
ಗದಗ, 21 ಡಿಸೆಂಬರ್ (ಹಿ.ಸ.) :
ಆ್ಯಂಕರ್ : ಗದಗ ಜಿಲ್ಲೆಯಿಂದ ಅಂತರಾಷ್ಟ್ರೀಯ ಮತ್ತು ರಾಷ್ಟ್ರೀಯ ಮಟ್ಟದ ಹಾಕಿ, ಕ್ರಿಕೆಟ್, ಕುಸ್ತಿ, ವಾಲಿಬಾಲ್ ಮತ್ತು ಅಥ್ಲೆಟಿಕ್ಸ್ ಕ್ರೀಡಾಪಟುಗಳು ಹೊರಹೊಮ್ಮಿದ್ದು, ಇಂತಹ ಗದಗ ಜಿಲ್ಲೆಯಲ್ಲಿ ರಾಜ್ಯಮಟ್ಟದ ಪ.ಪೂ. ಕಾಲೇಜು ವಿದ್ಯಾರ್ಥಿಗಳ ಟೆನ್ನಿಕಾಯಿಟ್ ಪಂದ್ಯಾವಳಿಗಳು ನಡೆಯುತ್ತಿರುವುದು ಸ್ವಾಗತರ್ಹ. ಗದಗ ಜಿಲ್ಲೆಯಿಂದ ಅನೇಕ ರಾಷ್ಟ್ರಮಟ್ಟದ ಟೆನ್ನಿಕಾಯಿಟ್ ಕ್ರೀಡಾಪಟುಗಳು ಹೊರಹೊಮ್ಮಲೆಂದು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಎಚ್.ಕೆ. ಪಾಟೀಲ ಹೇಳಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತಿ, ಗದಗ ಜಿಲ್ಲೆಯ ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ), ಪದವಿ ಪೂರ್ವ ಕಾಲೇಜುಗಳ ಪ್ರಾಚಾರ್ಯರ ಸಂಘ, ಕರ್ನಾಟಕ ರಾಜ್ಯ ಪದವಿ ಪೂರ್ವ ಮಹಾವಿದ್ಯಾಲಯಗಳ ನೌಕರರ ಸಂಘ, ಕರ್ನಾಟಕ ರಾಜ್ಯ ಪದವಿ ಪೂರ್ವ ಕಾಲೇಜುಗಳ ಉಪನ್ಯಾಸಕರ ಸಂಘ, ದೈಹಿಕ ಶಿಕ್ಷಣ ಉಪನ್ಯಾಸಕರ ಸಂಘ, ಪ.ಪೂ.ಶಿ. ಇಲಾಖೆ ಭೋದಕೇತರ ಸಂಘ ಇವುಗಳ ಸಂಯುಕ್ತಾಶ್ರಯದಲ್ಲಿ ನಗರದ ಕೆ.ಎಚ್. ಪಾಟೀಲ ಕ್ರೀಡಾಂಗಣದಲ್ಲಿ ನೆರವೇರಿದ ಕರ್ನಾಟಕ ರಾಜ್ಯ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳ ರಾಜ್ಯಮಟ್ಟದ ಟೆನ್ನಿಕಾಯಿಟ್ ಪಂದ್ಯಾವಳಿಗಳನ್ನು ಉದ್ಘಾಟಿಸಿ ಸಚಿವರು ಮಾತನಾಡಿದರು.
ಕರ್ನಾಟಕ ಸರಕಾರದಿಂದ ಗದಗ ಜಿಲ್ಲೆಯಲ್ಲಿ ಕ್ರೀಡಾಪಟುಗಳಿಗೆ ಅನುಕೂಲವಾಗುವ ರೀತಿಯಲ್ಲಿ ಅನೇಕ ಸೌಲಭ್ಯಗಳನ್ನು ಕಲ್ಪಿಸಿಕೊಡಲಾಗಿದೆ. ರಾಷ್ಟ್ರೀಯ ಮಟ್ಟದ ಹಾಕಿ ಪಂದ್ಯಾಟಗಳನ್ನು ಆಡಿಸಬಹುದಾದಂತಹ ಮಹಾತ್ಮಗಾಂಧಿ ಹಾಕಿ ಟರ್ಫ ಗ್ರೌಂಡ್, ಕ್ರಿಕೆಟ್ ನೆಟ್ ಪ್ರಾಕ್ಟಿಸ್ ಗ್ರೌಂಡ್, ನಾಲ್ಕು ಈಜುಕೋಳಗಳು ಈಗಾಗಲೇ ಕ್ರೀಡಾಪಟುಗಳಿಗೆ ಸದ್ಭಳಕೆಯಾಗುತ್ತಿದ್ದು, ಶೀಘ್ರದಲ್ಲಿಯೇ ಕಳಸಾಪೂರ ರಸ್ತೆಯಲ್ಲಿರುವ ಒಳಾಂಗಣ ಕ್ರೀಡಾಂಗಣದಲ್ಲಿ ವುಡನ್ ಕೋರ್ಟನ್ನು ಸಿದ್ದಪಡಿಸಲಾಗುವುದು. ಕೆ.ಎಚ್. ಪಾಟೀಲ ಸ್ಟೇಡಿಯಂನಲ್ಲಿ ಪುಟ್ಬಾಲ್ ಟರ್ಫ ಮೈದಾನ ಮತ್ತು ಪೆಡ್ಲೈಟ್ ವ್ಯವಸ್ಥೆಗಳನ್ನು ಕಲ್ಪಿಸಲಾಗುವುದು ಈ ಎಲ್ಲ ಕ್ರೀಡಾ ಸೌಲಭ್ಯಗಳನ್ನು ಸದುಪಯೋಗಪಡಿಸಿಕೊಂಡು ಜಿಲ್ಲೆಯ ಕ್ರೀಡಾಪಟುಗಳು ರಾಷ್ಟ್ರಮಟ್ಟದಲ್ಲಿ ಸಾಧನೆಗೈಯಬೇಕೆಂದು ಕ್ರೀಡಾಪಟುಗಳಿಗೆ ಶುಭ ಹಾರೈಸಿದರು.
