದ್ದು, ಹಾಗಾಗಿ ರೈತರು ಸೂಕ್ತ ನಿರ್ವಹಣೆಯ ಕ್ರಮ ಅನುಸರಿಸಬೇಕು ಎಂದು ತೋಟಗಾರಿಕೆ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕರು ಅವರು ತಿಳಿಸಿದ್ದಾರೆ.

ಪ್ರಸಕ್ತ ವರ್ಷ ಬಳ್ಳಾರಿ, ಕುರುಗೋಡು ಮತ್ತು ಕಂಪ್ಲಿ ತಾಲ್ಲೂಕುಗಳಲ್ಲಿ 17,800 ಹೆಕ್ಟೇರ್ ಗಿಂತ ಹೆಚ್ಚು ಪ್ರದೇಶದಲ್ಲಿ ಮೆಣಸಿನಕಾಯಿ ಬೆಳೆಯಲಾಗಿದೆ. ಮೆಣಸಿನಕಾಯಿ ಬೆಳೆಯಲ್ಲಿ ಎಲೆ ಮುಟುರು ರೋಗ, ಬೂದಿ ರೋಗ, ಹಣ್ಣು ಕೊಳೆ ರೋಗದ ನಿರ್ವಹಣೆಗೆ ರೈತರು ಸೂಕ್ತ ಕ್ರಮಗಳನ್ನು ಅನುಸರಿಸಬೇಕಿದೆ ಎಂದಿದ್ದಾರೆ.

ಎಲೆ ಮುಟುರು ರೋಗ:

ಈ ರೋಗವನ್ನು ಹಳದಿ ಮಿಶ್ರಿತ ಹಸಿರು ಭಾಗವನ್ನು ಎಲೆಯಲ್ಲಿ ಕಾಣಬಹುದು. ಎಲೆಗಳು ವಕ್ರಾಕಾರದ ಅಥವಾ ಮುಟುರು ಎಲೆಗಳನ್ನು ಕಾಣಬಹುದು. ಆ ಮೇಲೆ ಗಿಡಗಳ ಬೆಳವಣಿಗೆ ಕುಂಠಿತಗೊಳ್ಳುತ್ತದೆ. ಮುಟುರು ರೋಗದ ಬಾಧೆ ತಡೆಗಟ್ಟಲು ಶೇ.0.5 ರ ಬೆಳ್ಳೊಳ್ಳಿ, ಹಸಿ ಮೆಣಿಸಿನಕಾಯಿ, ಸೀಮೆ ಎಣ್ಣೆ ಕಷಾಯವನ್ನು ಬೇವು ಜನ್ಯ ಕೀಟನಾಶಕದೊಂದಿಗೆ (2.5 ಮಿ.ಲೀ. ಪ್ರತಿ ಲೀಟರ್ ನೀರಿಗೆ) ಬೆರಸಿ ಅವಶ್ಯವಿದ್ದಾಗ ಸಿಂಪರಣೆ ಮಾಡಬೇಕು.

ಪ್ರಮುಖವಾಗಿ ಮೆಣಸಿನಕಾಯಿಯಲ್ಲಿ ಬೆಳೆಯಲ್ಲಿ ಬರುವ ಥಿಪ್ಸ್, ಮೈಟ್ಸ್, ಬಿಳಿ ನೋಣ ಹಾಗೂ ರಸಹಿರುವ ಕೀಟಗಳ ನಿರ್ವಹಣೆ ಮಾಡುವುದು ಎಲೆ ಮುಟುರು ರೋಗದ ನಿರ್ವಹಣೆಯಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ.

ಕೀಟನಾಶಕಗಲಾದ 0.3 ಮಿ.ಲೀ ಇಮಿಡಾಕ್ಲೋಪ್ರಿಡ್ 17.8 ಎಸ್.ಎಲ್ ಅಥವಾ 0.2 ಗ್ರಾಂ ಥಯೋಮೆಥಾಕ್ಸಾಮ್ 25 ಡಬ್ಲ್ಯೂ.ಜಿ ಅಥವಾ 1.0 ಮಿ.ಲೀ ಫಿಪ್ರೋನಿಲ್ 5 ಎಸ್.ಸಿ ಅಥವಾ 1.0 ಗ್ರಾಂ ಡಯಾಫೆನ್‍ಥಯೂರಾನ್ 50 ಡಬ್ಲ್ಯೂ.ಪಿ ಪ್ರತಿ ಲೀಟರ್ ನೀರಿಗೆ ಬೆರೆಸಿ ಸಿಂಪಡಿಸಬೇಕು.