ಐತಿಹಾಸಿಕ ಗದಗ-ಬೆಟಗೇರಿ ಮತ್ತು ಲಕ್ಕುಂಡಿಯ ದೇವಾಲಯ ಮತ್ತು ಐತಿಹಾಸಿಕ ಸ್ಮಾರಕಗಳನ್ನು ಕ್ರೀಡಾಪಟುಗಳು ವೀಕ್ಷಿಸಬೇಕೆಂದು ರಾಜ್ಯ ಕಾನೂನು, ನ್ಯಾಯ, ಮಾನವ ಹಕ್ಕುಗಳು, ಸಂಸದೀಯ ವ್ಯವಹಾರಗಳು, ಶಾಸನ ರಚನೆ ಹಾಗೂ ಪ್ರವಾಸೋದ್ಯಮ ಸಚಿವರು ಹಾಗೂ ಗದಗ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಎಚ್.ಕೆ. ಪಾಟೀಲ ಹೇಳಿದರು.
ವಿಧಾನ ಪರಿಷತ್ ಶಾಸಕ ಎಸ್.ವಿ. ಸಂಕನೂರ ಅವರು ಮಾತನಾಡಿ, ಕ್ರೀಡಾಪಟುಗಳಿಗೆ ಮಾರ್ಗದರ್ಶನ ಮಾಡಲು ಸರ್ಕಾರವು ಪ್ರಾಥಮಿಕ, ಪ್ರೌಢ, ಪದವಿಪೂರ್ವ ಮತ್ತು ಪದವಿ ಕಾಲೇಜುಗಳಲ್ಲಿ ದೈಹಿಕ ಶಿಕ್ಷಕರು ಮತ್ತು ಉಪನ್ಯಾಸಕರ ನೇಮಕಾತಿ ಮಾಡಿಕೊಳ್ಳಬೇಕೆಂದು ಸರ್ಕಾರವನ್ನು ಆಗ್ರಹಿಸಿದರು.
ಇದೇ ಸಂದರ್ಭದಲ್ಲಿ ಪ.ಪೂ.ಶಿ. ಇಲಾಖೆಯಲ್ಲಿ ಸಾಧನೆಗೈದ ಹಾಗೂ ಕ್ರೀಡಾಕೂಟಕ್ಕೆ ಸಹಾಯ, ಸಹಕಾರ ಸಲ್ಲಿಸಿದ ಮೇಜರ್ ಡಾ. ಪ್ರಾ. ಬಿ.ಎಸ್. ರಾಠೋಡ, ರಾಜೇಶ ಕುಲಕರ್ಣಿ, ಪ್ರಾ. ವಿ.ಎಸ್. ದಲಾಲಿ ಹಾಗೂ ರಾಜ್ಯಮಟ್ಟದಲ್ಲಿ ಸಾಧನೆಗೈದ ಗದಗ ಜಿಲ್ಲೆಯ ಪ.ಪೂ. ಕಾಲೇಜು ವಿದ್ಯಾರ್ಥಿಗಳನ್ನು, ಅಂತರಾಷ್ಟ್ರೀಯ ಕ್ರೀಡಾಕೂಟಗಳಲ್ಲಿ ಪಾಲ್ಗೊಂಡ ವಿಕಲಚೇತನ ಕ್ರೀಡಾಪಟುಗಳನ್ನು ಮತ್ತು ಜಿಲ್ಲಾ ಹಾಗೂ ತಾಲೂಕ ಮಟ್ಟದ ಪ.ಪೂ. ಕಾಲೇಜುಗಳ ಕ್ರೀಡಾಕೂಟಗಳನ್ನು ಯಶಸ್ವಿಯಾಗಿ ಸಂಘಟಿಸಿದ ಪ್ರಾಚಾರ್ಯರನ್ನು ಸನ್ಮಾನಿಸಿ, ಅಭಿನಂದಿಸಲಾಯಿತು.
ಸಮಾರಂಭದಲ್ಲಿ ಗದಗ-ಬೆಟಗೇರಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಅಕ್ಬರಸಾಬ ಬಬರ್ಚಿ, ಜಿಲ್ಲಾಧಿಕಾರಿ ಎನ್. ಶ್ರೀಧರ, ಉಪವಿಭಾಗಾಧಿಕಾರಿ ಗಂಗಪ್ಪ ಎಂ, ಜಿಲ್ಲಾ ಪಂಚಾಯತಿ ಮಾಜಿ ಅಧ್ಯಕ್ಷ ವಾಸಣ್ಣ ಕುರುಡಗಿ, ಸಿದ್ದಲಿಂಗೇಶ ಪಾಟೀಲ, ಹಾಸನದ ಕೃಷ್ಣಪ್ಪ, ನಿರ್ಣಾಯಕರ ತಂಡದ ಮುಖ್ಯಸ್ಥರಾದ ನವೀನಕುಮಾರ ಹಾಗೂ ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಶರಣು ಗೋಗೇರಿ ಸೇರಿದಂತೆ ಮುಂತಾದವರು ಭಾಗವಹಿಸಿದ್ದರು.
ಸಂಜನಾ ತೆಂಬದಮನಿ ಹಾಗೂ ಸಂಗಡಿಗರ ನಾಡಗೀತೆಯೊಂದಿಗೆ ಸಮಾರಂಭ ಆರಂಭಗೊಂಡಿತು ಪ್ರಾಚಾರ್ಯ ಸಂಘದ ಅಧ್ಯಕ್ಷರಾದ ಎಂ.ಸಿ. ಕಟ್ಟಿಮನಿ ಸ್ವಾಗತಿಸಿದರು. ಡಾ. ದತ್ತಪ್ರಸನ್ನ ಪಾಟೀಲ, ಪ್ರೊ. ಪ್ರಿಯಾಂಕ ಬೊಮ್ಮಾಯಿನವರ ನಿರೂಪಿಸಿದರು. ಉಪನ್ಯಾಸಕರ ಸಂಘದ ಅಧ್ಯಕ್ಷರಾದ ಎಸ್.ಎಸ್. ಸೋಮಣ್ಣವರ ವಂದಿಸಿದರು.
ಪ.ಪೂ.ಶಿ. ಇಲಾಖೆಯ ಉಪನಿರ್ದೇಶಕರಾದ ಸಿದ್ದಲಿಂಗ ಮಸನಾಯಿಕ, ಹಿರಿಯ ಪ್ರಾಚಾರ್ಯರಾದ ಜಿ.ಎನ್. ಕುರ್ತಕೋಟಿ, ಗಿರಿತಮ್ಮಣ್ಣವರ, ಜೆ.ಎ. ಶಿರಸಿ, ಹಾದಿಮನಿ, ಅಶೋಕ ಅಂಗಡಿ ವೇದಿಕೆಯ ಮೇಲೆ ಉಪಸ್ಥಿತರಿದ್ದರು.
ಕರ್ನಾಟಕ ರಾಜ್ಯದ 30 ಶೈಕ್ಷಣಿಕ ಜಿಲ್ಲೆಗಳಿಂದ ಸುಮಾರು 300 ಕ್ಕೂ ಹೆಚ್ಚು ಬಾಲಕ ಮತ್ತು ಬಾಲಕಿಯರ ತಂಡದ ಕ್ರೀಡಾಪಟುಗಳು ಭಾಗವಹಿಸಿದ್ದರು. ಸಮಾರಂಭದಲ್ಲಿ ಜಿಲ್ಲೆಯ ಪ.ಪೂ. ಕಾಲೇಜುಗಳ ಪ್ರಾಚಾರ್ಯರು ಹಾಗೂ ಉಪನ್ಯಾಸಕರುಗಳಾದ ವಿ.ಎಂ. ಪಾಟೀಲ, ಬಿ.ವಿ. ಪಾಟೀಲ, ರಮಾಕಾಂತ ದೊಡ್ಡಮನಿ, ಶಶಿಧರ ಕುರಿ, ಕಿಶೋರ ನಾಗರಕಟ್ಟಿ, ಪೂರ್ಣಿಮಾ ಹೊಸಮನಿ, ವಾಯ್.ಎಸ್. ಮತ್ತೂರ, ಪ್ರಾ. ಹಾವೇರಿ, ಜಿಲ್ಲಾ ಕ್ರೀಡಾ ಸಂಚಾಲಕರಾದ ಎಚ್.ಎಸ್. ಶಿವಪ್ಪಯ್ಯನಮಠ, ವಾಯ್.ಎಸ್. ಹುನಗುಂದ, ಚೇಗರೆಡ್ಡಿ ಸೇರಿದಂತೆ ಉಪನ್ಯಾಸಕರ ಸಂಘಟನೆಗಳ ಪದಾಧಿಕಾರಿಗಳು ಹಾಗೂ ಕ್ರೀಡಾಪಟುಗಳು ಉಪಸ್ಥಿತರಿದ್ದರು.
ಹಿಂದೂಸ್ತಾನ್ ಸಮಾಚಾರ್ / lalita MP