ಬೂದಿ ರೋಗ:

ಈ ರೋಗವನ್ನು ಬೂದಿ ಬಣ್ಣದ ಮಚ್ಚೆಗಳನ್ನು ಎಲೆಯಲ್ಲಿ ಕಾಣಬಹುದು. ರೋಗ ಕಂಡುಬಂದಲ್ಲಿ 1 ಗ್ರಾಂ ಕಾರ್ಬಂಡೈಜಿಮ್ ಅಥವಾ 3 ಗ್ರಾಂ ನೀರಿನಲ್ಲಿ ಕರಗುವ ಗಂಧಕ ಒಂದು ಲೀಟರ್ ನೀರಿನಲ್ಲಿ ಬೆರೆಸಿ ಸಿಂಪಡಿಸಬೇಕು. ರೋಗ ಲಕ್ಷಣಗಳು ಕಡಿಮೆಯಾಗದ್ದಿದಲ್ಲಿ ಇದೇ ಸಿಂಪರಣೆಯನ್ನು 15 ದಿನಗಳ ಹಂತರದಲ್ಲಿ ಇನ್ನೂ ಎರಡು ಬಾರಿ ಕೈಗೊಳ್ಳಬಹುದು ಅಥವಾ 1 ಗ್ರಾಂ ಅಜೋಕ್ಸಿಸ್ಟರೋಬಿನ್ ಶೇ.23 ಎಸ್‍ಟಿ ರೋಗ ನಾಷಕವನ್ನು ಪ್ರತಿ ಲೀಟರ್ ನೀರಿಗೆ ಬೇರಸಿ ಸಿಂಪಡಿಸಬಹುದಾಗಿದೆ. ಇಲ್ಲವೇ ಹೆಕ್ಸಾಕೊನಜೋಲ್ ಶೇ.2 ಎಸ್‍ಸಿ ರೋಗ ನಾಷಕವನ್ನು ಪ್ರತಿ ಲೀಟರ್ ನೀರಿಗೆ ಬೆರೆಸಿ ಸಿಂಪಡಿಸಬಹುದು.

ಹಣ್ಣು ಕೊಳೆ ರೋಗ:

ಈ ರೋಗವನ್ನು ಹಣ್ಣುಗಳ ಮೇಲೆ ವೃತ್ತಾಕಾರದ ತಗ್ಗಾದ ಕಪ್ಪನೆಯ ಚುಕ್ಕೆಗಳು ಕಾಣಿಸಿಕೊಳ್ಳುತ್ತವೆ. ಒಳಗಿನ ಬಣ್ಣವು ಗುಲಾಬಿ ವರ್ಣದಿಂದ ಕೂಡಿರುತ್ತದೆ. ಆ ಮೇಲೆ ಕಪ್ಪಾಗುತ್ತವೆ. ಮೆಣಸಿನಕಾಯಿ ಬೆಳೆಗೆ ತುದಿ ಸಾಯುವ ರೋಗ, ಹಣ್ಣು ಕೊಳೆಯುವ ರೋಗ ಹಾಗೂ ಬೂದಿ ರೋಗಗಳು ಕಂಡು ಬಂದಾಗ 1 ಗ್ರಾಂ ಕಾರ್ಬಂಡೈಜಿಮ್ ಪ್ರತಿ ಲೀಟರ್ ನೀರಿನಲ್ಲಿ ಬೆರೆಸಿ 15 ದಿನಗಳ ಅಂತರದಲ್ಲಿ ನಾಲ್ಕು ಬಾರಿ ಸಿಂಪಡಿಸಬೇಕು.

1 ಗ್ರಾಂ ಅಜೋಕ್ಸಿಸ್ಟರೋಬಿನ್ ಶೇ.23 ಎಸ್‍ಟಿ ರೋಗ ನಾಷಕವನ್ನು ಪ್ರತಿ ಲೀಟರ್ ನೀರಿಗೆ ಬೇರಸಿ ಸಿಂಪಡಿಸಬಹುದಾಗಿದೆ. ಇಲ್ಲವೇ ಹೆಕ್ಸಾಕೊನಜೋಲ್ ಶೇ.2 ಎಸ್‍ಸಿ ರೋಗ ನಾಷಕವನ್ನು ಪ್ರತಿ ಲೀಟರ್ ನೀರಿಗೆ ಬೇರೆಸಿ ಸಿಂಪಡಿಸಬಹುದು.

ಈ ಮೇಲ್ಕಂಡ ಎಲ್ಲಾ ಅಗತ್ಯವಿರುವ ನಿರ್ವಹಣಾ ಕ್ರಮಗಳನ್ನು ಅನುಸರಿಸುವ ಮೂಲಕ ರೈತರು ಸಕಾಲದಲ್ಲಿ ಮೆಣಸಿನಕಾಯಿ ಬೆಳೆಗೆ ಔಷಧಿಗಳನ್ನು ಸೂಕ್ತ ರೀತಿಯಲ್ಲಿ ಸಿಂಪಡಿಸಿ ಉತ್ತಮ ಗುಣಮಟ್ಟದ ಇಳುವರಿ ಪಡೆಯಬಹುದಾಗಿದೆ.

ಮಾಹಿತಿಗಾಗಿ ತೋಟಗಾರಿಕೆ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕರ ಕಚೇರಿಗೆ ಭೇಟಿ ನೀಡಿ ಸಂಪರ್ಕಿಸಬಹುದು ಎಂದು ಅವರು ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande